ಸುರಪುರ: ನಗರದ ರಂಗಂಪೇಟೆಯ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡದ ಕಿಟಕಿಗಳ ಗಾಜುಗಳನ್ನು ಕಿಡಿಗೇಡಿಗಳು ಹೊಡೆದು ಹಾಕಿದ್ದು ಮಕ್ಕಳು ಹಾಗೂ ಪೋಷಕರಲ್ಲಿ ಭಯ ಮೂಡಿಸಿದೆ.ಹೊಸದಾದ ಶಾಲಾ ಕಟ್ಟಡದ ಕಿಟಕಿಗಳಿಗೆ ಗಾಜುಗಳನ್ನು ಅಳವಡಿಸಿದ್ದು ಎರಡು ದಿನಗಳ ಕಾಲ ಶಾಲೆ ರಜೆ ಇದ್ದಾಗ ಯಾರೋ ಕಿಡಿಗೇಡಿಗಳು ಇಂತಹ ಕೃತ್ಯ ಎಸಗಿರಬಹುದು ಎನ್ನಲಾಗಿದೆ.
ಸುಮಾರು 7 ಕಿಟಕಿಗಳ ಗಾಜುಗಳು ಧ್ವಂಸಗೊಳಿಸಲಾಗಿದೆ,ಸೋಮವಾರ ಬೆಳಿಗ್ಗೆ ಶಾಲಾ ಕೋಣೆಗಳನ್ನು ತೆಗೆದಾಗ ಒಳಗಡೆ ಗಾಜುಗಳು ಬಿದ್ದಿದ್ದರಿಂದ ಮಕ್ಕಳು ಭಯಗೊಂಡಿದ್ದಾರೆ.ಕಿಡಿಗೇಡಿಗಳು ಮತ್ತೆ ಕಲ್ಲು ಬೀಸಿದರೆ ಮಕ್ಕಳಿಗೆ ತಾಗಿದರೆ ಗತಿ ಏನು ಎನ್ನುವ ಆತಂಕವೂ ಪೋಷಕರಿಗೆ ಕಾಡಲಾರಂಭಿಸಿದೆ.
ಪೊಲೀಸ್ ಇಲಾಖೆ ಕೆಪಿಎಸ್ ಶಾಲೆ ಕಡೆಗೆ ಬೀಟ್ ಪೊಲೀಸರನ್ನು ನಿಯೋಜಿಸಿ ಮತ್ತೆ ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳುವ ಜೊತೆಗೆ ಈಗ ಗಾಜುಗಳನ್ನು ಧ್ವಂಸ ಮಾಡಿದವರನ್ನು ಪತ್ತೆ ಮಾಡಿ ಶಿಕ್ಷೆ ನೀಡಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…