ಶಹಾಬಾದ: ಶಿಕ್ಷಣ ಒಂದು ಪ್ರಬಲ ಅಸ್ತ್ರ.ಅದನ್ನು ಅಲಂಕರಿಸಲು ವಿದ್ಯಾರ್ಥಿಗಳು ಕಠಿಣ ಅಭ್ಯಾಸ ಮಾಡಬೇಕೆಂದು ಭಂಕೂರಿನ ಕರ್ನಾಟಕ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಿ.ವ್ಹಿ.ಅಂಗಡಿ ಹೇಳಿದರು.

ಅವರು ನಗರದ ಸಿ.ಎ.ಇಂಗಿನಶೆಟ್ಟಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ಶಿಬಿರ ಹಾಗೂ ಸ್ವಾಗತ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿದ್ಯೆಗಿಂತ ದೊಡ್ಡದ ಸಂಪತ್ತು ಯಾವುದು ಇಲ್ಲ.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧೆ ಬಹಳಷ್ಟಿದೆ. ಆದ್ದರಿಂದ ವಿದ್ಯಾರ್ಥಿಗಳಾದವರೂ ನಾನು ಯಾರು? ನಾನು ಏಕೆ ಕಾಲೇಜಿಗೆ ಬಂದಿರುವೆ ? ಈಗ ನಾನು ಏನು ಮಾಡಬೇಕೆಂಬ ಪ್ರಶ್ನೆಗಳನ್ನು ಹಾಕಿಕೊಳ್ಳುವ ಅಗತ್ಯವಿದೆ. ಇದಕ್ಕೆ ಉತ್ತರ ನೀವೇ ಕಂಡುಕೊಂಡು ಅದರಂತೆ ನಡೆದರೇ ನಿಮ್ಮ ಬದುಕು ಹಸನನಾಗುವುದರಲ್ಲಿ ಸಂಶಯವಿಲ್ಲ. ಆದರೆ ಇಂದು ಮಕ್ಕಳು ಮೊಬೈಲ್, ಟಿವಿ, ದುಶ್ಚಟಗಳಿಗೆ ಬಿದ್ದು ಹಾಳಾಗುತ್ತಿದ್ದಾರೆ. ತಂದೆ-ತಾಯಿ ಕಷ್ಟಪಟ್ಟು ಸಾಲ ಮಾಡಿ ನಿಮ್ಮನ್ನು ಕಾಲೇಜಿಗೆ ದಾಖಲಿಸುತ್ತಾರೆ.ಆದರೆ ನೀವು ಎಡವಿದರೇ ತಂದೆ-ತಾಯಿಯರ ಕನಸು ನೂಚ್ಚು ನೂರಾಗುತ್ತದೆ.ಆದ್ದರಿಂದ ಓದಿನ ಕಡೆಗೆ  ಹೆಚ್ಚಿನ ಒಲವು ತೋರಿ.ಕಠಿಣ ಪರಿಶ್ರಮ, ಸಮಯದ ಪರಿಪಾಲನೆ ಮಾಡುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಹೇಳಿದರು.

ಸಿ.ಎ.ಇಂಗಿನಶೆಟ್ಟಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಜಗೋಪಾಲ ಜೂಜಾರೆ ಮಾತನಾಡಿ, ಕಾಲೇಜಿನಲ್ಲಿ ನಿಮಗೆ ಅಭ್ಯಾಸ ಮಾಡಲು ಎಲ್ಲಾ ರಿತೀಯ ಸೌಲಭ್ಯಗಳು ನೀಡಲಾಗಿದೆ. ಅದನ್ನು ಬಳಸಿಕೊಳ್ಳುವುದು ನಿಮ್ಮ ಆದ್ಯ ಕರ್ತವ್ಯ.ಅಲ್ಲದೇ ನುರಿತ ಉಪನ್ಯಾಸಕರು ಇದ್ದಾರೆ,ಅವರು ನಿಮಗೆ ಬೇಕಾದ ಜ್ಞಾನವನ್ನು ನೀಡುತ್ತಾರೆ.ಅದನ್ನು ಪಡೆದುಕೊಳ್ಳುವ ಆಸಕ್ತಿ ವಿದ್ಯಾರ್ಥಿಗಳಲ್ಲಿ ಇರಬೇಕಷ್ಟೆ. ವಿದ್ಯಾರ್ಥಿಗಳಲ್ಲಿ ಓದುವ ಆಸಕ್ತಿ ಇರದೇ ಇದ್ದರೇ ಹರಿ ಬ್ರಹ್ಮ ಬಂದರೂ ಏನು ಮಾಡುವುದಕ್ಕೆ ಬರುವುದಿಲ್ಲ.ಆದ್ದರಿಂದ ಓದುವ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಪನ್ಯಾಸಕ ಶರಣಪ್ಪ ಹಲಕರ್ಟಿ ಮತ್ತು ಎಸ್.ಜಿ.ವರ್ಮಾ ಪ್ರೌಢಶಾಲೆಯ ಮುಖ್ಯಗುರು ಮಲ್ಲಿನಾಥ ಪಾಟೀಲ ಮಾತನಾಡಿದರು. ರಾಷ್ಟ್ರಭಾಷಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ದಿಲೀಪ ಯಲಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರಭಾಷಾ ಶಿಕ್ಷಣ ಸಮಿತಿಯ ಸದಸ್ಯರಾದ ಸುಭಾಷ ವ್ಯಾಸ್, ಅನೀಲ ಬೋರಗಾಂವಕರ್ ವೇದಿಕೆಯ ಮೇಲಿದ್ದರು.

ಈ ಸಂದರ್ಭದಲ್ಲಿ ಉಪನ್ಯಾಸಕರಾದ ರಾಜಕುಮಾರ ಬಾಸೂತ್ಕರ್, ರಮೇಶ ವಾಲಿ,ಪ್ರವೀಣ ರಾಜನ್, ಸಾಬಣ್ಣ ಗುಡುಬಾ, ಪದ್ಮಶ್ರೀ ಜೋಷಿ,

emedialine

Recent Posts

ರಾಜ್ಯಮಟ್ಟದ ಪ್ರಶಸ್ತಿಗೆ ಶಿವರಾಜ್ ಪಾಟೀಲ್ ಗೋಣಗಿ ಆಯ್ಕೆ

ಕಲಬುರಗಿ: ಶ್ರೀ ಗುರು ಕುಮಾರೇಶ್ವರ ನಾಟ್ಯ ಸಂಘ ಹಾನಗಲ್ ಇವರ 42ನೇ ವಾರ್ಷಿಕೋತ್ಸವದ ಅಂಗವಾಗಿ ಕೊಡುವ ರಾಜ್ಯಮಟ್ಟದ ಕುಮಾರಶ್ರೀ ಪ್ರಶಸ್ತಿಗೆ…

15 mins ago

ಸೀತಾರಾಮ್ ಯೆಚೂರಿ ನಿಧನ: ಧ್ವಜ ಅರ್ಧಕ್ಕಿಳಿಸಿ ಗೌರವ ಸಂತಾಪ

ಹಟ್ಟಿ: ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಸೀತಾರಾಂ ಯೆಚೂರಿ ಅವರ ನಿಧನಕ್ಕೆ ಸಿಪಿಐ(ಎಂ) ಪಕ್ಷದ…

2 hours ago

ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಕ್ಷೇತ್ರ ಬಹಳಷ್ಟು ಬೆಳವಣಿಗೆಯಾಗುತ್ತಿದೆ: ನಮೋಶಿ

ಕಲಬುರಗಿ: ಇತ್ತೀಚಿನ ವರ್ಷಗಳಲ್ಲಿ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರವು ಅಭೂತಪೂರ್ವ ಬೆಳವಣಿಗೆಗೆ ಸಾಕ್ಷಿಯಾಗಿದೆ, ವಿವಿಧ ಕೈಗಾರಿಕೆಗಳನ್ನು ಪರಿವರ್ತಿಸುತ್ತದೆ ಮತ್ತು ನಮ್ಮ ದೈನಂದಿನ…

2 hours ago

ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಬೀಳ್ಕೊಡುಗೆ ಸಮಾರಂಭ

ಕಲಬುರಗಿ : ವೈಚಾರಿಕತೆಯ ನೆಲೆಯಲ್ಲಿ ಸಾಹಿತ್ಯಕ್ಕೆ ತನ್ನದೇ ಆದ ಮೌಲ್ಯ ಮತ್ತು ಮಹತ್ವವಿದೆ. ವಿದ್ಯಾರ್ಥಿಗಳು ಕನ್ನಡ ಭಾಷಾಭಿರುಚಿ ಬೆಳೆಸಿಕೊಂಡರೆ ಸಾಹಿತ್ಯ…

2 hours ago

ಕಲಬುರಗಿ: ವಕ್ಫ್ ಬಚಾವ್ ಪ್ರತಿಭಟನಾ ಸಮಾವೇಶ ಇಂದು

ಕಲಬುರಗಿ: ಕೇಂದ್ರ ಸರಕಾರ ಜಾರಿಗೊಳ್ಳಿಸುತ್ತಿರುವ ವಕ್ಫ್ ಬಚಾವ್ ಆಂದೋಲನದ ನಿಮಿತ್ತ ಇಂದು ಹಫ್ತ್ ಗುಂಬಜ್ ದರ್ಗಾ ರಸ್ತೆಯ ನ್ಯಾಷನಲ್ ಕಾಲೇಜು…

7 hours ago

ಟ್ರಾಮಾ‌ ಕೇರ್ ನಲ್ಲಿ ನಿರಂತರ ಚಿಕಿತ್ಸೆ, : ವೈದ್ಯರ ಪರಿಶ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಶ್ಲಾಘನೆ

ಕಲಬುರಗಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸುಮಾರು 45 ದಿನಗಳ ಕಾಲ ಐಸಿಯು‌ನಲ್ಲಿ‌‌ ಚಿಕಿತ್ಸೆ ನೀಡುವುದರ ಜೊತೆಗೆ ಅಗತ್ಯವಿದ್ದ ಕ್ಲಿಷ್ಟಕರ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420