ಕಲಬುರಗಿ: ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ 2024-25ನೇ ಸಾಲಿಗೆ ಕಲಬುರಗಿ ಜಿಲ್ಲೆಗೆ 13,175 ಮನೆಗಳನ್ನು ಜಿಪಿಎಸ್ ಮಾಡಲು ಗುರಿ ನೀಡಲಾಗಿದ್ದು, ಆದ್ಯತಾ ಪಟ್ಟಿಯಲ್ಲಿರುವ ಫಲಾನುಭವಿಗಳು ಇದೇ ಸೆ. 15 ರೊಳಗೆ ಅಗತ್ಯ ದಾಖಲೆಗಳನ್ನು ಗ್ರಾಮ ಪಂಚಾಯತಿಗೆ ಸಲ್ಲಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದ್ದಾರೆ.
ಜಿಲ್ಲೆಯ 13,175 ಮನೆಗಳ ಫಲಾನುಭವಿಗಳ ಪಟ್ಟಿ ಈಗಾಗಲೇ ಗ್ರಾಮ ಪಂಚಾಯತಿಯಲ್ಲಿ ಲಭ್ಯವಿದ್ದು, ಇದನ್ನು ಖಾತ್ರಿಪಡಿಸಿಕೊಂಡು ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಸಂಖ್ಯೆ, ಜಾಬ್ ಕಾರ್ಡ್, ಪಡಿತರ ಚೀಟಿ ಹಾಗೂ ಇತರೆ ಅಗತ್ಯ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ಅದರಂತೆ ಪಿಡಿಓ, ಟಿಎನ್ಒ ಹಾಗೂ ಡಿಇಓ ಅವರುಗಳು ಸೆ.12 ರಿಂದ 15ರ ವರೆಗೆ (ರಜೆ ದಿನಗಳು ಸೇರಿ) ಫಲಾನುಭವಿಗಳು ನೀಡುವ ಆಧಾರ ಕಾರ್ಡ, ಬ್ಯಾಂಕ್ ಪಾಸ್ ಬುಕ್, ಮೊಬೈಲ್ ಸಂಖ್ಯೆ, ಜಿಪಿಎಸ್ ಫೋಟೋಗಳನ್ನು ಕಡ್ಡಾಯವಾಗಿ ತಂತ್ರಾಂಶದಲ್ಲಿ ಅಪಲೋಡ್ ಮಾಡಬೇಕು.
ಈ ಸಂಬಂಧ ಫಲಾನುಭವಿಗಳಿಂದ ಏನೇ ದೂರು, ಅಕ್ಷೇಪಣೆಗಳಿದಲ್ಲಿ ಸಂಬಂಧಪಟ್ಟ ಆಯಾ ತಾಲೂಕಿನ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ಸಲ್ಲಿಸಿ ಬಗೆಹರಿಸಿಕೊಳ್ಳಬೇಕೆಂದು ತಿಳಿಸಲಾಗಿದೆ.
ಕೇಂದ್ರ ಸರ್ಕಾರದಿಂದ ಪ್ರಸಕ್ತ ಸಾಲಿಗೆ ರಾಜ್ಯಕ್ಕೆ 2,26,175 ಮನೆಗಳ ಗುರಿಯನ್ನು ಮಂಜೂರು ಮಾಡಿದ್ದು, ಪ್ರಧಾನಮಂತ್ರಿಗಳು ಇದೇ ಸೆ.15 ರಂದು ರಾಜ್ಯದ 1 ಲಕ್ಷ ಮನೆಗಳಿಗೆ ಏಕಕಾಲಕ್ಕೆ ಮೂದಲೇ ಕಂತಿನ ಅನುದಾನ ಬಿಡುಗಡೆ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…