ಸೀತಾರಾಮ್ ಯೆಚೂರಿ ನಿಧನ: ಧ್ವಜ ಅರ್ಧಕ್ಕಿಳಿಸಿ ಗೌರವ ಸಂತಾಪ

ಹಟ್ಟಿ: ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಸೀತಾರಾಂ ಯೆಚೂರಿ ಅವರ ನಿಧನಕ್ಕೆ ಸಿಪಿಐ(ಎಂ) ಪಕ್ಷದ ಧ್ವಜವನ್ನು ಅರ್ಧಕ್ಕಿಳಿಸಿ ಗೌರವ ಸಂತಾಪ ಸಲ್ಲಿಸಲಾಯಿತು.

ಹಟ್ಟಿ ಪಟ್ಟಣದ ಪಕ್ಷದ ಕಚೇರಿಯಲ್ಲಿ ತಾಲೂಕು ಕಾರ್ಯದರ್ಶಿ ರಮೇಶ ವೀರಾಪೂರು ಗುರುವಾರದಂದು ಸಿಪಿಐಎಂ ಧ್ವಜ ಅರ್ಧಕ್ಕಿಳಿಸಿ ಮಾತನಾಡಿದರು.

ಎಸ್ಎಫ್ಐ ಅಖಿಲ ಭಾರತ ಮಾಜಿ ಅಧ್ಯಕ್ಷರಾದ ಕಾಂ. ಸೀತಾರಾಮ್ ಯೆಚೂರಿ ಅವರು 1975 ರಲ್ಲಿ ಜೆಎನ್ಯು ವಿವಿ ಯಲ್ಲಿ ಅಧ್ಯಯನ ಮಾಡುವಾಗ ಅಂದಿನ ಪ್ರಧಾನಮಂತ್ರಿಯಾಗಿದ್ದ ಇಂದಿರಾಗಾಂಧಿ ವಿರುದ್ಧ ಹೋರಾಟ ಮಾಡಿ ಜೈಲಿಗೆ ಸೇರಿದ್ದರು.

ವಿದ್ಯಾರ್ಥಿ ಯುವಜನರು ರೈತರು ಕಾರ್ಮಿಕರ ಪರ ಯಶಸ್ವಿ ಸಂಘರ್ಷಾತ್ಮಕ ಹೋರಾಟಗಳನ್ನು ಕಟ್ಟಿ ಪಾರ್ಲಿಮೆಂಟ್ ಸದಸ್ಯರಾಗಿ 2 ಬಾರಿ ಅತ್ಯುತ್ತಮ ಸಂಸದೀಯ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ತಮ್ಮ ಜೀವನದ ಕೊನೆಯವರೆಗೂ ದುಡಿಯುವ ಜನರ ಪರವಾಗಿ, ಕೋಮುವಾದಿ ಫ್ಯಾಸಿಸ್ಟ್ ನ ಹಿಮ್ಮೆಟ್ಟಿಸಲು ಶ್ರಮಿಸಿದ ಕಾಮ್ರೇಡ್ ಸೀತಾರಾಮ್ ಯೆಚೂರಿ ಅವರ ಅಗಲಿಕೆ ತುಂಬಲಾರದ ನಷ್ಟ ಎಂದರು.

ಹಿರಿಯ ಕಮ್ಯುನಿಸ್ಟ್ ಮುಖಂಡ ನರಸಿಂಹ ಬಾನ್ ಠಾಕೂರ್ ಮಾತನಾಡಿ ಯೆಚೂರಿಯವರು ಕಂಡ ಸಮಾಜವಾದಿ ಸಮಾಜದಕ್ಕಾಗಿ ಬಲಿಷ್ಠ ಕಮ್ಯುನಿಸ್ಟ್ ಚಳುವಳಿ ಕಟ್ಟಿ ಅವರ ಕನಸು ನನಸು ಮಾಡೋಣ ಎಂದರು.

ಈ ಸಂದರ್ಭದಲ್ಲಿ ಪಕ್ಷದ ಸದಸ್ಯರಾದ ಅಮರೇಶ ಗುರಿಕಾರ, ಕೊಂಡಯ್ಯ, ನಿಂಗಪ್ಪ ಎಂ., ಹನೀಫ್, ಅಲ್ಲಾಭಕ್ಷ ಸಾಸಿಹಾಳ, ಚಂದ್ರಶೇಖರ್ ಅಂಬೇಡ್ಕರ್ ನಗರ, ರಾಜರತ್ನಂ, ಖಾಜಾ ಮೈನುದ್ದೀನ್, ರಿಯಾಜ್, ಹಾಜಿಬಾಬು, ನಾಗರಾಜ್, ವಿನೋದ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

7 hours ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

7 hours ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

8 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

9 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

9 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420