ಕಲಬುರಗಿ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಾಯಕರ ನೇತೃತ್ವದಲ್ಲಿ ರವಿವಾರ ಜಿಲ್ಲಾ ಮಟ್ಟದ ನಾಯಕರ ಸಭೆ ಜರುಗಿತು. ಸಭೆಯಲ್ಲಿ ಜಿಲ್ಲೆಯ ಪ್ರಮುಖ ವಿಷಯಗಳನ್ನು ಚರ್ಚಿಸುವ ಮೂಲಕ ನಾಯಕರಿಗೆ ತರಬೇತಿ ನೀಡಲಾಯಿತು.
ಈ ವೇಳೆಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಸೈಯದಾ ಸಾದಿಯಾ ಮಾತನಾಡಿದ ಅವರು ನಾವು ನಿಜವಾದ ರಾಜಕೀಯ ಸಬಲೀಕರಣ ಸಾಧಿಸಬೇಕಾದರೆ, ತ್ಯಾಗಕ್ಕೆ ಸಿದ್ಧರಾಗಿರಬೇಕು. ನಿಷ್ಠೆ ಮತ್ತು ವೈಯಕ್ತಿಕ ತ್ಯಾಗವಿಲ್ಲದೆ ಯಶಸ್ಸು ಸಿಗುವುದಿಲ್ಲ ಎಂದು ಹೇಳಿ ರಾಜಕೀಯ ಸಬಲೀಕರಣದ ಮಹತ್ವವನ್ನು ತಿಳಿಸಿದರು.
ಹಸಿವು ಮತ್ತು ಭಯ ಮುಕ್ತ ವ್ಯವಸ್ಥೆ ನಿರ್ಮಾಣಕ್ಕಾಗಿ ನಮ್ಮ ಹೋರಾಟವಾಗಿದೆ. ದೇಶದ ಉತ್ತಮ ಭವಿಷ್ಯ ನಿರ್ಮಿಸಲು ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಸಮರ್ಪಿಸಬೇಕೆಂದು ಪಕ್ಷದ ಜಿಲ್ಲೆ ನಾಯಕ ಮೊಹಮ್ಮದ್ ಮೋಹ್ಸಿನ್ ಕರೆ ನೀಡಿದರು.
ವಕ್ಫ್ ತಿದ್ದುಪಡಿ ಕಾಯ್ದೆ 2024 ಅನ್ನು ತಿರಸ್ಕರಿಸಲು SDPI ವಾರ್ಡ್ ಮಟ್ಟದಲ್ಲಿ ಇಮೇಲ್ ಅಭಿಯಾನ ಪ್ರಾರಂಭಿಸಿದೆ ಎಂದು ತಿಳಿಸಿದ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಸೈಯದ್ ಅಲೀಮ್ ಇಲಾಹಿ ಸಮುದಾಯದ ಹಿತಾಸಕ್ತಿಗಳನ್ನು ರಕ್ಷಿಸುವ ಮತ್ತು ಅನ್ಯಾಯದ ವಿರುದ್ಧ ಹೋರಾಡುವುದೇ ಪಕ್ಷದ ಬದ್ಧತೆ ಅಗಿದೆ ಎಂದು ತಿಳಿಸಿದರು.
ಎಲ್ಲಾ SDPI ನಾಯಕರಿಗೆ ತಮ್ಮ ವಾರ್ಡ್ ಮತ್ತು ನೆರೆಹೊರೆಯಗಳಲ್ಲಿ ಒಟ್ಟಾಗಿ ಕೆಲಸ ಮಾಡುವಂತೆ ಪಕ್ಷದ ಕಲಬುರಗಿ ಜಿಲ್ಲಾ ಅಧ್ಯಕ್ಷ ಸೈಯದ್ ದಸ್ತಗೀರ್ ಕರೆ ನೀಡಿದರು.
ಈ ಸಭೆಯಲ್ಲಿ ನಾಯಕರಾದ ಡಾ. ರಿಜ್ವಾನ್ (SDPI SWC ಸದಸ್ಯ), ಮಕ್ಬೂಲ್ ಅಹ್ಮದ್ (ಜಿಲ್ಲಾ ಉಪಾಧ್ಯಕ್ಷ), ಇಬ್ರಾಹೀಂ ಪಟೇಲ್ (ಜಿಲ್ಲಾ ಸಂಘಟನಾ ಕಾರ್ಯದರ್ಶಿ) ಮತ್ತಿತರರು ಭಾಗವಹಿಸಿದರು.
ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…
ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…
ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…
ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ದ ಟಿವಿ ಛಾನೆಲ್ ಎಸ್ ಎಸ್ ವಿ ಟಿವಿ ಮತ್ತು ಜೈ ಭೀಮ್ ಟಿವಿ…
ಕಲಬುರಗಿ: ಪ್ಲಾಸ್ಟಿಕ್ ನಿಷೇಧಕ್ಕೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕರಿಸಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾಧ್ಯವಿದೆ ಎಂದು…