ಶಹಾಪುರ: ಸಾಹಿತ್ಯ ಕ್ಷೇತ್ರಕ್ಕೆ ಶಾಂತರಸರ ಕೊಡುಗೆ ಅಪಾರ | ದರ್ಶನಾಪುರ

ಶಹಾಪುರ : ಸಾಹಿತ್ಯ ವಿವಿಧ ಪ್ರಕಾರಗಳಾದ ಕಥೆ, ಕವನ, ಕಾದಂಬರಿ, ಗಜಲ್,ನಾಟಕ ಮುಂತಾದವುಗಳಲ್ಲಿ ಶಾಂತರಸರು ಸಾಕಷ್ಟು ಕೆಲಸ ಮಾಡಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಪುರ ಹೇಳಿದರು.

ನಗರದ ಸರಕಾರಿ ಪದವಿ ಪೂರ್ವ ಬಾಲಕರ ಕಾಲೇಜಿನ ಡಾ.ಚೆನ್ನಣ್ಣ ವಾಲಿಕಾರ ಸಭಾಂಗಣದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಹಾಗೂ ಕಲಾನಿಕೇತನ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿರುವ ನಾಡಿನ ಹಿರಿಯ ಗಜಲ್ ಗಾರುಡಿಗ ಲೇಖಕ,ದಿ.ಶಾಂತರಸರ ಜನ್ಮ ಶತಮಾನೋತ್ಸವದ ಅಂಗವಾಗಿ ವಿಶೇಷ ಉಪನ್ಯಾಸ ಮತ್ತು ಗಜಲ್ ಕೃತಿ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಿರಿಯ ಸಾಹಿತಿ ಶಾಂತರಸರ ಮೌಲ್ಯಯುತ ಕೃತಿಗಳನ್ನು ಓದಿ ಅರ್ಥೈಸಿಕೊಂಡು ಅವರ ಬದುಕಿನ ಆದರ್ಶ ತತ್ವಗಳು ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅವಡಿಸಿಕೊಂಡು ಉತ್ತಮವಾದ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಯಚೂರಿನ ಖ್ಯಾತ ಕಥೆಗಾರರಾದ ಮಹಾಂತೇಶ್ ನವಲಕಲ್ ಮಾತನಾಡಿ ಗಜಲ್ ಸಾಹಿತ್ಯ ಪುರಾತನದಾಗಿದ್ದು, ಅರೇಬಿಕ್ ಕಾವ್ಯಗಳಿಂದ ಹುಟ್ಟಿಕೊಂಡಿದೆ, ಶಾಂತರಸರ ಗಜಲ್ ನಲ್ಲಿ ಯಥೇಚ್ಛವಾಗಿ,ಆಧ್ಯಾತ್ಮಿಕ,ಪ್ರೀತಿ ಪ್ರೇಮ,ಪ್ರಣಯ,ಹಾಸ್ಯ,ವಿಡಂಬನೆಯ ಜೊತೆಗೆ ಕಾವ್ಯಾತ್ಮಕ ಅಭಿವ್ಯಕ್ತಿಯಾಗಿ ಅದರೊಳಗೆ ಕಾಣಬಹುದು ಎಂದು ನುಡಿದರು.

ನೂತನವಾಗಿ ಕಲಬುರಗಿ ರಂಗಾಯಣದ ನಿರ್ದೇಶಕರಾಗಿ ಆಯ್ಕೆಯಾದ ಡಾ.ಸುಜಾತ ಜಂಗಮಶೆಟ್ಟಿ ಮಾತನಾಡಿ ಶಾಂತರಸರ ಬದುಕಿನ ವಾಸ್ತವ ಸ್ಥಿತಿಗತಿಗಳನ್ನ,ಬರಹದ ವೈಚಾರಿಕತೆಯ ನೆಲೆಗಟ್ಟುನ್ನ, ಸರ್ಕಾರದ ತಪ್ಪುಗಳನ್ನು ಕಠೋರವಾಗಿ ಟೀಕಿಸುವ ಹಾಗೂ ಹೋರಾಟದ ಪರಿಕಲ್ಪನೆ ಕುರಿತು ಸವಿಸ್ತಾರವಾಗಿ ಮಾತನಾಡಿ,ಸೌಮ್ಯ ಸ್ವಭಾವದ ಶಾಂತರಸರ ಬದುಕು ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ ಎಂದು ಹೇಳಿದರು.

ಮುಂಬರುವ ದಿನಗಳಲ್ಲಿ ನಾಡಿನಾದ್ಯಂತ ಶಾಂತರಸರ ಗಜಲ್ ಸಾಹಿತ್ಯದ ಕುರಿತು ಮತ್ತಷ್ಟು ಬೆಳಕು ಚೆಲ್ಲುವ ನಿಟ್ಟಿನಲ್ಲಿ ಹೆಚ್ಚೆಚ್ಚು ಕಾರ್ಯಕ್ರಮಗಳು ಆಯೋಜಿಸಿ, ಸಾಹಿತ್ಯಸಕ್ತರಿಗೆ ತಿಳಿಪಡಿಸುವ ಉದ್ದೇಶದೊಂದಿಗೆ ನಾವು ನೀವೆಲ್ಲರೂ ಜೊತೆಗೂಡಿ ಮಾಡಬೇಕಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರು ಹಾಗೂ ಹಿರಿಯ ಸಾಹಿತಿ ಸಿದ್ದರಾಮ ಹೊನಕಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಸಮಾರಂಭದ ವೇದಿಕೆಯ ಮೇಲೆ, ಬಸವಪ್ರಭು ಹೆಂಬಿರಾಳ, ತಾಲೂಕು ಕಸಾಪ ಅಧ್ಯಕ್ಷ ಡಾ.ರವೀಂದ್ರನಾಥ್ ಹೊಸಮನಿ,ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಅಯ್ಯಣ್ಣ ಇನಾಮದಾರ್,ಶಿವಲೀಲಾ, ಎಂ. ಎಸ್.ಸಜ್ಜನ್ ಹನ್ನಮ್ಮ,ಶಿವಶರಣಪ್ಪ ಭಂಡಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಡಿ ಜೋನ್ ನೃತ್ಯ ಅಕಾಡೆಮಿಯ ಕಲಾವಿದರಿಂದ ನೃತ್ಯ, ಹಾಗೂ ಮಾತೃ ಛಾಯಾ ಶಾಲಾ ಮಕ್ಕಳಿಂದ ನೃತ್ಯ ಪ್ರದರ್ಶನಗೊಂಡಿತು, ಟ್ರಸ್ಟ್ ಅಧ್ಯಕ್ಷ ಬಸವರಾಜ ಶಿಣ್ಣೂರ ಪ್ರಾಸ್ತಾವಿಕ ನುಡಿಗಳನ್ನಾಡಿದರು,ಮಹಮ್ಮದ್ ಮಶಾಕ್ ನಿರೂಪಿಸಿದರು,ಗಿರೀಶ್ ಸಜ್ಜನ್ ಶೆಟ್ಟಿ ಸ್ವಾಗತಿಸಿದರು, ಹನುಮಂತರಾಯಗೌಡ ವಂದಿಸಿದರು.

emedialine

Recent Posts

ನಾಳಿನ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನ್ಯಾಯವಾದಿ ಕೋರಿಕೆ

ಕಲಬುರಗಿ: ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಸರ್ಕಾರ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಎಲ್ಲ ನ್ಯಾಯವಾದಿಗಳು ಹೆಚ್ಚಿನ…

3 hours ago

ಕೊಪ್ಪಳದಲ್ಲಿ ವಧು ವರರ ಸಮಾವೇಶ, ಪ್ರತಿಭಾ ಪುರಸ್ಕಾರ

ಕಲಬುರಗಿ: ಎಲ್ಲಾ ಜಾತಿಯನ್ನು ಗೌರವಿಸು, ನಿನ್ನ ಜಾತಿಯನ್ನು ಆರಾಧಿಸು ಎಂಬ ಭಾವನೆಯೊಂದಿಗೆ ಕೊಪ್ಪಳ ಜಿಲ್ಲಾ ಗಾಣಿಗ ಸಮಾಜ, ಡಾ.ಚೌಧರಿ ಮತ್ತು…

3 hours ago

ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆ ಮಾನವ ಸರಪಳಿ ಯಶಸ್ವಿಗೊಳಿಸಿ; ಜಗದೀಶ ಚೌರ್

ಶಹಾಬಾದ: ಇದೆ ಸೆಪ್ಟೆಂಬರ್ 15ರಂದು ಕರ್ನಾಟಕ ಸರ್ಕಾರದಿಂದ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆಯಲ್ಲಿ ಬೀದರ ಜಿಲ್ಲೆಯಿಂದ ಚಾಮರಾಜನಗರದವರೆಗೆ ರಾಜ್ಯದ್ಯಾದಂತ ಏಕಕಾಲಕ್ಕೆ ದಾಖಲೆ…

4 hours ago

ಪಡಿತರ ಚೀಟಿ ಶಾಶ್ವತವಾಗಿ ರದ್ದು ಪಡಿಸುವ ಸರಕಾರದ ವಿರುದ್ಧ ಆಕ್ರೋಶ

ಶಹಾಬಾದ: ಅನ್ನಭಾಗ್ಯಕ್ಕೆ ಕನ್ನಹಾಕುತ್ತಿರುವ ಸರಕಾರಗಳ ವಿರುದ್ಧ ಪ್ರಬಲ ಜನಾಂದೋಲನವನ್ನು ಬೆಳೆಸುವ ಅವಶ್ಯಕತೆಯಿದೆ ಎಂದು ಎಸ್‍ಯುಸಿಐ (ಸಿ) ಪಕ್ಷದ ಶಹಾಬಾದ ಸ್ಥಳೀಯ…

4 hours ago

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ

ಕಲಬುರಗಿ: ಸೈಯದ್ ಚಿಂಚೋಳಿಯಲ್ಲಿರುವ ಚಂದ್ರಶೇಖರ ಪಾಟೀಲ್ ರೇವೂರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜರುಗಿದ 2024-25 ನೇ ಸಾಲಿನ ಕಲಬುರಗಿ…

4 hours ago

ನೌಕರರ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆ

ಕಲಬುರಗಿ: ನಗರದ ಪಬ್ಲಿಕ್ ಗಾರ್ಡನನಲ್ಲಿ ಆರೋಗ್ಯ ಸಹಾಯಕರ (ಹಿರಿಯ, ಕಿರಿಯ) ನೌಕರರ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆಯನ್ನು ಮಹಾನಗರ…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420