ಕಲಬುರಗಿ: ಜೇವರ್ಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮೈಸೂರಿನ ಪರಂಪರೆ ಸಂಸ್ಥಯ ಸಹಯೋಗದಲ್ಲಿ ಜೇವರ್ಗಿಯ ಟೌನ್ ಹಾಲ್ ಹಳೆ ತಹಸೀಲ್ ಕಛೇರಿಯ ಆವರಣದಲ್ಲಿರುವ ಕನ್ನಡ ಭವನದಲ್ಲಿ ರಾಜ್ಯಮಟ್ಟದ ಗಮಕ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಂಚಾಲಕ ಶಾಂತಲಿಂಗ ಪಾಟೀಲ್ ತಿಳಿಸಿದ್ದಾರೆ.
ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಜೇವರ್ಗಿ ತಾಲೂಕಿನ ಗಮಕ ಸಮ್ಮೇಳನದ ಸಂಚಾಲಕ ಶಾಂತಲಿಂಗ ಪಾಟೀಲ್ ಇದೇ ತಿಂಗಳ 21 ಮತ್ತು 22 ನೇ ತಾರೀಖಿನಂದು ನಡೆಯಲಿರುವ ರಾಜ್ಯಮಟ್ಟದ ಗಮಕ ಸಮ್ಮೇಳನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇವರ್ಗಿ ಶಾಸಕರು ಮತ್ತು ಕೆಕೆಆರ್’ಡಿಬಿ ಅಧ್ಯಕ್ಷರಾದ ಡಾ. ಅಜಯ್ ಸಿಂಗ್ ಅವರು ವಹಿಸಿಕೊಂಡಿದ್ದು, ಈ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಡಾ.ಎವಿ ಪ್ರಸನ್ನಕುಮಾರ ಅವರು ವಹಿಸಿಕೊಳ್ಳಲಿದ್ದಾರೆ. ಇನ್ನು ಈ ಸಮ್ಮೇಳನದಲ್ಲಿ ವಿಜಕುಮಾರ ಪಾಟೀಲ ತೇಗಲತಿಪ್ಪಿ, ಕೃಷ್ಣಾಜಿ ಕುಲಕರ್ಣಿ, ನಾಡೋಜ ಮಹೇಶ ಜೋಶಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಪ್ರಹ್ಲಾದ ಮಠಮಾರೆ, ಪ್ರಕಾಶ ಕುಲಾರೆ, ಭೀಮರೆಡ್ಡಿ, ಎ.ವಿ ಬಿರಾದಾರ ಭಾಗವಹಿಸಿದ್ದರು.
(1) ಪ್ರವಾದಿಯ ಅನುಯಾಯಿಗಳು ಎಲ್ಲಿ? ನಿನ್ನ ಒಡ ಹುಟ್ಟಿದವರ ವಿರುದ್ಧವಾದರೂ ಸರಿಯೇ ಸತ್ಯವನ್ನೆ ನುಡಿ ಎಂದ ನನ್ನ ಪ್ರವಾದಿಯ ಅನುಯಾಯಿಗಳು…
ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…
ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…
ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…
ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ದ ಟಿವಿ ಛಾನೆಲ್ ಎಸ್ ಎಸ್ ವಿ ಟಿವಿ ಮತ್ತು ಜೈ ಭೀಮ್ ಟಿವಿ…