ಕಲಬುರಗಿ, ಸೆ.4 – ಹಿರಿಯ ಕತೆಗಾರ ಮಹಾಂತೇಶ್ ನವಲಕಲ್ ಅವರ ಹೊಸ ಕಥಾ ಸಂಕಲನ ಬುದ್ಧ ಗಂಟೆಯ ಸದ್ದು’ ಇದೆ ಸೆಪ್ಟಂಬರ್ 8 ರಂದು ಬೆಳಿಗ್ಗೆ 11 ಕ್ಕೆ ನಗರದ ಕನ್ನಡ ಸಾಹಿತ್ಯ ಪರಿಷತ್ ಅವರಣದಲ್ಲಿರುವ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮುದಾಯ ಅಧ್ಯಕ್ಷ ಡಾ.ದತ್ತಾತ್ರೇಯ ಇಕ್ಕಳಕಿ ಹಾಗು ಕಾರ್ಯದರ್ಶಿ ಡಾ.ಶ್ರೀಶೈಲ ಘೂಳಿ ತಿಳಿಸಿದ್ದಾರೆ.
ಸಮುದಾಯ ಕಲಬುರ್ಗಿ ಮತ್ತು ಪಲ್ಲವ ಪ್ರಕಾಶನ ಸಹಯೋಗದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಲೇಜು ಶಿಕ್ಷಣ ಇಲಾಕೆಯ ಉಪ ನಿರ್ದೇಶಕರಾದ ಶಿವಶರಣಪ್ಪ ಮುಳೆಗಾಂವ ಪುಸ್ತಕ ಬಿಡುಗಡೆ ಮಾಡುವರು. ಸಂಸ್ಕøತಿ ಚಿಂತಕ ಪ್ರೊ.ಆರ್.ಕೆ.ಹುಡಗಿ ಅಧ್ಯಕ್ಷತೆ ವಹಿಸುವರು.
ಕೇಂದ್ರೀಯ ವಿವಿ ಕನ್ನಡ ಪ್ರಾಧ್ಯಾಪಕ, ಲೇಖಕ ಡಾ.ವಿಕ್ರಮ ವಿಸಾಜಿ ಪುಸ್ತಕ ಕುರಿತು ಮಾತನಾಡುವರು. ಬಿ.ಆರ್.ಬುದ್ಧಾ, ಡಾ.ಅಪ್ಪಗೆರೆ ಸೋಮಶೇಖರ, ಡಾ.ಅಶೋಕ ಶೆಟಗಾರ, ರಮೇಶ ಮಾಡಿಯಾಳಕರ್ ಮುಖ್ಯ ಅತಿಥಿಗಳಾಗಿರುವರು. ಡಾ.ಮೀನಾಕ್ಷಿ ಬಾಳಿ ಪ್ರಾಸ್ತಾವಿಕ ಮಾತನಾಡುವರು. ಡಾ.ಪಲ್ಲವ ವೆಂಕಟೇಶ ಹಾಗೂ ಮಹಾಂತೇಶ ನವಲಕಲ್ ಉಪಸ್ಥಿತಿರುವರು.
ಲೇಖಕ ಮಹಿಪಾಲರೆಡ್ಡಿ ಮುನ್ನೂರ್ ನುಡಿಸಾರಥ್ಯವಿದ್ದು, ಸಂದೀಪ ಮಾಳಗೆ, ಕಲ್ಯಾಣಿ ಬಜಂತ್ರಿ, ಮೇಘಾ ಚಿಚಕೋಟಿ ಅವರಿಂದ ಜನಪದ ಹಾಡುಗಳ ಪ್ರಸ್ತುತಿ ಇದೆ. ಡಾ.ಪ್ರಭು ಖಾನಾಪುರೆ, ಬಸಣ್ಣ ಸಿಂಗೆ, ಮಾರುತಿ ಗೋಖಲೆ, ಡಾ.ಅರುಣ ಜೋಳದಕೂಡ್ಲಿಗಿ, ರವೀಂದ್ರ ಶಾಬಾದಿ ಸೇರಿದಂತೆ ಅನೇಕರು ಭಾಗವಹಿಸುವರು ಎಂದು ಸಮುದಾಯ ಅಧ್ಯಕ್ಷ ಡಾ.ದತ್ತಾತ್ರೇಯ ಇಕ್ಕಳಕಿ ಹಾಗು ಕಾರ್ಯದರ್ಶಿ ಡಾ.ಶ್ರೀಶೈಲ ಘೂಳಿ ತಿಳಿಸಿದ್ದಾರೆ.
ಕಲಬುರಗಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (ವ್ಯವಸಾಯ ಸೇವಾ ಸಹಕಾರ ಸಂಘಗಳು) ಡಿ.ಸಿ.ಸಿ ಬ್ಯಾಂಕ್ನ ತಾಯಿ ಬೇರು. ಗ್ರಾಮೀಣ…
ಕಲಬುರಗಿ: ನಗರದ ಪ್ರತಿಷ್ಠಿತ ಮನ್ನೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ವತಿಯಿಂದ ಕಲ್ಯಾಣ ಕರ್ನಾಟಕದ ಭಾಗದ ಜನರಿಗೆ ಆರೋಗ್ಯ, ಕ್ಷೇಮ, ಯೋಗ, ಸದೃಢತೆಯ…
ಕಲಬುರಗಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಡಾ. ಎಂ.ಎಂ. ಕಲಬುರಗಿ ವಿಚಾರ ವೇದಿಕೆಯ ಸಹಯೋಗದಲ್ಲಿ ನಗರದ ಕನ್ನಡ ಭವನದಲ್ಲಿ…
ಕಲಬುರಗಿ: ಅಂಗವಿಕಲ ಕಲ್ಯಾಣ ಇಲಾಖೆಯಿಂದ ಅಂಗವಿಕಲರು ಮತ್ತು ವಿಶೇಷ ಚೇತನರಿಗೆ ಸರಕಾರದದ ಸೌಲಭ್ಯಗಳು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಜಿಲ್ಲಾ…
ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ…
ಶಹಾಪುರ : ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದು,ಆದ್ದರಿಂದ ಪ್ರತಿಯೊಬ್ಬ ಮಹಿಳೆಯರು ತಮ್ಮ ಆರೋಗ್ಯವನ್ನು ಅಪಾಡಿಕೊಳ್ಳುವುದರ ಜೊತೆಗೆ ಜೀವನ…