ದೇಹ ಮತ್ತು ಮನಸ್ಸು ಸದೃಢವಾಗಲು ಕ್ರೀಡೆ ಅವಶ್ಯಕ: ಬಸವರಾಜ ಬಳೂoಡಗಿ

0
129

ಕಲಬುರಗಿ: ಕ್ರೀಡೆಗಳು ಜೀವನದಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತವೆ. ದೇಹ ಮತ್ತು ಸದೃಢವಾಗಲು ಪ್ರತಿಯೊಬ್ಬರೂ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ಕೊಡಬೇಕು.ಎಂದು ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂoಡಗಿ ಹೇಳಿದರು.

ಅವರು ರಾವೂರ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಚಿತ್ತಾಪುರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Contact Your\'s Advertisement; 9902492681

ಶಾಲೆಗಳಲ್ಲಿ ದೈಹಿಕ ಶಿಕ್ಷಕರು ಮಕ್ಕಳ ಪ್ರತಿಭೆಯನ್ನು ಗುರುತಿಸಿ, ತರಬೇತಿ ನೀಡಿ ಸ್ಪರ್ಧೆಗಳಿಗೆ ಕಳಿಸಿದ್ದೇ ಆದರೆ ಮಕ್ಕಳು ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಹೋಗಲು ಸಾಧ್ಯ. ಬಹಳ ಬೇಜಾರಿನ ಸಂಗತಿ ಎಂದರೆ ಕೆಲವು ಶಾಲೆಗಳಲ್ಲಿ ಮಕ್ಕಳು ಕ್ರೀಡೆ ಎಂದರೆ ಆಸಕ್ತಿ ವಹಿಸುತ್ತಿಲ್ಲ.ಶಾಲೆಗಳು ಮಕ್ಕಳನ್ನು ಕೇವಲ ಓದು ಬರಹಕ್ಕೆ ಸೀಮಿತಗೊಳಿಸದೇ ಅವರನ್ನು ಪತ್ಯೇತರವಾಗಿ ಕ್ರೀಡಾ ಕೂಟಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಕ್ರೀಡಾಕೂಟಗಳಲ್ಲಿ ತೀರ್ಪುಗಾರರು ನಿಸ್ಪಕ್ಷಪಾತವಾಗಿ ಆಟಗಳನ್ನು ಆಡಿಸುವ ಮೂಲಕ ನಿಜವಾದ ಪ್ರತಿಭಾವಂತ ಮಕ್ಕಳನ್ನು ಮುಂದಿನ ಹಂತಕ್ಕೆ ಕಲಿಸಬೇಕು ಎಂದು ಕಿವಿಮಾತು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕ ದೈಹಿಕ ಶಿಕ್ಷಣಾಧಿಕಾರಿ ಶಿವಶರಣಪ್ಪ ಮಂಠಾಳೆ ಕ್ರೀಡೆ ಇಲ್ಲದ ಜೀವನ ಕೀಡೆ ತಿಂದ ಹಣ್ಣಿನoತೆ. ಮೊಬೈಲ್ ಹಾಗೂ ಜoಕ್ ಫುಡ್ ಗಳಿಂದ ವಿದ್ಯಾರ್ಥಿಗಳು ದೈಹಿಕ ಶಕ್ತಿ ಇಲ್ಲದೆ ಕ್ರೀಡೆಗಳಿಂದ ದೂರ ಉಳಿಯುತ್ತಿದ್ದಾರೆ ಎಂದು ಹೇಳಿದರು. ಚಿತ್ತಾಪುರ ವಲಯ ವ್ಯಾಪ್ತಿಯ 500 ಕ್ಕೂ ಹೆಚ್ಚು ಮಕ್ಕಳು ಕ್ರೀಡಾ ಕೂಟದಲ್ಲಿ ಪಾಲ್ಗೊಂಡಿದ್ದರು. ದಿವ್ಯ ಸಾನಿದ್ಯವನ್ನು ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ವಹಿಸಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಬಿರಾದಾರ್, ಕ್ಷೇತ್ರ ಸಮನ್ವಯಧಿಕಾರಿ ಮಲ್ಲಿಕಾರ್ಜುನ್ ಸೇಡಂ, ಚನ್ನಬಸಪ್ಪ ಕೊಲ್ಲುರ, ದೇವಿದ್ರರೆಡ್ಡಿ ದುಗನೂರ, ರಾಜೇಂದ್ರ ಪ್ರಸಾದ, ವೀರಭದ್ರಪ್ಪ ಗುರುಮಿಠಕಲ್, ರಮೇಶ್ ಬೆಟಗೇರಿ ಸಂಸ್ಥೆಯ ಚೆನ್ನಣ್ಣ ಬಾಳಿ, ಡಾ. ಗುಂಡಣ್ಣ ಬಾಳಿ, ಅಣ್ಣಾರಾವ ಬಾಳಿ, ಸಿದ್ದಲಿಂಗ ಜ್ಯೋತಿ ವೇದಿಕೆ ಮೇಲಿದ್ದರು.

ಸಿದ್ದಲಿಂಗ ಬಾಳಿ ಕಾರ್ಯಕ್ರಮ ನಿರೂಪಿಸಿದರು. ಈರಣ್ಣ ಹಳ್ಳಿ ಪ್ರಾರ್ಥಿಸಿದರು, ಡಾ. ಗುಂಡಣ್ಣ ಬಾಳಿ ಸ್ವಾಗತಿಸಿದರು. ಕೆ. ಐ. ಬಡಿಗೇರ್ ವಂದಿಸಿದರು. ಮೇಘಾ ಕ್ರೀಡಾ ಪ್ರಮಾಣ ವಚನ ಬೋಧಿಸಿದಳು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here