ಸುರಪುರ: ನಗರದ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದ ಬಳಿಯ ಅಂಗಡಿ ಸಂಖ್ಯೆ 5ರ ನಾರಾಯಣದಾಸ ಗೋಪಾಲದಾಸ ರಾಠಿ ಎನ್ನುವವರಿಗೆ ಸೇರಿದ ಕಿರಾಣಿ ಅಂಗಡಿಯ ಗೋದಾಮಿಗೆ ಮಳೆ ನೀರು ನುಗ್ಗಿ ಸುಮಾರು 8 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ನೀರಲ್ಲಿ ನೆನೆದು ಹಾಳಾಗಿರುವ ಘಟನೆ ನಡೆದಿದೆ.
ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿದಿದ್ದರಿಂದ 3ನೇ ತಾರಿಖು ರಾತ್ರಿ ಸುರಿದ ಭಾರಿ ಮಳೆಗೆ ನೀರು ಗೋದಾಮಿನೊಳಗೆ ನುಗ್ಗಿದ್ದರಿಂದ ಗೋದಾಮಿನಲ್ಲಿದ್ದ ಅಕ್ಕಿ,ಬೇಳೆ,ಬೆಲ್ಲ,ಸಕ್ಕರೆ ಸೇರಿದಂತೆ ಅನೇಕ ವಸ್ತುಗಳು ನೀರಲ್ಲಿ ರಾತ್ರಿಯಿಡೀ ನೆನೆದಿದ್ದು ಎಲ್ಲಾ ಆಹಾರ ಧಾನ್ಯಗಳಿದ್ದ ಚೀಲಗಳು ನೆನೆದು ಸಂಪೂರ್ಣ ಹಾಳಾಗಿವೆ,ಬುಧವಾರ ಬೆಳಿಗ್ಗೆ ಬಂದು ನೋಡಿದಾಗ ಎಲ್ಲಾ ವಸ್ತುಗಳು ನೀರಲ್ಲಿ ನೆನೆದಿದ್ದು ದೊಡ್ಡ ಮಟ್ಟದಲ್ಲಿ ನಷ್ಟವುಂಟಾಗಿದ್ದು ಕಂಡು ಬೇಸರ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಈ ಕುರಿತು ಸುರಪುರ ಠಾಣೆಗು ಮನವಿ ಸಲ್ಲಿಸಿ ತುಂಬಾ ನಷ್ಟವುಂಟಾಗಿದ್ದು ಸರಕಾರ ದಿಂದ ಪರಿಹಾರ ಕೊಡಿಸುವಂತೆ ವಿನಂತಿಸಿದ್ದಾರೆ.ಸ್ಥಳಕ್ಕೆ ಸುರಪುರ ಠಾಣೆಯ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…