ಜನರ ಸಮಸ್ಯೆ ಬಗೆಹರಿಸಲು ಬಾಗಿಲಿಗೆ ಬಂದಿದೆ ಜನಸ್ಪಂದನ ಸಭೆ: ಚೌರ್

ಶಹಾಬಾದ: ಪಹಣಿ ತಿದ್ದುಪಡಿ, ಪಿಂಚಣಿ ಅದಾಲತ್‍ನಂತಹ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳೇ ಜನರ ಮಧ್ಯೆ ಆಗಮಿಸಿ ಸಮಸ್ಯೆ ಪರಿಹರಿಸುವ ಉದ್ದೇಶವೇ ಕಂದಾಯ ಅದಾಲತ್, ಜನಸ್ಪಂದನ ಸಭೆ ಎಂದು ತಹಸೀಲ್ದಾರ್ ಜಗದೀಶ ಚೌರ್ ತಿಳಿಸಿದರು.

ತಾಲ್ಲೂಕಿನ ಮರತೂರ ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮ, ಕಂದಾಯ ಅದಾಲತ್, ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಹಣಿ ತಿದ್ದುಪಡಿ, ಪಿಂಚಣಿ ಅದಾಲತ್‍ನ ಸಾರ್ವಜನಿಕರು ಹಲವು ಬಾರಿ ಅರ್ಜಿ ಸಲ್ಲಿಸಿದರೂ ಸಮಸ್ಯೆ ಬಗೆಹರಿದಿರುವುದಿಲ್ಲ. ಅಂತಹವರ ಬ್ಯಾಂಕ್ ಅಕೌಂಟ್, ಆಧಾರ್ ಅಪಡೇಟ್ ಆಗಿರುವುದಿಲ್ಲ. ಹಾಗಾಗಿ ಮಾಸಾಶನ ನಿಂತಿರುತ್ತದೆ. ಇಂತಹ ಪ್ರಕರಣಗಳನ್ನು ಪರಿಶೀಲಿಸಿ ಹಾಗೂ ಹೊಸ ಅರ್ಜಿಗಳನ್ನು ಪಡೆದು ಇದುವರೆವಿಗೂ ಯಾವುದೇ ಸೌಲಭ್ಯವನ್ನು ಪಡೆಯದೆ ಇರುವ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಅಲ್ಲದೇ ಮಳೆಗಾಲ ಇರುವುದರಿಂದ ನಿಮ್ಮ ಜಾನುವಾರುಗಳಿಗೆ ಕಾಲುಬಾಯಿ ರೋಗ, ಚರ್ಮಗಂಟು ರೋಗ ಕಂಡು ಬರುವ ಸಾಧ್ಯತೆ ಇರುತ್ತವೆ.ಆದ್ದರಿಂದ ಸರಿಯಾದ ಸಮಯಕ್ಕೆ ಲಸಿಕೆ ಹಾಕಿಸಿ. ಅಲ್ಲದೇ ನಿಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ.ಮಕ್ಕಳಿಗೆ ಪ್ರತಿದಿನ ಶಾಲೆಗೆ ಕಳಿಸಿ.ನಿಮ್ಮ ಯಾವುದೇ ಸಮಸ್ಯೆಗಳಿದ್ದರೂ ತಿಳಿಸಿ.ಇಲ್ಲೇ ಬಗೆಹರಿಸುವ ಸಮಸ್ಯೆಗಳಿದ್ದರೇ ಸ್ಥಳದಲ್ಲಿಯೇ ಪರಿಹಾರ ನೀಡಲಾಗುವುದು.ಇಲ್ಲದಿದ್ದರೇ ಸಂಬಂಧಪಟ್ಟ ಇಲಾಖೆಗೆ ಕಳುಹಿಸಿ ಸಾಧ್ಯವಾದಷ್ಟು ಬೇಗನೆ ಪರಿಹರಿಸಲಾಗುವುದೆಂದು ಹೇಳಿದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರವಿ ನರೋಣಿ ಮಾತನಾಡಿ, ಗ್ರಾಮದಲ್ಲಿ ಹಂದಿಗಳ ಕಾಟ ಹೆಚ್ಚಾಗಿದೆ.ಇದರಿಂದ ಬಹಳ ಸಮಸ್ಯೆಯಾಗುತ್ತಿದ್ದು, ಹಂದಿಗಳನ್ನು ಸ್ಥಳಾಂತರಿಸಬೇಕು.ಲೈನ್‍ಮ್ಯಾನ ಸಮಸ್ಯೆಯಿದೆ.ಮರತೂರ ಗ್ರಾಮಕ್ಕೆ ಇನ್ನೂ ಬಸ್ ಸೌಕರ್ಯ ಒದಗಿಸಬೇಕೆಂದು ಮನವಿ ಮಾಡಿದರು.

ಜನರ ಸಮಸ್ಯೆ ಆಲಿಸಿ ಪೂರ್ಣ ಪ್ರಮಾಣದಲ್ಲಿ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ತಹಸೀಲ್ದಾರ ತಿಳಿಸಿದರು.
ಮರತೂರ ಗ್ರಾಪಂ ಅಧ್ಯಕ್ಷೆ ಮಧಿನಾಬೇಗಂ, ಗ್ರೇಡ್-2 ತಹಸೀಲ್ದಾರ ಗುರುರಾಜ ಸಂಗಾವಿ, ಸಹಾಯಕ ಕೃಷಿ ಅಧಿಕಾರಿ ರವೀಂದ್ರ, ಕೆಇಬಿ ಇಲಾಖೆಯ ಸಿದ್ದು ಹಚನಾಳ,ಪಶು ವೈಧ್ಯರಾದ ಮಾರುತಿ ನಾಯಕ, ಸಿಡಿಪಿಓ ಸುನೀತಾ,ಉಪತಹಸೀಲ್ದಾರ ರಾಜೇಶ ದೇವಣಿ,ಪಿಡಿಓ ಭಗವಂತರಾಯ ಸೇರಿದಂತೆ ಗ್ರಾಮದ ಅನೇಕ ಜನರು ಇದ್ದರು.

emedialine

Recent Posts

ಪ್ರಾಧ್ಯಾಪಕ ಹೋರಾಟಗಾರ ಅನಾದಿ ಚಂದ್ರಶೇಖರ್ ಗೆ ಸನ್ಮಾನ

ಕಲಬುರಗಿ: ಈ ಭಾಗದ ನೇಕಾರ ಸಮುದಾಯಕ್ಕೆ ಉದ್ಯೋಗದಲ್ಲಿ ಮೀಸಲಾತಿ ಪಡೆದು ಕೊಳ್ಳಲು ದಿ. ಎಲ್.ಜಿ.ಹಾವನೂರ ರ ತತ್ವದ ಮೇಲೆ ಹೋರಾಟ…

6 hours ago

ಸರಕಾರಿ ನೌಕರರ ಗೃಹ ನಿರ್ಮಾಣ ಸಂಘದ 51ನೇ ವಾರ್ಷಿಕ ಸಭೆ

ಕಲಬುರಗಿ: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ರಾಜ್ಯ ಸರಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ 51ನೇ ವಾರ್ಷಿಕ ಮಹಾಸಭೆಯನ್ನು…

7 hours ago

ಕರಾಟೆ ಚಾಂಪಿಯನ್ಶಿಪ್: ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಅಖಿಲ ಕರ್ನಾಟಕ ಸ್ಪೋಟ್ರ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ 15ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ ಬೆಂಗಳೂರಿನ ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ…

7 hours ago

ನೆಲ-ಜಲ ಪ್ರೀತಿಸುವ ಸಂಸ್ಕøತಿ ಭಾಷೆಯಲ್ಲಿದೆ: ಅಕಾಡೆಮಿ ಅಧ್ಯಕ್ಷೆ ಆಯೇಷಾ ಅಭಿಮತ

ಕಲಬುರಗಿ: ಕಸಾಪದಿಂದ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಕಲಬುರಗಿ: ನಾಡಿನ ನೆಲ ಜಲ ಪ್ರೀತಿಸುವ ಸಂಸ್ಕøತಿ ನಮ್ಮ ಮಾತೃ ಭಾಷೆಯಲ್ಲಿದೆ…

7 hours ago

ಇಂದು ಶ್ರಮಿಸಿದರೆ ಮುಂದಿನ ಸುಖ ಜೀವನಕ್ಕೆ ದಾರಿದೀಪ

ಕಲಬುರಗಿ: ಇಂದಿನ ಮಕ್ಕಳು ಬಹಳ ಕಷ್ಟಪಟ್ಟು ಇಂತಹ ಸ್ಪರ್ಧಾ ಯುಗದಲ್ಲಿ ಶ್ರಮ ಪಟ್ಟು ಓದಿದರೆ ಮುಂದಿನ ನಿಮ್ಮ ಜೀವನಕ್ಕೆ ದಾರಿದೀಪವಾಗುವುದೆಂದು…

7 hours ago

ಯಾದಗಿರಿ: ಪ್ರಜಾಪ್ರಭುತ್ವ ದಿನ ಆಚರಣೆ

ಯಾದಗಿರಿ:ಪ್ರಜಾಪ್ರಭುತ್ವ ದಿನ ಆಚರಣೆ ಕಾರ್ಯಕ್ರಮ ವಡಗೇರ ತಾಲೂಕಿನ ಅಜೀಮ್ ಪ್ರೇಮ್ ಜಿ ಶಾಲೆಯ ಹತ್ತಿರ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು.…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420