ಶಹಾಬಾದ: ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುವ ವಿದ್ಯಾರ್ಥಿವೇತನವನ್ನು ಶೀಘ್ರವೇ ಬಿಡುಗಡೆ ಮಾಡಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಅವರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ತಾಲೂಕು ಸಮಿತಿ ಅಧ್ಯಕ್ಷ ರಾಮು ಜಾಧವ್ ಮಾತನಾಡಿ, “ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಪೆಡರೇಷನ್ ಕರೆಯ ಮೇರೆಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತರಾದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪ್ರತಿ ವರ್ಷ ಶೈಕ್ಷಣಿಕ ಧನಸಹಾಯವನ್ನು ನೀಡುತ್ತಿದ್ದು, ಕಳೆದ ಎರಡ್ಮೂರು ವರ್ಷಗಳಿಂದ ಯಾವುದೇ ರೀತಿಯ ವಿದ್ಯಾರ್ಥಿವೇತನ ನೀಡಿರುವುದಿಲ್ಲ” ಎಂದರು.
ಕಟ್ಟಡ ಕಾರ್ಮಿಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕಲ್ಯಾಣ ಮಂಡಳಿಯಿಂದ ವಿದ್ಯಾರ್ಥಿವೇತನ ಧನಸಹಾಯವನ್ನು ಪಡೆಯಲು ಸೇವಾಸಿಂಧು ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದದ ಮೂಲಕ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಕಾರ್ಮಿಕ ಇಲಾಖೆ ಸದರಿ ಅರ್ಜಿಗಳನ್ನು ಪರಿಶೀಲಿಸಿ ಮಂಜೂರು ಮಾಡಿದ್ದು, ಕಲ್ಯಾಣ ಮಂಡಳಿಯು ಬೋಗಸ್ ಕಾರ್ಮಿಕರ ಸಂಖ್ಯೆ ಹೆಚ್ಚಳ ಎನ್ನುವ ಕಾರಣದ ನೆಪವೊಡ್ಡಿ, ನೈಜ ಕಟ್ಟಡ್ಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನಸಹಾಯ ಮೊತ್ತವನ್ನು ಬಿಡುಗಡೆ ಮಾಡದೇ ವಿಳಂಬ ನೀತಿ ಅನುಸರಿಸಿ ಬಡ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗಿದೆ ಎಂದು ಆರೋಪಿಸಿದರು.
ಪ್ರಧಾನ ಕಾರ್ಯದರ್ಶಿ ನಾಗಪ್ಪ ರಾಯಚೂರಕರ್ ಮಾತನಾಡಿ,ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2021-22 ಹಾಗೂ 2022-23 ನೇ ಸಾಲಿನ ಕಲ್ಯಾಣ ಮಂಡಳಿಯಲ್ಲಿ ಬಾಕಿಯಿರುವ ವಿದ್ಯಾರ್ಥಿವೇತನ ಮೋತ್ತವನ್ನು ಶೀಘ್ರವೆ ಬಿಡುಗಡೆ ಮಾಡಿಸಿ ಕಟ್ಟಡ ಕಾರ್ಮಿಕರ ಖಾತೆಗೆ ಜಮೆ ಮಾಡಬೇಕು ಎಂದು ಒತ್ತಾಯಿಸಿದರು.
ಕಲ್ಯಾಣ ಮಂಡಳಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಸಂಗ್ರಹವಿದ್ದರೂ ಬಡ ಕಾರ್ಮಿಕರ ಮಕ್ಕಳಿಗೆ ಕೊಡುತ್ತಿರುವ ಶೈಕ್ಷಣಿಕ ಧನಸಹಾಯ ಮೊತ್ತವನ್ನು ಕಡಿತಗೊಳಿಸಲಾಗಿದೆ. ಮಾತ್ರವಲ್ಲ ಕಡಿತಗೊಳಿಸರುವ ಮೊತ್ತವನ್ನು ಕಾರ್ಮಿಕರ ಖಾತೆಗೆ ಜಮೆ ಮಾಡುತ್ತಿಲ್ಲ. ಈ ಹಿಂದೆ 2020-21ರ ಮಾರ್ಗಸೂಚಿಯಂತೆ ಶೈಕ್ಷಣಿಕ ಧನಸಹಾಯ ಮೊತ್ತವನ್ನು ನೀಡಬೇಕು ಹಾಗೂ 1ನೇ ತರಗತಿಂದ 10ನೇ ತರಗತಿವರೆಗೆ ಈ ಹಿಂದೆ ನೀಡುತ್ತಿದ್ದಂತೆ ಶೈಕ್ಷಣಿಕ ಧನಸಹಾಯ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರ ಮೂಲಕ ಮುಖ್ಯಮಂತ್ರಿ ಗಮನ ಸೆಳೆಯಲು ಕಟ್ಟಡ ಕಾರ್ಮಿಕರ ಮಕ್ಕಳಾದ ನಾವು ನಮ್ಮ ಪೆÇೀಷಕರ ಸಂಘದ ಪರವಾಗಿ ಮನವಿ ನೀಡುತ್ತಿದ್ದು, ತಾವು ಕಾರ್ಮಿಕರ ಪರವಾಗಿ ಕಲ್ಯಾಣ ಮಂಡಳಿಗೆ ಶೀಘ್ರ ಪಾವತಿಗೆ ಕ್ರಮ ವಹಿಸಲು ಆದೇಶಿಸಬೇಕು” ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪ್ರಕಾಶ ಕುಸಾಳೆ, ಶಿವರಾಮ್ ಚಹ್ವಾಣ್, ರವಿ ಬೆಳಮಗಿ, ಲಕ್ಷ್ಮೀಕಾಂತ, ಶಿವಶರಣಪ್ಪ, ರಾಜು, ಕಮಲಬಾಯಿ, ನಾಮದೇವ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…