ಯೋಜನೆಯ ಲಾಭ ಪಡೆದುಕೊಳ್ಳಲು ರೈತರಿಗೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಬಲಬೆಲೆ ಯೋಜನೆಯಡಿ ಉದ್ದಿನ ಕಾಳು ಹಾಗೂ‌ ಸೋಯಾಬಿನ್ ಖರೀದಿ ಪ್ರಕ್ರಿಯೆ ಪ್ರಾರಂಭ

ಕಲಬುರಗಿ: 2024-25 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಉದ್ದಿನ ಕಾಳು ಹಾಗೂ ಸೋಯಾಬಿನ್ ಖರೀದಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು ರೈತರು ಯೋಜನೆಯ ಲಾಭ ಪಡೆದುಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಉದ್ದಿನ ಕಾಳು ಹಾಗೂ ಸೋಯಾಬಿನ್ (ಹಳದಿ ) ಖರೀದಿ ಮಾಡುವ ಉದ್ದೇಶದಿಂದ ಸರ್ಕಾರ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತವನ್ನು ನೋಡಲ್ ಏಜೆನ್ಸಿಯನ್ನಾಗಿ ನೇಮಿಸಿದೆ. ಈ ಹಿನ್ನೆಲೆ ಯಲ್ಲಿ, ಕಲಬುರಗಿ ಜಿಲ್ಲೆಯಲ್ಲಿ ಪರಿಣಿತ ಹೊಂದಿದ 29 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಅಥವಾ ರೈತ ಉತ್ಪಾದಕ ಸಂಘಗಳನ್ನು ಗುರಿತಿಸಲಾಗಿದೆ. ಹಾಗಾಗಿ, ತಕ್ಷಣ ರೈತರು ನೋಂದಣಿ ಕಾರ್ಯವನ್ನು ಮಾಡಕೊಳ್ಳಬೇಕು. ಈ ಪ್ರಕ್ರಿಯೆಗೆ ಸೆಪ್ಟೆಂಬರ್ 07 ರಿಂದ ಅಕ್ಟೋಬರ್ 20 ರವರೆಗೆ ನಿಗದಿಪಡಿಸಲಾಗಿದ್ದು ಸೆಪ್ಟೆಂಬರ್ 7 ರಿಂದ ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿ ಖರೀದಿ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಮುಂದುವರೆದು ಹೇಳಿರುವ ಸಚಿವರು ಜಿಲ್ಲೆಯ ರೈತರು ಉದ್ದಿನ ಬೇಳೆ ಹಾಗೂ ಸೋಯಾಬಿನ್ ಬೆಳೆಗಳನ್ನು ನಿಗದಿಪಡಿಸಲಾದ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ.

ನಿಗದಿಪಡಿಸಿದ ಕೇಂದ್ರಗಳು ಈ ಕೆಳಗಿನಂತಿವೆ: 1) ಕಲಬುರಗಿ : 1) ಮಹಾಗಾಂವ್, 2) ದೇವರ ದಾಸಿಮಯ್ಯ ರೈತ ಉತ್ಪಾದಕರ ಕಂಪನಿ ಕಮಲಾಪುರ, 3) ಗ್ರಾಮೀಣ ತೋಟಗಾರಿಕೆ ರೈತ ಉತ್ಪಾದಕರ ಕಂಪನಿ ಕಮಲಾಪುರ.

2) ಆಳಂದ : 1) ಪಡಸಾವಳಗಿ 2) ಹಿರೋಳಿ, 3) ಮನ್ನಳ್ಳಿ, 4) ಕಜೂರಿ, 5) ಯಳಸಂಗಿ, 6)ಕವಲಗಾ, 7) ಕಿಣ್ಣಿ ಸುಲ್ತಾನ, 8) ಮಡಿಕಿ, 9) ಅಂಬಲಗಾ, 10) ರುದ್ರವಾಡಿ, 11) ಹೋದಲೂರು, 12) ನಿರುಡಗಿ, 13) ಬೋದನ, 14) ಸರಸಂಬಾ ಹಾಗೂ 15) ತಡಕಲ್.

3) ಚಿತ್ತಾಪುರ : 1) ಕಾಳಗಿ, 2) ಟೆಂಗಳಿ, 3) ನೀಲಕಂಠ ಕಾಳೇಶ್ವರ ರೈತ ಉತ್ಪಾದಕರ ಸಂಸ್ಥೆ ಕಾಳಗಿ.

4) ಚಿಂಚೋಳಿ: 1) ಚಿಂಚೋಳಿ, 2) ಸಾಲೆಬಿರನಳ್ಳಿ, 3) ಕುಂಚಾವರಂ, 4) ಐನಾಪುರ, 5) ಸುಲೇಪೇಟ್, 6) ಚಿಮ್ಮನಚೋಡ್, 7) ಕೋಡ್ಲಿ ಹಾಗೂ 8) ಶಾದಿಪುರ.

emedialine

Recent Posts

ಮಾಜಿ ಸಚಿವ ಎಸ್.ಕೆ ಕಾಂತ ಅವರ ಆರೋಗ್ಯ ವಿಚಾರಿಸಿದ ಸಿಎಂ

ಕಲಬುರಗಿ: 19ನೇ ಸಚಿವ ಸಂಪುಟದ ಹಿನ್ನೆಲೆಯಲ್ಲಿ ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

9 mins ago

ಶಹಾಬಾದ ತಾಲ್ಲೂಕಿನದ್ಯಂತ ಸೆ. 17ಕ್ಕೆ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಿ

ಶಹಾಬಾದ: ಸಪ್ಟೆಂಬರ್ 17ರಂದು ತಾಲೂಕಿನ ಎಲ್ಲಾ ಸರ್ಕಾರಿ,ಅರೆ ಸರ್ಕಾರಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನ ಹಾಗೂ ವಿಶ್ವಕರ್ಮ…

12 mins ago

ಶಹಾಬಾದ ಕಾರ್ಖಾನೆಗಳನ್ನು ಪ್ರಾರಂಭಿಸಲು ಹಿರೇಮಠ ಒತ್ತಾಯ

ಶಹಾಬಾದ: ತಾಲೂಕಿನ ಜೆಪಿ ಕಾರ್ಖಾನೆ ಮತ್ತು ಜಿಇ ಕಾರ್ಖಾನೆ ಕಾರ್ಖಾನೆಗಳನ್ನು ಪುನಃ ಪ್ರಾರಂಭ ಮಾಡಲು ಮಂಗಳವಾರ ಕಲಬುರಗಿಯಲ್ಲಿ ನಡೆಯುವ ಸಚಿವ…

41 mins ago

MRW/VRW/URW ಕಾರ್ಯಕರ್ತರ ಅನಿರ್ಧಿಷ್ಟಾವಧಿ ಧರಣಿ ದಲಿತ ಸೇನೆ ಬೆಂಬಲ

ಕಲಬುರಗಿ: ನವ ಕರ್ನಾಟಕ MRW/VRW/URW ಗೌರವ ಧನ ಕಾರ್ಯಕರ್ತರ ಖಾಯಮಾತಿಗಾಗಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿಗೆ ಅಖಿಲ ಕರ್ನಾಟಕ ದಲಿತ ಸೇನೆ…

45 mins ago

ಸಚಿವ ಸಂಪುಟದಲ್ಲಿ ಸಭೆಯಲ್ಲಿ ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಸುಪ್ರೀಂಕೋರ್ಟ್ ತೀರ್ಪಿನಂತೆ ಒಳಮೀಸಲಾತಿಯನ್ನು ರಾಜ್ಯ ಸರಕಾರ ಕಲಬುರಗಿಯಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟ…

48 mins ago

20 ಕೋಟಿಗೂ ಮೀರಿ ಹಣ ದುರುಪಯೋಗ ಬ್ರಷ್ಟಾಚಾರದ ಬಗ್ಗೆ ಶೀಘ್ರದಲ್ಲಿ ಕ್ರಮ ವಹಿಸಬೇಕು

ಕಲಬುರಗಿ: ಪ್ರೀಯಾಂಕ ಖರ್ಗೆ ಚಿತ್ತಾಪೂರ ಮತಕ್ಷೇತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಇವರ ಕ್ಷೇತ್ರದ ಬಿ.ಇ.ಓ ಕವೇರಿಯಲ್ಲಿ 20 ಕೋಟಿ…

49 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420