ಸುರಪುರ: ರಾಜ್ಯದಲ್ಲಿ ತಮ್ಮದೆ ಆದ ವಿಶಿಷ್ಟ ಪರಂಪರೆಯನ್ನು ಹೊಂದಿರುವ ಅಲೆಮಾರಿ ಜನಾಂಗವಾಗಿರುವ ಸುಡುಗಾಡು ಸಿದ್ಧರ ಅಭಿವೃಧ್ಧಿಗೆ ಸರಕಾರ ನೆರವು ನೀಡಲು ಮುಂದಾಗಬೇಕು ಎಂದು ಅಲೆಮಾಡಿ ಸುಡುಗಾಡು ಸಿದ್ಧರ ಮಹಾಸಭಾದ ರಾಜ್ಯಾಧ್ಯಕ್ಷ ಬಿ.ಎಲ್.ಹನುಮಂತಪ್ಪ ಮಾತನಾಡಿದರು.
ನಗರದ ವಣಕಿಹಾಳ ಬಳಿಯ ಕಡೆಚೂರ ಕಲ್ಯಾಣ ಮಂಟಪದಲ್ಲಿ ನಡೆದ ಮಹಾಸಭಾದ ಜಿಲ್ಲಾ ಹಾಗೂ ತಾಲೂಕ ಘಟಕದ ನೂತನ ಪದಾಧಿಕಾರಿಗಳ ನೇಮಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ನಮ್ಮ ಸಮುದಾಯಕ್ಕೆ ವಿಶೇಷ ಸೌಲಭ್ಯಗಳನ್ನು ಸರಕಾರ ನೀಡಬೇಕು,ಶೈಕ್ಷಣಿಕ,ಆರ್ಥಿಕ,ಸಾಮಾಜಿಕ ಹಾಗೂ ರಾಜಕೀಯ ಮೀಸಲು ಅಗತ್ಯವಾಗಿದೆ.ನಮ್ಮ ಜನಾಂಗ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಶಿಕ್ಷಣವಂತರಾಗಬೇಕು,ಮಕ್ಕಳಿಗೆ ಕಡ್ಡಾಯವಾಗಿ ಶೀಕ್ಷಣ ಕೊಡಿಸುವ ಮೂಲಕ ನಮ್ಮ ಏಳಿಗೆಗೆ ನಾವು ಮುಂದಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಮಹಾಸಭಾದ ಜಿಲ್ಲಾ ಅಧ್ಯಕ್ಷರಾಗಿ ಸಣ್ಣ ಮರಿಯಪ್ಪ,ಪ್ರಧಾನ ಕಾರ್ಯದರ್ಶಿಯಾಗಿ ಮಾರಪ್ಪ ನೀಲಕಂಠ,ಶಿವಪ್ಪ ಉಪಾಧ್ಯಕ್ಷರಾಗಿ ಹಾಗೂ ಸುರಪುರ ತಾಲೂಕ ಅಧ್ಯಕ್ಷರಾಗಿ ಯಂಕಪ್ಪ ಮರಿಯಪ್ಪ ಕೆಂಭಾವಿ,ಉಪಾಧ್ಯಕ್ಷರಾಗಿ ಜಂಬಣ್ಣ ಮುದುಕಪ್ಪ ಅಗಸದವರು ಅವರನ್ನು ನೇಮಕಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷ ರಾಜು ಮಾಳನೂರ,ಕಾರ್ಯದರ್ಶಿ ಹುಸನಪ್ಪ ವಿಭೂತಿ ಮಸ್ಕಿ,ಮುಖಂಡರಾದ ಗೋಪಾಲ ಸುರಪುರ,ಮಾರಪ್ಪ ಸುರಪುರ,ಈರಣ್ಣ ಕೆಂಭಾವಿ,ಚಂದಪ್ಪ ಶೆಳ್ಳಗಿ,ಶರಣಪ್ಪ ಬೋನಾಳ ದೇವದುರ್ಗ,ಬಸವರಾಜ ಶಹಾಪುರ ಹಾಗೂ ಶಿವಪ್ಪ ವಜ್ಜಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಸಮುದಾಯದ ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…