ಕಲಬುರಗಿ: ಕೇಂದ್ರ ಸರಕಾರ ಜಾರಿಗೊಳ್ಳಿಸುತ್ತಿರುವ ವಕ್ಫ್ ಬಚಾವ್ ಆಂದೋಲನದ ನಿಮಿತ್ತ ಇಂದು ಹಫ್ತ್ ಗುಂಬಜ್ ದರ್ಗಾ ರಸ್ತೆಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಎಸ್.ಡಿ.ಪಿ.ಐ ಪಕ್ಷದಿಂದ ಪ್ರತಿಭಟನಾ ಸಮಾವೇಶ ಆಯೋಜಿಸಲಾಗಿದೆ.
ಸೆ. 13 ರಂದು ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಈ ಬಹಿರಂಗ ಪ್ರತಿಭಟನಾ ಸಮಾವೇಶ ಆಯೋಜನೆಗೊಂಡಿದ್ದು, ವಕ್ಫ್ ಬಚಾವ್ ಆಂದೋಲನಕ್ಕೆ ಚಾಲನೆ ನೀಡಲಾಗುವುದೆಂದು ಪಕ್ಷದ ಮುಖಂಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.