ಚಾಲನೆ ಸುರಕ್ಷಿತವಾಗಿದ್ದರೆ ಜೀವನವು ಸುರಕ್ಷಿತ: ಪ್ರಶಾಂತ ಸುರುಪುರಕರ್

ಶಹಪುರ : ಚಾಲಕರು ಬಸ್ ಚಾಲನೆ ಮಾಡುವಾಗ ಮೈ ಮರೆತರೆ ಅಪಘಾತ ಆಗುವ ಸಂಭವ ಇರುತ್ತದೆ,ಆದ್ದರಿಂದ ಇಂತಹ ಸಮಯದಲ್ಲಿ ಅಪಘಾತಗಳು ತಪ್ಪಿಸಬೇಕೆಂದರೆ ಚಾಲಕರು ಏಕಾಗ್ರತೆಯಿಂದ ವಾಹನ ಚಾಲನೆ ಮಾಡುವುದು ಬಹಳ ಮುಖ್ಯ,ಚಾಲನೆ ಸುರಕ್ಷಿತವಾಗಿದ್ದರೆ ಜೀವನವು ಸುರಕ್ಷಿತವಾಗಿರುತ್ತದೆ ಎಂಬುದನ್ನು ಪ್ರತಿಯೊಬ್ಬ ಚಾಲಕರು ಅರ್ಥೈಸಿಕೊಳ್ಳಬೇಕೆಂದು ಯಾದಗಿರಿಯ ವಿಭಾಗೀಯ ತಾಂತ್ರಿಕ ಶಿಲ್ಪಿ ಪ್ರಶಾಂತ್ ಸುರುಪುರಕರ್ ಹೇಳಿದರು.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಶಹಪುರ ಬಸ್ ಘಟಕದ ಸಂಚಾರಿ ಸಭಾ ವಾಹನದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಹಾಗೂ ಸ್ವಚ್ಛತಾ ಪಕವಾಡ ಕಾರ್ಯಕ್ರಮದಲ್ಲಿ ಚಾಲಕರಿಗೆ ತರಬೇತಿ ಮತ್ತು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಚಾಲನೆ ಸಮಯದಲ್ಲಿ ವೇಗದ ಮಿತಿ ಕಡಿಮೆಯಾದಾಗ ಅಪಘಾತಗಳು ಪ್ರಮಾಣ ಕಡಿಮೆಯಾಗುತ್ತವೆ. ಮದ್ಯಪಾನ ಮಾಡಿ ಚಾಲನೆ ಮಾಡಬಾರದು ಎಂದು ಎಚ್ಚರಿಕೆ ನೀಡಿದರು,ಅಲ್ಲದೆ ನಿಮ್ಮನ್ನು ನಂಬಿಕೊಂಡ ಕುಟುಂಬ ನಿಮ್ಮೊಂದಿಗೆ ಇರುತ್ತದೆ ಎಂಬುದನ್ನು ಒಮ್ಮೆ ನೆನಪಿಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ನುಡಿದರು.

ಚಾಲಕರು ಚಾಲನೆಯಲ್ಲಿ ಜವಾಬ್ದಾರಿ ಹಾಗೂ ಚಾಲನೆಯ ಕುರಿತು ಬಹಳ ಮುಖ್ಯವಾದ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಚಾಲನೆ ಮಾಡಿದಾಗ,ಇಂಧನ ಉಳಿತಾಯದ ಜೊತೆಗೆ ವಾಹನ ಮತ್ತು ನಮ್ಮ ಕುಟುಂಬ ಸುರಕ್ಷತೆ ವಾಗಿರುವುದಲ್ಲದೆ, ನಮ್ಮ ಈ ಸಂಸ್ಥೆ ಅಭಿವೃದ್ಧಿ ಪಥದತ್ತ ಕೊಂಡೊಯಲು ಸಾಧ್ಯವಾಗುತ್ತದೆ ಎಂದು ಯಾದಗಿರ ವಿಭಾಗಿಯ ಸಂಚಾರಿ ಅಧಿಕಾರಿ ಎಂ.ಎಸ್. ಹಿರೇಮಠ ಹೇಳಿದರು. ಈ ಸಂದರ್ಭದಲ್ಲಿ ಶಹಾಪುರ ಬಸ್ ಘಟಕದ ವ್ಯವಸ್ಥಾಪಕರಾದ ಅಕ್ಬರ್ ಭಾಷಾ ಹೊಟಗಿ ಹಾಗೂ ಚಾಲಕರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

emedialine

Recent Posts

ಅತಿವೃಷ್ಟಿ ಬೆಳೆ ಹಾನಿ ಪರಿಹಾರ ಕೊಡಿ: ಮುಖ್ಯಮಂತ್ರಿಗಳಿಗೆ ಪ್ರಾಂತ ರೈತ ಸಂಘದ ಆಗ್ರಹ

ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…

5 hours ago

ಯುವಜನ ಒಕ್ಕೂಟದಿಂದ 76 ನೇ ಕಲ್ಯಾಣ ಕರ್ನಾಟಕ ಸ್ವಾತಂತ್ರೋತ್ಸವ ಆಚರಣೆ

ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…

5 hours ago

ಸೆ.19 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…

5 hours ago

ಕೆಎಎಸ್‌ಎಸ್‌ಐಎಗೆ ನಿಜಾಮೋದ್ದಿನ್ ಚಿಸ್ತಿ ನಾಮನಿರ್ದೇಶನ

ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…

5 hours ago

ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಸಮಾಧಾನವಿದೆ, ತೃಪ್ತಿಯಿಲ್ಲ: ಬಿಆರ್ ಪಾಟೀಲ

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…

6 hours ago

ವಕ್ಫ್ ಬೋರ್ಡ್ ಆಸ್ತಿ ಒತ್ತುವರಿ ನಿಯಂತ್ರಣಕ್ಕೆ ಕಂಪೌಂಡ್ ನಿರ್ಮಾಣ; ಬಿ.ಜೆಡ್.ಜಮೀರ್ ಅಹ್ಮದ್ ಖಾನ್

ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420