ಸುಗ್ರೀವಾಜ್ಞೆ ಮೂಲಕ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹ

ಶಹಾಬಾದ: ಸುಗ್ರೀವಾಜ್ಞೆ ಮೂಲಕ ಕೂಡಲೇ ಒಳಮೀಸಲಾತಿ ಜಾರಿಗೊಳಿಸುವಂತೆ ಅಗ್ರಹಿಸಿ ದಲಿತ ಮಾದಿಗ ಸಮನ್ವಯ ಸಮಿತಿ(ಡಿಎಂಎಸ್‍ಎಸ್)ಯಿಂದ ಗ್ರೇಡ್-2 ತಹಶೀಲ್ದಾರ್ ಗುರುರಾಜ ಸಂಗಾವಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವiನವಿ ಸಲ್ಲಿಸಿದರು.

ದಲಿತ ಮಾದಿಗ ಸಮನ್ವಯ ಸಮಿತಿ ಅಧ್ಯಕ್ಷ ಶಿವರಾಜ ಕೋರೆ ಮಾತನಾಡಿ, ನ್ಯಾಯಮೂರ್ತಿ ಸದಾಶಿವ ಆಯೋಗದ ಆಸೆಯಂತೆ ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಜಾರಿ ಮಾಡುವುದಕ್ಕೆ ಆಯಾ ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ. ಪರಿಶಿಷ್ಟ ಜಾತಿ ಜನಾಂಗಕ್ಕೆ ಒಳಮೀಸಲಾತಿ ನೀಡಿದರೆ ಸಮಾನತೆಗೆ ಯಾವುದೇ ರೀತಿಯ ಧಕ್ಕೆಯಾಗುವುದಿಲ್ಲ. ಸಂವಿಧಾನದ ಆಶಯದಂತೆ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅನುಸಾರವಾಗಿ ರಾಜ್ಯ ಸರ್ಕಾರವು ಒಳಮೀಸಲಾತಿ ಜಾರಿ ಮಾಡುವುದಕ್ಕೆ ಯಾವುದೇ ತರಹದ ಕಾನೂನು ಉಲ್ಲಂಘನೆಯಾಗುವುದಿಲ್ಲವೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿರುತ್ತದೆ ಎಂದು ತಿಳಿಸಿದರು.

“ಶಹಾಬಾದ್ ತಾಲೂಕಿನ ದಲಿತ ಮಾದಿಗ ಸಮನ್ವಯ ಸಮಿತಿ ಸುಪ್ರೀಂ ಕೋರ್ಟ್‍ಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇವೆ. ಸುಪ್ರಿಂ ಕೋರ್ಟ್‍ನ ಈ ಐತಿಹಾಸಿಕ ನಿರ್ಣಯವನ್ನು ಸ್ವಾಗತಿಸುತ್ತೇವೆ ಮತ್ತು ರಾಜ್ಯದಲ್ಲಿರುವ ಮಾದಿಗ ಸಮಾಜದ ಹೋರಾಟಗಾರರು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಯಥವತ್ತಾಗಿ ಜಾರಿಗೊಳಿಸಬೇಕೆಂದು ಮೂರು ದಶಕಗಳ ಸತತವಾಗಿ ಹೋರಟ ಮಾಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಅತಿಹೆಚ್ಚು ಮಾದಿಗ ಸಮಾಜದ ಜನಾಂಗವಿದ್ದು, ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಯಾಗದ ಹೊರತು ಮಾದಿಗ ಸಮಾಜಕ್ಕೆ ನ್ಯಾಯ ದೊರಕಲಾರದು.

ವರ್ಷಗಳಲ್ಲಿ ಸಾವು-ನೋವುಗಳಾಗಿವೆ ಮಾದಿಗ ಸಮಾಜದ ಸಹೋದರರ ರಕ್ತ ಹರಿದಿದೆ. ಹೋರಾಟವನ್ನು ನಿರಂತರವಾಗಿ ಮಾಡುತ್ತ ಬಂದಿರುತ್ತೇವೆ. ಅದರ ಪ್ರತಿಫಲವಾಗಿ ಸುಪ್ರೀಂ ಕೋರ್ಟ್ ಐತಿಹಾಸಿಕ ನಿರ್ಣಯವನ್ನು ಪ್ರಕಟಿಸುವ ಮೂಲಕ ಮಾದಿಗ ಸಮಾಜಕ್ಕೆ ನ್ಯಾಯ ನೀಡಿದೆ ಮತ್ತು ಹೋರಾಟಕ್ಕೆ ಬೆಲೆ ಬಂದಿದೆ” ಎಂದು ಸಂತೋಷ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯದಲ್ಲಿರುವ ಹಲವಾರು ಇಲಾಖೆಯ ನೇಮಕಾತಿ ಹುದ್ದೆಗಳನ್ನು ಕೂಡಲೇ ತಡೆಹಿಡಿಯಬೇಕು. ಒಂದುವೇಳೆ ಒಳಮೀಸಲಾತಿ ಸುಗ್ರಿವಾಜ್ಞೆ ವಿಳಂಬವಾದಲ್ಲಿ ರಾಜ್ಯಾದ್ಯಂತ ದಲಿತ ಮಾದಿಗ ಸಮನ್ವಯ ಸಮಿತಿ ಸಂಘಟನೆ ಪರವಾಗಿ ತೀವ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಡಿಎಂಎಸ್‍ಎಸ್ ಕಾರ್ಯಾಧ್ಯಕ್ಷ ಶರಣು ಬಿ ಪಗಲಾಪೂರ, ಜಿಲ್ಲಾ ಪ್ರತಿನಿಧಿ ರವಿ ಬೆಳಮಗಿ, ಸಂಘಟನಾ ಕಾರ್ಯದರ್ಶಿ ನಾಗಪ್ಪ ಟಿ ರಾಯಚೂರಕ್, ಅಧ್ಯಕ್ಷ ಯಲ್ಲಾಲಿಂಗ ಹೈಯ್ಯಾಳಕರ ಸೇರಿದಂತೆ ಇತರರು ಇದ್ದರು.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

2 hours ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

3 hours ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

4 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

4 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

4 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420