ಚಿಂಚೋಳಿಯಲ್ಲಿ ಬೀದರ್ ಸಂಸದರಿಗೆ ಅಭಿನಂದನಾ ಸಮಾರಂಭ: ಸಮಗ್ರ ಅಭಿವೃದ್ಧಿಗೆ ಶ್ರಮಿಸುವ ಭರವಸೆ

0
59

ಚಿಂಚೋಳಿ: ನನ್ನ ಗೆಲುವಿಗೆ ಶ್ರಮಿಸಿದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೆ ನಾನು ಚಿರರುಣಿಯಾಗಿರುತ್ತೇನೆ. ಅತಿ ಹೆಚ್ಚು ಮತಗಳಿಂದ ನನಗೆ ಲೋಕಸಭೆಗೆ ಕಳುಹಿಸಿದ್ದು, ನಿಮ್ಮ ಆಶಯದಂತೆ ನಡೆದುಕೊಳ್ಳುತ್ತೇನೆ ಎಂದು ಬೀದರ್ ಸಂಸದ ಸಾಗರ್ ಖಂಡ್ರೆ ಅವರು ಹೇಳಿದರು.

ಪಟ್ಟಣದ ಚಂದಾಪೂರದಲ್ಲಿರುವ ಕಾಂಗ್ರೆಸ್ ಪಕ್ಷದ ಕಾರ್ಯಲಯದ ಆವರಣದಲ್ಲಿ ಪ್ರಪ್ರಥಮ ಬಾರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕಾರ್ಯಕರ್ತರಿಂದ ಹಮ್ಮಿಕೊಂಡ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಸಂಸತ್ತಿನಲ್ಲಿ ನಿಮ್ಮ ಧ್ವನಿಯಾಗಿ ಪ್ರತಿನಿಧಿಸಿ ಈ ಭಾಗದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ ಎಂದರು.

Contact Your\'s Advertisement; 9902492681

ನಂತರ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿದರು. ಅದರಂತೆ ತಾಲ್ಲೂಕಿನ ವಿವಿಧ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಐನಾಪೂರ್ ಏತ ನೀರಾವರಿ ಅಭಿವೃದ್ಧಿ ಸಮಿತಿ, ಪ್ರದೇಶಾಭಿವೃದ್ಧಿ ಸಮಿತಿ, ಅಖಿಲ ಭಾರತ ರೈತ ಹಿತರಕ್ಷಣಾ ಸಂಘ ಸೇರಿದಂತೆ ಪಕ್ಷದ ಕಾರ್ಯಕರ್ತರು ಮನವಿಗಳನ್ನು ಸಲ್ಲಿಸಿದರು. ಮನವಿಗಳನ್ನು ಸ್ವೀಕರಿಸಿ ಪ್ರಾಮಾಣಿಕ ಪ್ರಯತ್ನ ಮಾಡುವೇ ಎಂದು ಅವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶರಣಪ್ಪ ಮಟ್ಟೂರ್, ಸೋಮಶೇಖರ್ ಗೋನಾಯಕ್, ಸುಭಾಷ್ ರಾಠೋಡ್, ಭೀಮರಾವ್ ತೇಗಲತೀಪ್ಪಿ, ಲಕ್ಷ್ಮಣ್ ಆವಂಟಿ, ವೀರಶೆಟ್ಟಿ ಇಮಡಾಪೂರ್, ಸುದರ್ಶನರೆಡ್ಡಿ ಕಲ್ಲೂರರೋಡ್, ನಾಗೇಶ್ವರರಾವ್ ಮಾಲಿಪಾಟೀಲ್, ಶರಣಪ್ಪ ಪಾಟೀಲ್, ಮಲ್ಲಿಕಾರ್ಜುನ್ ಪಾಟೀಲ್, ಜಗನ್ನಾಥ್ ತೇಗಲತೀಪ್ಪಿ, ಡಾ. ತುಕರಾಮ್ ಪವಾರ್, ಆನಂದ್ ಟೈಗರ್, ಜಗನ್ನಾಥ್ ಇದಲಾಯಿ, ರಾಮಶೆಟ್ಟಿ ಪವಾರ್, ಸುರೇಶ್ ಭಂಟಾ ಮುಂತಾದವರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here