ಹಬ್ಬ ಹರಿದಿನಗಳು ಮನುಷ್ಯನಲ್ಲಿ ಸಂಸ್ಕೃತಿ ಬಿತ್ತಿ ಸಹಬಾಳ್ವೆ ಮೂಡಸುತ್ತವೆ: ಪೂಜ್ಯ ಶ್ರೀ ಡಾ.ರೇವಣಸಿದ್ದ ಶಿವಾಚಾರ್ಯರು

ಕಲಬುರಗಿ: ಮನುಷ್ಯನ ಬದುಕಿಗೆ ಉತ್ಸವ, ಹಬ್ಬ ಹರಿದಿನಗಳು ಅವಶ್ಯವಾಗಿದ್ದು, ಮನುಷ್ಯನಲ್ಲಿ ಸಂಸ್ಕೃತಿ ಬಿತ್ತಿ ಸಹಬಾಳ್ವೆ ಮೂಡಿಸಿ ಎಲ್ಲರೂ ಒಂದಾಗಿ ಬದುಕುವುದನ್ನು ಹಬ್ಬಗಳು ಕಲಿಸಿಕೊಡುತ್ತವೆ ಎಂದು ಶ್ರೀನಿವಾಸ ಸರಡಗಿಯ ಪೂಜ್ಯ ಶ್ರೀ ಡಾ.ರೇವಣಸಿದ್ದ ಶಿವಾಚಾರ್ಯರು ನುಡಿದರು.

ರಾಜಾಪೂರ ಬಡಾವಣೆಯ ಪ್ರಶಾಂತ ನಗರ (ಎ) ದಲ್ಲಿರುವ ೧೨ ಜೋರ್ತಿಲಿಂಗ ದೇವಸ್ಥಾನದಲ್ಲಿ ದಸರಾ ಮಹೋತ್ಸವ ನಿಮಿತ್ಯವಾಗಿ ಆಯೋಜಿಸಿದ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು ಮನುಷ್ಯನಲ್ಲಿ ಇಂದು ಸ್ವಾರ್ಥ ಹೆಚ್ಚಾಗಿ ಎಲ್ಲೆಲ್ಲೂ ಅಶಾಂತಿ ತಾಂಡವವಾಡುತ್ತಿದ್ದು, ಇದನ್ನು ಹೋಗಲಾಡಿಸಿ, ದಯೆ, ಕರುಣೆ, ನೆಮ್ಮದಿಯ ಬದುಕಿಗಾಗಿ ಆಚರಣೆಗಳು ಅವಶ್ಯವಾಗಿ ಅನುಕರಣೆ ಮಾಡಬೇಕಾಗಿದೆ ಎಂದು ನುಡಿದರು.

ಸಮಾರಂಭ ಉದ್ಘಾಟಿಸಿದ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ದತ್ತಾತ್ರೇಯ.ಸಿ. ಪಾಟೀಲ ರೇವೂರ ರವರು ಮಾತನಾಡಿ ದಸರಾ ಹಬ್ಬ ಅತ್ಯಂತ ಮಹತ್ವದ ಹಬ್ಬವಾಗಿದ್ದು ಎಲ್ಲರೂ ಒಂದೆ ಕುಟುಂಬದವರಂತೆ ಸಂತೋಷದಿಂದ ಹಬ್ಬ ಮಾಡುವುದು ಬಹು ವಿಶೇಷವಾಗಿದೆ ಎಂದರು. ಯುವ ಜನತೆಗೆ ತಮ್ಮ ಪುರಾತನ ಸಂಸ್ಕೃತಿಯ ಹಬ್ಬಗಳ ಮಹತ್ವ ತಿಳಿಸಿಕೊಡುವುದು ಅಗತ್ಯವಾಗಿದೆ ಎಂದು ಹೇಳಿದರು.

ವೇದಿಕೆಯ ಮೇಲೆ ಮಹಾನಗರ ಪಾಲಿಕೆ ಸದಸ್ಯರಾದ ವೀರಣ್ಣ ಹೊನ್ನಳ್ಳಿ, ಮುಖಂಡರಾದ ಶಿವಾನಂದ ಹುಲಿ, ವೀರಶೈವ ಮಹಾಸಭೆಯ ಕಾರ್ಯಕಾರಿ ಸಮಿತಿ ಸದಸ್ಯರಾದ ನಾಗಲಿಂಗಯ್ಯ ಮಠಪತಿ, ಎಂ.ಎಸ್.ಪಾಟೀಲ ನರಿಬೋಳ ಉಪಸ್ಥಿತರಿದ್ದರು.

ದೇವಸ್ಥಾನ ಟ್ರಸ್ಟ್ ಕಮೀಟಿ ಅಧ್ಯಕ್ಷರಾದ ರಾಜಶೇಖರ ಗೂಗಲ್ ಅದ್ಯಕ್ಷತೆ ವಹಿಸಿದ್ದರು. ಹಬ್ಬದ ನಿಮಿತ್ಯವಾಗಿ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮನ ವಿತರಿಸಲಾಯಿತು. ಮಹಿಳೆಯರಿಂದ ದಾಂಡಿಯಾ, ಕೋಲಾಟ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ದೇವಸ್ಥಾನದ ಪ್ರಧಾನ ಅರ್ಚಕರಾದ ಪುರೋಹಿತ ರತ್ನ ಶ್ರೀ ಮಹೇಶ್ವರ ಶಾಸ್ತ್ರಿಗಳು ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಸುರೇಶ ಜಾಧವ ಸ್ವಾಗತಿಸಿದರು. ಶ್ರೀಮತಿ ನೀಲಾ ಪಾಟೀಲ ನಿರೂಪಿಸಿದರು, ಕಾರ್ಯಕ್ರಮ ಆಯೋಜಕರಾದ ಶ್ರೀಮತಿ ಪುಷ್ಪಾ ವಿಶ್ವನಾಥ ಅವಂಟಿ ದೇವಸ್ಥಾನ ಟ್ರಸ್ಟ್‌ನ ಅರವಿಂದ ಆಲಗೂಡ, ಹುಚ್ಚಪ್ಪ ತಳಕೇರಿ, ಶರಣಪ್ಪ ಕುಂಬಾರ, ಶಿವಲಿಂಗಪ್ಪ ಜಾಕನಳ್ಳಿ, ರಾಜು ಉಪ್ಪಲ್ಲಿ ಸೇರಿದಂತೆ ಬಡಾವಣೆಯ ಮಹಿಳೆಯರು, ಮಕ್ಕಳು ನಾಗರಿಕರು ಭಾಗವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420