ಚಿಂಚೋಳಿ ಪುರಸಭೆ ನೂತನ ಅಧ್ಯಕ್ಷರಾಗಿ ಟೈಗರ್, ಉಪಾಧ್ಯಕ್ಷರಾಗಿ ಸುಲ್ತಾನಬೇಗಂ ಆಯ್ಕೆ

ಚಿಂಚೋಳಿ: ಅವಳಿ ಪಟ್ಟಣದ ಪುರಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆನಂದ್ ತಂದೆ ನಾಗೇಂದ್ರಪ್ಪ ಟೈಗರ್, ಉಪಾಧ್ಯಕ್ಷರಾಗಿ ಸುಲ್ತಾನಬೇಗಂ ಗಂಡ ಖಲೀಲ್ ಪಟೇಲ್ ಅವರು ಅವಿರೋಧವಾಗಿ ಆಯ್ಕೆಯಾದರು ಎಂದು ತಹಸಿಲ್ದಾರ್ ಸುಬ್ಬಣ್ಣ ಜಮಖಂಡಿ ಅವರು ತಿಳಿಸಿದ್ದಾರೆ.

ಪುರಸಭೆ ಚುನಾವಣೆಯ ನಿಮಿತ್ಯ ಬೀದರ್ ಸಂಸದ ಸಾಗರ್ ಖಂಡ್ರೆ ಅವರು ಆಗಮಿಸಿ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಸ್ಥಳದಲ್ಲಿದ್ದು, ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಶುಭಕೋರಿ ತೆರಳಿದ್ದು ವಿಶೇಷವಾಗಿತ್ತು. ಈ ವೇಳೆ ಗ್ರೇಡ್ 2 ತಹಸಿಲ್ದಾರ್ ವೆಂಕಟೇಶ್ ದುಗ್ಗನ್, ಪುರಸಭೆ ಮುಖ್ಯಾಧಿಕಾರಿ ಕಾಶಿನಾಥ್ ಧನ್ನಿ ಸೇರಿದಂತೆ ಚುನಾಯಿತ ಸದಸ್ಯರು ಉಪಸ್ಥಿತರಿದ್ದರು. ಸೂಕ್ತ ಬಂದೋ ಬಸ್ತ್‍ನ್ನು ಡಿಎಸ್‍ಪಿ ಸಂಗಮನಾಥ್ ಹಿರೇಮಠ್ ಅವರ ನೇತೃತ್ವದಲ್ಲಿ ಸಿಪಿಐ ಕಪಿಲದೇವ್, ಪಿಎಸ್‍ಐ ಗಂಗಮ್ಮ ಅವರೂ ಸೇರಿದಂತೆ ಸಿಬ್ಬಂದಿ ವರ್ಗ ಕಲ್ಪಿಸಿದ್ದು, ಚುನಾವಣೆ ಶಾಂತಿಯುತವಾಗಿ ಜರುಗಿತು.

ಪುರಸಭೆ ನೂತನ ಅಧ್ಯಕ್ಷರಾಗಿ ಆನಂದ್ ಟೈಗರ್, ಉಪಾಧ್ಯಕ್ಷರಾಗಿ ಸುಲ್ತಾನಬೇಗಂ ಖಲೀಲ್ ಪಟೇಲ್ ಅವರು ಗೆಲವು ಸಾಧಿಸಿ ಸದಸ್ಯರಿಗೆ ಕಾರ್ಯಾಲಯದಲ್ಲಿ ಪುರಸಭೆ ಸದಸ್ಯ ಸುಶೀಲಕುಮಾರ್ ಬೊಮ್ಮನಳ್ಳಿ, ಅನ್ವರ್ ಖತೀಬ್, ಸಂತೋಷಕುಮಾರ್ ಮಾಳಪ್ಪನೂರ್ ಹಾಗೂ ಖಲೀಲ್ ಪಟೇಲ್, ವಿಶ್ವನಾಥ್ ಹೊಡೆಬೀರನಳ್ಳಿ ಮುಂತಾದವರು ಅಭಿನಂದಿಸಿದರು.

emedialine

Recent Posts

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಶುಭಾಶಯ ಕೊರಿದ ಆಯೇಷಾ ಖಾನಾಮ್

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿರುವ ಹಿರಿಯ ಪತ್ರಕರ್ತೆ ಆಯೇಷಾ ಖಾನಮ್ ಅವರು ಈ…

7 hours ago

ಪ್ರವಾದಿಯ ಅನುಯಾಯಿಗಳು ಎಲ್ಲಿ?

(1) ಪ್ರವಾದಿಯ ಅನುಯಾಯಿಗಳು ಎಲ್ಲಿ? ನಿನ್ನ ಒಡ ಹುಟ್ಟಿದವರ ವಿರುದ್ಧವಾದರೂ ಸರಿಯೇ ಸತ್ಯವನ್ನೆ ನುಡಿ ಎಂದ ನನ್ನ ಪ್ರವಾದಿಯ ಅನುಯಾಯಿಗಳು…

8 hours ago

ಕಲ್ಯಾಣ ಕರ್ನಾಟಕ ಉತ್ಸವ 18 ರಂದು ಆಚರಿಸಲು ಆಗ್ರಹ

ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…

19 hours ago

ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭಕ್ಕೆ ಮನವಿ

ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…

20 hours ago

ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಣಯ ಕೈಗೊಳ್ಳುವ ನಿರೀಕ್ಷೆ ಇದೆ: ಭೀಮನಗೌಡ ಪರಗೊಂಡ

ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…

20 hours ago

10 ವರ್ಷಗಳ ನಂತರ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ: ಡಾ. ಅಜಯಸಿಂಗ್

ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420