ಚಿತ್ತಾಪುರ: ತಾಲೂಕಿನ ಅಲ್ಲೂರ(ಕೆ) ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಬೆನಕನ ಅಮಾವಾಸ್ಯೆ ನಿಮಿತ್ತ ಗ್ರಾಮದಲ್ಲಿ 101 ಎತ್ತುಗಳ ವಿಶೇಷ ಪೂಜೆ ನಡೆಯಿತು.
ಸುಮಾರು 200 ವರ್ಷಗಳ ಹಿಂದೆ ಗ್ರಾಮದಲ್ಲಿ ಮನುಷ್ಯರು ಮತ್ತು ಎತ್ತುಗಳು ಅನಾರೋಗ್ಯದಿಂದ ನರಳುತ್ತಿದ್ದರು. ಆಗ ದೇವರ ಮೊರೆ ಹೊದಾಗ 101 ಎತ್ತುಗಳ ಪೂಜೆಯನ್ನು ಮಾಡಬೇಕೆಂದು ಹೇಳಿದ ಕಾರಣ ಪ್ರತಿ ವರ್ಷ 101 ಎತ್ತುಗಳ ಪೂಜೆಯನ್ನು ಮಾಡಿದ್ದರಿಂದ ಎತ್ತುಗಳು ಮತ್ತು ಮನುಷ್ಯರು ಆರೋಗ್ಯವಾಗಿರುವ ನಂಬಿಕೆಯ ಮೇಲೆ ಇಂದಿಗೂ ಅಲ್ಲೂರ(ಕೆ) ಗ್ರಾಮದಲ್ಲಿ ಎತ್ತುಗಳ ಪೂಜೆಯನ್ನು ಮಾಡಲಾಗುತ್ತಿದೆ ಎನ್ನುತ್ತಾರೆ ಗ್ರಾಮಸ್ಥರು.
ಗ್ರಾಮದ ಹಿರಿಯರಾದ ಮಹಾಂತೇಯ ಸ್ವಾಮಿ, ಶಿವಾನಂದಯ್ಯ ಸ್ವಾಮಿ, ಮಹೇಶ ಗೌಡ ದಳಪತಿ, ರವಿಗೌಡ, ರವಿ ಠಾಣಗುಂದಿ, ಶರಣಗೌಡ ಪೊಲೀಸ್ ಪಾಟೀಲ್ ಸೇರಿದಂತೆ ಹಲವರು ಮಹಾಂತೇಶ್ವರ ಮಠದ ಗದ್ದುಗೆಗೆ ಪೂಜೆಯನ್ನು ಸಲ್ಲಿಸಿದ ನಂತರ ಹಲುಗೆ, ಬಾಜಿ ನುಡಿಸುತ್ತಾ ಮಕ್ಕಳ ಕೋಲಾಟದ ಮೂಲಕ ಗ್ರಾಮದಲ್ಲಿ ಮೆರವಣೆಗೆ ನಡೆಸಿ ಗಂಗಮ್ಮ ತಾಯಿಗೆ ಪೂಜೆ ಸಲ್ಲಿಸಿದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…