ಕಲಬುರಗಿ: ಶ್ರೀ ಗುರು ಕುಮಾರೇಶ್ವರ ನಾಟ್ಯ ಸಂಘ ಹಾನಗಲ್ ಇವರ 42ನೇ ವಾರ್ಷಿಕೋತ್ಸವದ ಅಂಗವಾಗಿ ಕೊಡುವ ರಾಜ್ಯಮಟ್ಟದ ಕುಮಾರಶ್ರೀ ಪ್ರಶಸ್ತಿಗೆ ಶ್ರೀ ರೇವಣಸಿದ್ದೇಶ್ವರ ನಾಟ್ಯ ಸಂಘ ರೇವಗ್ಗಿ ರಟಕಲ್ ನ ಮಾಲೀಕರಾದ ಶಿವರಾಜ್ ಪಾಟೀಲ್ ಗೊಣಗಿ ಮತ್ತು ಸಿದ್ದಲಿಂಗಯ್ಯ ಸ್ವಾಮಿ ಮಲ್ಕೊಡ, ಶಂಕರ್ ಜಿ ಹೂವಿನಹಿಪ್ಪರಗಿ ಚಿಂಚೋಳಿ ಮತ್ತು ಬಾಬು ಗೋಪಾನ ಬೆಣ್ಣೂರ್. ಅವರು ಆಯ್ಕೆಯಾಗಿದ್ದಾರೆ ಎಂದು ಸಂಘದ ಮಾಲೀಕ ಎಲ್ ಬಿ ಶೇಕ್ ಮಾಸ್ಟರ್ ಮತ್ತು ಸಂಚಾಲಕರಾದ ಶ್ರೀಧರ್ ಹೆಗಡೆ ತಿಳಿಸಿದ್ದಾರೆ.
ಇದೇ ಸೆಪ್ಟೆಂಬರ್ 27ರಂದು ಕಲಬುರಗಿಯ ಎಸ್ ಎಂ ಪಂಡಿತರಂಗ ಮಂದಿರದಲ್ಲಿ ಬೆಳಗ್ಗೆ 10:30ಕ್ಕೆ ಹಾರಕುಡ್ ಶ್ರೀ ಡಾ. ಚನ್ನವೀರ ಶಿವಾಚಾರ್ಯ ನೇತೃತ್ವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಂಗಭೂಮಿ ಕ್ಷೇತ್ರದ ಮಾಲೀಕರಾಗಿ ಹತ್ತಾರು ವರ್ಷ ಸಲ್ಲಿಸಿದ ಅತ್ಯಮೂಲ್ಯ ಸೇವೆಯನ್ನು ಗುರುತಿಸಿ ಶಿವರಾಜ್ ಪಾಟೀಲ್ ಗೊಣಗಿ ಈ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ ಆಗಿದಕ್ಕೆ ರಂಗಭೂಮಿಯ ಕಲಾವಿದರುಗಳು ಮತ್ತು ಕಲಾ ಅಭಿಮಾನಿಗಳಾದ ಶ್ರೀರೇವಣಸಿದ್ದೇಶ್ವರ ನಾಟ್ಯ ಸಂಘದ ಕಲಾವಿದ ಮತ್ತು ಮಾಲೀಕ ರೈತ ಸೇನೆಯ ಕಾಳಗಿ ತಾಲ್ಲೂಕು ಅಧ್ಯಕ್ಷ ವೀರಣ್ಣ ಗಂಗಾಣಿ ರಟಕಲ್, ರಾಜಶೇಖರ್ ಗುಡುದ ಪತ್ರಿಕಾ ಪ್ರಕಟಣೆ ಮೂಲಕ ಅಭಿನಂದನೆ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…