ವಾಡಿ: ಶಿಲೆಗೆ ಪ್ರಾಣಪ್ರತಿಷ್ಠೆ ನೀಡಿ ಪೂಜೆಗೆ ಅರ್ಹವಾಗಿಸುವ ಭರದಲ್ಲಿ ಶಿವಲಿಂಗದ ಮೇಲೆ ಪಾದವಿಟ್ಟು ಅಸಂಖ್ಯಾತ ಭಕ್ತರ ಮನಸ್ಸಿಗೆ ನೋವುಂಟು ಮಾಡಿದ ದಿಗ್ಗಾಂವ ಪಂಚಗೃಹ ಹಿರೇಮಠದ ಸಿದ್ಧವೀರ ಶಿವಾಚಾರ್ಯ ಸ್ವಾಮೀಜಿ ತಕ್ಷಣವೇ ಭಕ್ತರಿಗೆ ಕ್ಷಮೆಯಾಚಿಸಬೇಕು ಎಂದು ಪಟ್ಟಣದ ಆರ್ಟಿಐ ಕಾರ್ಯಕರ್ತ ಸಿದ್ದು ಪಂಚಾಳ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪಂಚಾಳ, ದಿಗ್ಗಾಂವ ಶ್ರೀಗಳ ಅಧಾರ್ಮಿಕ ನಡೆಯನ್ನು ಖಂಡಿಸಿದ್ದಾರೆ. ಶಿವಲಿಂಗವನ್ನು ದೇವರೆಂದು ಪೂಜಿಸುವ ಶಿವಭಕ್ತರು, ಕ್ಷೀರಾಭೀಷೇಕ ಮಾಡಿ ಭಕ್ತಿ ಮೆರೆಯುತ್ತಾರೆ.
ಅಂತಹದ್ದರಲ್ಲಿ ಸ್ವಾಮೀಜಿ ಎಂದು ಹೇಳಿಕೊಳ್ಳುವವರೇ ಶಿವಲಿಂಗದ ಮೇಲೆ ಪಾದಗಳನ್ನಿಟ್ಟು ಪಾದಪೂಜೆ ಮಾಡಿಸಿಕೊಂಡಿರುವುದು ಸರಿಯಲ್ಲ.
ಧರ್ಮ ಶಾಸ್ತ್ರಗಳು ಅದೇನು ಹೇಳುತ್ತವೋ ಸಾಮಾನ್ಯ ಭಕ್ತರಿಗೆ ಗೊತ್ತಿರುವುದಿಲ್ಲ. ಲಿಂಗ ಪೂಜೆಯನ್ನು ಅತ್ಯಂತ ಪವಿತ್ರ ಭಾವನೆಯಿಂದ ನೆರವೇರಿಸುವವರಿಗೆ ಸ್ವಾಮೀಜಿಯ ವರ್ತನೆ ಸಹಿಸಲಾಗುತ್ತಿಲ್ಲ. ಶ್ರೀಗಳು ತಮ್ಮನ್ನು ತಾವೇ ಸಮರ್ಥನೆ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು. ಭಕ್ತರ ಭಾವನೆಗಳಿಗೆ ಬೆಲೆ ಕೊಟ್ಟು ತಕ್ಷಣವೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…