ಶಬರಿಮಲೈ ಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ: ದಸ್ತಿಗೆ ಸನ್ಮಾನ

ಕಲಬುರಗಿ: ನಗರದ ಸುಲ್ತಾನಪುರ ಕ್ರಾಸ್ ಬಳಿ ಇರುವ ಬಂಡಕ್ ಹಾಗೂ ಬೆಣ್ಣೂರು ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಇರುಮುಡಿ ಪೂಜೆ ಹಾಗೂ ಶಬರಿಮಲೈ ಯಾತ್ರೆ ಸಮಾರಂಭವು ಅದ್ದೂರಿಯಾಗಿ ನೆರವೇರಿಸಲಾಯಿತು.

ಗುರುಸ್ವಾಮಿ ವಿಕಾಸ್ ಆರ್ ಪಾಠಕ್ ಅವರ ನೇತೃತ್ವದಲ್ಲಿ ನಗರದ ಸುಲ್ತಾನಪುರ ಕ್ರಾಸ್ ಬಳಿ ಇರುವ ಬಂಡಕ್ ಹಾಗೂ ಬೆಣ್ಣೂರು ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಇರುಮುಡಿ ಪೂಜೆ ಹಾಗೂ ಶಬರಿಮಲೈ ಯಾತ್ರೆ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತ್ತು ಸಮಾರಂಭದಲ್ಲಿ ಭಾಗವಹಿಸಿದ ಸುಲಫಲ ಮಠದ ಡಾ. ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಬಳಿಕ ಮಾತನಾಡಿದ ಗುರುಸ್ವಾಮಿ ಶಿವಲಿಂಗಪ್ಪ ಬಂಡಕ್ ಅವರು, ಕಳೆದ 26 ವರ್ಷಗಳಿಂದ ಬಂಡಕ್ ಹಾಗೂ ಬೆಣ್ಣೂರು ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಇರುಮುಡಿ ಪೂಜೆ ನೆರವೇರಿಸಿಕೊಂಡು ಬರಲಾಗುತ್ತಿದ್ದು ಅನೇಕ ಜನ ಮಾಲದಾರಿಗಳು ಇಲ್ಲಿಂದ ಶಬರಿಮಲೆ ಯಾತ್ರೆಯನ್ನು ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಇತ್ತೀಚಿಗೆ ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಹೋರಾಟಗಾರ ಲಕ್ಷ್ಮಣ ದಸ್ತಿ ಅವರಿಗೆ ಸಮಿತಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ದಿವ್ಯಾ ಸಾನಿಧ್ಯವನ್ನು ಕಡಗಂಚಿಯ ಶಾಂತಲಿಂಗೇಶ್ವರ ಸಂಸ್ಥಾನ ಮಠದ ವೀರತಪಸ್ವಿ ವೀರಭದ್ರ ಶಿವಾಚಾರ್ಯರು ಹಾಗೂ ಚವದಾಪುರಿ ಹಿರೇಮಠದ ಡಾ.ರಾಜಶೇಖರ ಶಿವಾಚಾರ್ಯರು ವಹಿಸಿಕೊಂಡಿದ್ದರು. ಗುರುಸ್ವಾಮಿಗಳಾದ ಶಿವಲಿಂಗಪ್ಪ ಬಂಡಾಕ್, ಚಂದ್ರಶೇಖರ ಬೆಣ್ಣೂರ ಪ್ರಭುಲಿಂಗ ಗೊಬ್ಬುರು, ವಿಶ್ವಾನಾಥ ಗೌಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

emedialine

Recent Posts

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

59 mins ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

1 hour ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

1 hour ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

1 hour ago

ವಿಶ್ವಕರ್ಮ ಜಯಂತಿಗೆ ಕಡಗಣನೆ ದೇವೆಂದ್ರ ಕಲ್ಲೂರ ಖಂಡನೆ

ಕಲಬುರಗಿ: ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ಸಚಿವರುಗಳು ಮತ್ತು ಸ್ಥಳಿಯ ಶಾಸಕರುಗಳು…

1 hour ago

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ: ಆರ್ಟಿಕಲ್ 371 (ಜೆ) ವ್ಯಾಪ್ತಿಯ ಕಲ್ಯಾಣ ಕರ್ನಾಟಕ ಭಾಗದ ನೇಮಕಾತಿ, ಮುಂಬಡ್ತಿಗೆ ಸಂಬಂಧಿದಂತೆ ಈ ಭಾಗದ ಜನರಿಗೆ ಅನುಕೂಲವಾಗುವ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420