ಯುವತಿ ಅತ್ಯಾಚಾರ ಕೊಲೆ ಖಂಡಿಸಿ ಕೋಲಿ ಕಬ್ಬಲಿಗ ಹೋರಾಟ ಸಂಘ ಪ್ರತಿಭಟನೆ

ಸುರಪುರ: ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಯುವತಿ ಅತ್ಯಚಾರ ಕೊಲೆ ಖಂಡಿಸಿ ನಗರದಲ್ಲಿ ಅಖಿಲ ಕರ್ನಾಟಕ ಕೋಲಿ ಕಬ್ಬಲಿಗ ಅಂಬಿಗ ಭೋಯಿ ಬೆಸ್ತ ಬುಡಕಟ್ಟು ಹೋರಾಟ ಸಂಘ ದಿಂದ ಪ್ರತಿಭಟನೆ ನಡೆಸಲಾಗಿದೆ.ನಗರದ ಅಂಬಿಗರ ಚೌಡಯ್ಯ ವೃತ್ತ ದಿಂದ ತಹಸಿಲ್ದಾರ್ ಕಚೇರಿ ವರೆಗೆ ಪ್ರತಿಭಟನಾ ಮೆವರಣಿಗೆ ನಡೆಸಿ ಘಟನೆ ಖಂಡಿಸಿ ಘೋಷಣೆಗಳನ್ನು ಕೂಗಿದರು.

ತಹಸಿಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಅನೇಕ ಮುಖಂಡರು ಮಾತನಾಡಿ,ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಟೋಕ್ರಿ ಕೋಳಿ ಸಮಾಜದ ಯುವತಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಕಾಮುಕರಿಗೆ ಗಲ್ಲು ಶಿಕ್ಷೆ ಅಥವಾ ಎನ್‍ಕೌಂಟರ್ ಮಾಡಬೇಕು.ಯುವತಿ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು.ಯುವತಿ ಕುಟುಂಬದ ಒಬ್ಬರಿಗೆ ಸರಕಾರಿ ನೌಕರಿ ನೀಡಬೇಕು ಎಂದು ಒತ್ತಾಯಿಸಿದರು.ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ನಂತರ ಮುಖ್ಯಮಂತ್ರಿಗೆ ಬರೆದ ಮನವಿ ತಹಸಿಲ್ದಾರ್ ಕಚೇರಿ ಸಿರಸ್ತೆದಾರ ಗುರುಬಸಪ್ಪ ಪಾಟೀಲ್ ಮೂಲಕ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ದೇವಿಂದ್ರಪ್ಪಗೌಡ ಬಿ.ಮಾಲಿ ಪಾಟೀಲ್,ಉಪಾಧ್ಯಕ್ಷ ವೆಂಕಟರಡ್ಡಿ ಭೋವಿಗಲ್ಲಿ,ಗೌರವಾಧ್ಯಕ್ಷ ಪಾರಪ್ಪ ಗುತ್ತೇದಾರ,ಸಂತೋಷ ಬಿ.ಬಾಗಲಿ,ಹಣಮಂತ ಯಕ್ತಾಪುರ,ಮಲ್ಲು ವಿಷ್ಣು ಸೇನಾ,ಮಾನಪ್ಪ ಸೂಗುರ,ಯಂಕಣ್ಣ ಕಟ್ಟಿಮನಿ,ಮರೆಪ್ಪ ದಾಯಿ,ಶಿವಪ್ಪ ಕಟ್ಟಿಮನಿ,ವಿಶ್ವಮಿತ್ರ ಕಟ್ಟಿಮನಿ,ಯಲ್ಲಪ್ಪ ರತ್ತಾಳ,ಶ್ರೀಕಾಂತ ರತ್ತಾಳ,ಮರೆಪ್ಪ ವೆಂಕಟಾಪುರ,ವೆಂಕಟೇಶ ಕವಡಿಮಟ್ಟಿ,ಲಕ್ಷ್ಮಣ ಹೆಗ್ಗಣದೊಡ್ಡಿ,ನಾಗರಡ್ಡಿ ರತ್ತಾಳ,ಆನಂದ ಮಾಚಗುಂಡಾಳ ಸೇರಿದಂತೆ ಅನೇಕರು ಭಾಗವಹಿಸಿದ್ದರು.

emedialine

Recent Posts

ಬೆಳಂ‌ ಬೆಳಗ್ಗೆ ಕಲಬುರಗಿಯಲ್ಲಿ ಗುಂಡಿನ‌ ಸದ್ದು

ಕಲಬುರಗಿ: ಆಳಂದ ತಾಲ್ಲೂಕಿನ ಮಾಜಿ ಗ್ರಾಪಂ ಸದಸ್ಯನ ಕೊಲೆ ಪ್ರಕರಣಕ್ಕೆ ಸಂಭವಿಸಿದ ಆರೋಪಿಯನ್ನು ಬಂಧಿಸಲು ತೆರಳುದ ಸಂಧರ್ಭದಲ್ಲಿ ಆರೋಪಿಯಿಂದ ಪೊಲೀಸರ…

37 mins ago

ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನದ ಕರಪತ್ರ ಬಿಡುಗಡೆ

ಶಹಾಬಾದ:ಕಲಬುರಗಿಯಲ್ಲಿ ಸೆಪ್ಟೆಂಬರ್ 29 ಹಾಗೂ 30ರಂದು ನಡೆಯುವ ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಸಮಿತಿ ಸಭೆ ಹಾಗೂ…

5 hours ago

ಕಾರ್ಮಿಕರು ರಾಜಕೀಯ ಸ್ಥಾನಮಾನ ಪಡೆದರೇ ಸಮಸ್ಯೆಗಳಿಗೆ ಪರಿಹಾರ ಸಾಧ್ಯ: ನೀಲಾ

ಕಟ್ಟಡ ಕಾರ್ಮಿಕರ 2ನೇ ಶಾಖಾ ಸಮ್ಮೇಳನ : ಕಾಪೆರ್Çರೇಟ್ ಕಂಪೆನಿಗಳಿಗೆ ಧಾರೆ ಎರೆದ ದೇಶದ ಸಂಪತ್ತು ಶಹಾಬಾದ: ರಾಜಕೀಯ ಪಕ್ಷಗಳು…

5 hours ago

ವಿಕಲಚೇತರಿಗೆ ಅನುಕಂಪ ಬೇಡ ಮನುಷ್ಯರಂತೆ ಕಾಣಿ: ಡಾ.ಗವಿಸಿದ್ಧಪ್ಪ ಪಾಟೀಲ

ಬಸವಕಲ್ಯಾಣ: ವಿಕಲಚೇತನರು ತಮ್ಮ ಅಂಗವಿಕಲತೆ ಬಗ್ಗೆ ಅಗೌರವ ತಾಳಲಾರದೇ,ಅನುಕಂಪ ತೋರಿಸದೇ ಸ್ವ ಪ್ರತಿಭೆ ಹೊಂದಿದ ಅವರಿಗೆ ಮೂಲಭೂತ ಸೌಲಭ್ಯ ಗಳನ್ನು…

16 hours ago

ಸತ್ಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ

ಕಲಬುರಗಿ: ಸ್ಥಾಪಿತ ಸಿದ್ಧಾಂತ ಹೊಡೆದು ಹಾಕಿ ಅವೈದಿಕ ವಚನ ಸಾಹಿತ್ಯವನ್ನು ಜನಮಾನಸಕ್ಕೆ ಮುಟ್ಟಿಸಿದ ಡಾ.‌ಎಂ.ಎಂ.‌ಕಲಬುರ್ಗಿ ಯವರು ಸತ್ಯದ ಸಂಶೋಧಕರಾಗಿದ್ದರು ಎಂದು…

17 hours ago

ಮಕ್ಕಳೊಂದಿಗೆ ಹುಟ್ಟ ಹುಬ್ಬ ಆಚರಿಸಿಕೊಂಡ ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಸಂಜೆ ತಮ್ಮ ಹುಟ್ಟು ಹಬ್ಬವನ್ನು ಕಲಬುರಗಿ ನಗರದ ಆಳಂದ ನಾಕಾ ರಸ್ತೆಯಲ್ಲಿರುವ…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420