ಕಲಬುರಗಿ: ನಗರದ ಶ್ರೀ ದಾಮೋದರ ರಘೋಜಿ ಮೆಮೋರಿಯಲ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮೂರನೇ ವರ್ಷದ ಶಾಲೆಯ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಗೀತ ಶಿಕ್ಷಕರಾದ ಮಹೇಶ ಬಡಿಗೇರ ಇವರ ಸಹಕಾರದೊಂದಿಗೆ ಶ್ರೀಮತಿ ಮೀರಾ ಆರ್ ರಘೋಜಿ ಹಾಗೂ ಸಂಗಡಿಗರಿಂದ ಸಂಗೀತ ನುಡಿನಮನ ಜರುಗಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ. ವಿಜಯ ಡಿ. ರಘೋಜಿ, ಶಾಲೆಯ ಅಧ್ಯಕ್ಷರಾದ ರಾಮಚಂದ್ರ ಡಿ ರಘೋಜಿ ಕಾರ್ಯದರ್ಶಿಗಳಾದ ಮೀರಾ ಆರ್ ರಘೋಜಿ, ಟ್ರಸ್ಟೀ ಹೊಂದಿರುವ ಕಮಲಾಬಾಯಿ ಡಿ ರಘೋಜಿ, ಕುಮಾರಿ ನಂದಿನಿ ಆರ್ ರಘೋಜಿ, ವಿಷ್ಣು ಕೇಲೋಜಿ ಇವರುಗಳಿಗೆ ಶಾಲೆಯ ವತಿಯಿಂದ ನೆನಪಿನ ಕಾಣಿಕೆಯನ್ನು ಕೊಟ್ಟು ಸನ್ಮಾನಿಸಿಲಾಯಿತು.
ಈ ಸಂಸ್ಥೆಯಲ್ಲಿ ಸತತವಾಗಿ ಐದು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ಶಾಲೆಯ ಎಲ್ಲಾ ಭೋದಕರಿಗೂ ಹಾಗೂ ಭೋದಕೇತರರಿಗೂ ಶಾಲೆಯ ಪ್ರಾಂಶುಪಾಲರಾದ ಪ್ರಮೋದ ಎಸ್ ಮಾಳೇಕರ ಹಾಗೂ ಸಂಸ್ಥೆಯ ಸಮಸ್ತ ಪದಾಧಿಕಾರಿಗಳಿಂದ ನೆನಪಿನಕಾಣಿಕೆಯನ್ನು ಕೊಟ್ಟು ಗೌರವಿಸಿದರು.
ಈ ಕಾರ್ಯಕ್ರಮದಲ್ಲಿ, ಬೋಧಕರು, ಬೋಧಕೇತರರು ಹಾಗೂ ಶಾಲೆಯ ಎಲ್ಲಾ ಮಕ್ಕಳು ಉಪಸ್ಥಿತರಿದ್ದರು. ಕೊನೆಗೆ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು.
ಬೀದರ್: ಕಾರುಣ್ಯ ಸೌಹಾರ್ದ ಸಹಾಕರಿ ಸಂಘದಿಂದ ಕೇವಲ ಮುಸ್ಲಿಂ ಸಮುದಾಯಕಕ್ಕೆ ಅಲ್ಲ ಎಲ್ಲ ವರ್ಗಗಕ್ಕೂ ಬಡ್ಡಿ ರಹಿತ ವ್ಯವಹಾರ ಎಲ್ಲರಿಗೂ…
ಕಲಬುರಗಿ: ಜಾತಿ ಹಾಗೂ ಮಹಿಳಾ ನಿಂದನೆ ಗಂಭೀರ ಸ್ವರೂಪದ್ದಾಗಿರುವಾಗಲೆ, ಹನಿಟ್ರ್ಯಾಪ್ ಜೀವ ವಿರೋಧಿ ಏಡ್ಸ್ ರೋಗಹರಡುವ ದುಷ್ಖೃತ್ಯದ ಆರೋಪದಲ್ಲಿ ಜೈಲು…
ಕಲಬುರಗಿ: ಬಸವಾದಿ ಶರಣರ ಪರಂಪರೆ, ಬಸವತತ್ವ ಪರಿಪಾಲನೆಯಲ್ಲಿ ಸುಲಫಲ ಮಠದ ಕೊಡುಗೆ ಅನನ್ಯವಾಗಿದೆ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ…
ಕಲಬುರಗಿ: ಸಾಮರಸ್ಯವೆಂದರೆ ಕೇವಲ ಹಿಂದು ಮುಸ್ಲಿಂ ಅಷ್ಟೇ ಅಲ್ಲ. ಅಲ್ಲಿ ಕೆಳ,ಮಧ್ಯಮ, ಮೇಲ್ವರ್ಗ ಇರುವಂತೆ ವಿವಿಧ ಸಂಸ್ಕೃತಿಗಳು ಕೂಡ ಅಡಕವಾಗಿರುತ್ತವೆ.…
ಕಲಬುರಗಿ: ಮಹಿಳೆಯರ ಆರೋಗ್ಯವು ಅನೇಕ ವಿಶಿಷ್ಟ ರೀತಿಯಲ್ಲಿ ಪುರುಷರ ಆರೋಗ್ಯಕ್ಕಿಂತ ಭಿನ್ನವಾಗಿದೆ. ಹೀಗಾಗಿ ಎಲ್ಲಾ ಮಹಿಳೆಯರಿಗೆ ಆರೋಗ್ಯವೆ ಭಾಗ್ಯ ಎಂದು…
ಕಲಬುರಗಿ: ಕಲಬುರಗಿಯಲ್ಲಿ ನಡೆಯಲಿರುವ `ಕಾವ್ಯ ಸಂಸ್ಕೃತಿ ಯಾನ'ದ ಸರ್ವಾಧ್ಯಕ್ಷರಾಗಿ ಹಿರಿಯ ಕವಿ ಡಾ.ಕಾಶೀನಾಥ ಅಂಬಲಗಿ ಅವರು ಆಯ್ಕೆಯಾಗಿದ್ದಾರೆ ಎಂದು ಆಯೋಜಕರಾದ…