ವಾಡಿ: ಪಟ್ಟಣದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಾಲ್ಕನೇ ಸೋಮವಾರ ಪಲ್ಲಕ್ಕಿ ಉತ್ಸವ ಭಕ್ತರ ಜೈ ಘೋಷದೊಂದಿಗೆ ವಿಜೃಂಭಣೆಯಿಂದ ಜರುಗಿತು.
ಈ ವೇಳೆ ತೊನಸನಹಳ್ಳಿ ಅಲ್ಲಮ ಪ್ರಭು ಸಂಸ್ಥಾನ ಮಠದ ಪೂಜ್ಯ ಶ್ರೀ ಡಾ ಮಲ್ಲಣ್ಣಪ್ಪ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಮಾತನಾಡಿ, ಶ್ರಾವಣ ಮಾಸದಲ್ಲಿ ಶಿವನ ಆರಾಧನೆ ಮಾಡುವುದರಿಂದ ಮೋಕ್ಷ ಪ್ರಾಪ್ತಿಯಾಗುತ್ತದೆ. ಹಾಗೂ ಶಿವ ಒಲಿದು ಬೇಡಿದನ್ನು ನೀಡುತ್ತಾನೆ ಎಂಬ ನಂಬಿಕೆ ಇದೆ ಎಂದರು.
ಆಷಾಡ ಮಾಸದ ಬಳಿಕ ಬರುವ ಹುಣ್ಣಿಮೆಯ ನಂತರ ಶ್ರವಣ ಎನ್ನವ ನಕ್ಷತ್ರ ಆಕಾಶವನ್ನು ಆಳುತ್ತದೆ. ಆದ್ದರಿಂದ ಈ ಮಾಸಕ್ಕೆ ಶ್ರಾವಣ ಮಾಸ ಎಂಬ ಹೆಸರು ಬಂದಿದೆ ಎಂದು ಹೇಳಲಾಗುತ್ತದೆ. ನಮ್ಮ ಹಿಂದೂ ಧರ್ಮದಲ್ಲಿ ಶ್ರಾವಣ ಎಂದರೆ ಆಲಿಸುವುದು ಎಂದರ್ಥ. ಹೀಗಾಗಿ ಈ ಶ್ರಾವಣ ಮಾಸದಲ್ಲಿ ಹೆಚ್ಚಾಗಿ ಪುರಾಣ ಪ್ರವಚನಗಳನ್ನು ಆಲಿಸಿ, ಶಿವನ ಕುರಿತಾದ ಪುರಾಣ,ಭಜನೆ ಹಾಗೂ ಪ್ರವಚನಗಳಲ್ಲಿ ಭಾಗಿಯಾಗಿ ಧ್ಯಾನ ಮಾಡಬೇಕು.
ಹೆಣ್ಣು ಕುಟುಂಬದ ಕಣ್ಣು ಎಂಬಂತೆ ,ಬಹಳಷ್ಟು ಜನ ಸಾಧಕರ ಅದ್ವಿತೀಯ ಸಾಧನೆಯ ಹಿಂದೆ ಒಂದಲ್ಲಾ ಒಂದು ವಿದವಾಗಿ ಅಂದರೆ ಮಾತೆಯಾಗಿ,ಪತ್ನಿ ಯಾಗಿ, ಸಹೋದರಿಯಾಗಿ,ಗೆಳತಿಯಾಗಿ ಹೆಣ್ಣಿನ ಪ್ರೇರಣೆ ಪ್ರಮುಖವಾಗಿರುವುದನ್ನು ನಾವು ಹಿಂದಿನಿಂದಲೂ ಕಾಣಬಹುದಾಗಿದೆ. ಮಹಾತ್ಮ ಗಾಂದೀಜಿ,ಛತ್ರಪತಿ ಶಿವಾಜಿ,ಸ್ವಾಮಿ ವಿವೇಕಾನಂದರು ಮುಂತಾದವರು ಅವರ ತಾಯಂದಿರಿಂದ ಪ್ರೇರಿತರಾದವರು ಆದ್ದರಿಂದ ಇಲ್ಲಿ ತಾಯಿಂದಿರ ಸಂಖ್ಯೆ ಹೆಚ್ಚಾಗಿದ್ದು ಶುಭ ಸಂಕೇತ ಮುನ್ಸೂಚನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವೀರಶೈವ ಸಮಾಜದ ಅಧ್ಯಕ್ಷ ಶರಣಗೌಡ ಚಾಮನೂರ, ಕಾರ್ಯದರ್ಶಿ ಬಸವರಾಜ ಕಿರಣಗಿ,ಭೀಮಶಾ ಜಿರೋಳ್ಳಿ, ಪರುತಪ್ಪ ಕರದಳ್ಳಿ,ಮಲ್ಲಣಗೌಡ ಗೌಡಪ್ಪನೂರ,ಚಂದ್ರಶೇಖರ ಪಾಟೀಲ,ಅಣ್ಣರಾವ ಪಸಾರ,
ವೀರಣ್ಣ ಯಾರಿ, ರಾಜಶೇಖರ ದೂಪದ,ಕಾಶಿನಾಥ ಅರಳಗುಂಡಗಿ,ಶಿವಪ್ಪ ಮುಂಡರಗಿ,ಗುರುಮೂರ್ತಿ ಸ್ವಾಮಿ,ಸತೀಶ್ ಸಾವಳಗಿ, ಅರುಣ ಪಾಟೀಲ,ವಿಶ್ವನಾಥ ಕಲ್ಲಶೆಟ್ಟಿ, ದತ್ತಾತ್ರೇಯ ಗೌಡಗಾಂವ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಸರ್ಕಾರ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಎಲ್ಲ ನ್ಯಾಯವಾದಿಗಳು ಹೆಚ್ಚಿನ…
ಕಲಬುರಗಿ: ಎಲ್ಲಾ ಜಾತಿಯನ್ನು ಗೌರವಿಸು, ನಿನ್ನ ಜಾತಿಯನ್ನು ಆರಾಧಿಸು ಎಂಬ ಭಾವನೆಯೊಂದಿಗೆ ಕೊಪ್ಪಳ ಜಿಲ್ಲಾ ಗಾಣಿಗ ಸಮಾಜ, ಡಾ.ಚೌಧರಿ ಮತ್ತು…
ಶಹಾಬಾದ: ಇದೆ ಸೆಪ್ಟೆಂಬರ್ 15ರಂದು ಕರ್ನಾಟಕ ಸರ್ಕಾರದಿಂದ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆಯಲ್ಲಿ ಬೀದರ ಜಿಲ್ಲೆಯಿಂದ ಚಾಮರಾಜನಗರದವರೆಗೆ ರಾಜ್ಯದ್ಯಾದಂತ ಏಕಕಾಲಕ್ಕೆ ದಾಖಲೆ…
ಶಹಾಬಾದ: ಅನ್ನಭಾಗ್ಯಕ್ಕೆ ಕನ್ನಹಾಕುತ್ತಿರುವ ಸರಕಾರಗಳ ವಿರುದ್ಧ ಪ್ರಬಲ ಜನಾಂದೋಲನವನ್ನು ಬೆಳೆಸುವ ಅವಶ್ಯಕತೆಯಿದೆ ಎಂದು ಎಸ್ಯುಸಿಐ (ಸಿ) ಪಕ್ಷದ ಶಹಾಬಾದ ಸ್ಥಳೀಯ…
ಕಲಬುರಗಿ: ಸೈಯದ್ ಚಿಂಚೋಳಿಯಲ್ಲಿರುವ ಚಂದ್ರಶೇಖರ ಪಾಟೀಲ್ ರೇವೂರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜರುಗಿದ 2024-25 ನೇ ಸಾಲಿನ ಕಲಬುರಗಿ…
ಕಲಬುರಗಿ: ನಗರದ ಪಬ್ಲಿಕ್ ಗಾರ್ಡನನಲ್ಲಿ ಆರೋಗ್ಯ ಸಹಾಯಕರ (ಹಿರಿಯ, ಕಿರಿಯ) ನೌಕರರ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆಯನ್ನು ಮಹಾನಗರ…