ಕಲಬುರಗಿ: ಜಿಲ್ಲಾ ಬಣಗಾರ ಸಮಾಜ ಹಾಗೂ ಶ್ರೀ ಜಡೆ ಶಂಕರಲಿಂಗ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಶ್ರೀ ಗುಡ್ಡಾಪುರ ವರದಾನೇಶ್ವರಿ ಪುರಾಣ ಪ್ರವಚನ ಮಹಾಮಂಗಳ, ಪ್ರತಿಭಾ ಪುರಸ್ಕಾರ ವಿತರಣೆ, ಪಲ್ಲಕ್ಕಿ ಮೆರವಣಿಗೆ ಸಮಾರಂಭವನ್ನು ಸೆ.೮ ಹಾಗೂ ೯ರಂದು ಮಕ್ತಂಪುರದ ಶ್ರೀ ಜಡೆ ಶಂಕರಲಿಂಗ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಸೆ.೮ರಂದು ಬೆಳಿಗ್ಗೆ ೧೧.೩೦ಕ್ಕೆ ನಡೆಯುವ ಪುರಾಣ ಮಹಾಮಂಗಲ, ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭದ ಸಾನಿಧ್ಯವನ್ನು ಮಕ್ತಂಪುರ ಬೃಹ್ನಮಠದ ಶ್ರೀ ಶಿವಾನಂದ ಮಹಾಸ್ವಾಮಿಗಳು ವಹಿಸುವರು. ಗದ್ದುಗೆ ಮಠದ ಶ್ರೀ ಚರಲಿಂಗ ಮಹಾಸ್ವಾಮಿಗಳು ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕ ಅಲ್ಲಮಪ್ರಭು ಪಾಟೀಲ್, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಅತಿಥಿಗಳಾಗಿ ಪಾಲಿಕೆ ಸದಸ್ಯ ವಿಜಯಕುಮಾರ ಸೇವಲಾನಿ, ಮಾಜಿ ಸದಸ್ಯ ಬಸವರಾಜ ನಾಶಿ ಆಗಮಿಸುವರು. ಅಧ್ಯಕ್ಷತೆಯನ್ನು ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಆನಂದ ದಂಡೋತಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಧನಶೆಟ್ಟಿ, ಸಮಾಜದ ಅಧ್ಯಕ್ಷ ಶಾಂತಪ್ಪ ಘೂಳಿ, ಪ್ರಧಾನ ಕಾರ್ಯದರ್ಶಿ ಸುರೇಶ ಉಡಚಣ ವಹಿಸುವರು.
ಸೆ.೯ರಂದು ಮಧ್ಯಾಹ್ನ ೨ರಿಂದ ಸಂಜೆ ೭ ಗಂಟೆವರೆಗೆ ದೇವಸ್ಥಾನದಿಂದ ಭಾಜಾ ಭಜಂತ್ರಿಯೊಂದಿಗೆ ಅದ್ಧೂರಿಯಾಗಿ ದೇವರ ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಪಾಲ್ಗೊಳ್ಳಬೇಕೆಂದು ಟ್ರಸ್ಟ್ನ ಅಧ್ಯಕ್ಷ ಆನಂದ ದಂಡೋತಿ, ಸಮಾಜದ ಅಧ್ಯಕ್ಷ ಶಾಂತಪ್ಪ ಘೂಳಿ ಮನವಿ ಮಾಡಿದ್ದಾರೆ.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…