ಕಲಬುರಗಿ: ಸ್ಥಳೀಯ ಪತ್ರಿಕಾ ಭವನದ ಸಾಂಸ್ಕøತಿಕ ಭವನದಲ್ಲಿ ಸೆ.15 ರಂದು ಬೆಳಗ್ಗೆ 10.30 ಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಲಬುರಗಿ ಜಿಲ್ಲಾ ಘಟಕದಿಂದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ-2024 ಮತ್ತು ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ ತಿಳಿಸಿದ್ದಾರೆ.
ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಧರ್ಮಸಿಂಗ ಅವರು ಆಗಮಿಸಿ ಉದ್ಘಾಟಿಸಲಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಅವರಿಗೆ ತವರಿನ ಸನ್ಮಾನ ಮಾಡಲಾಗುವುದು. ಪೊಲೀಸ ಆಯುಕ್ತ ಡಾ.ಶರಣಪ್ಪ ಎಸ್.ಡಿ., ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಸಿದ್ಧೇಶ್ವರಪ್ಪ ಜಿ.ಬಿ, ಕೆಯುಡಬ್ಲ್ಯೂಜೆ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ ಠಾಕೂರ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಮಾನವ ಕಂಪ್ಯೂಟರ್ ಸಿದ್ದು ಎಸ್.ಲೌಟೆ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ರಾಜ್ಯ ಸಮಿತಿ ಸದಸ್ಯ ಡಾ.ಶಿವರಂಜನ ಸತ್ಯಂಪೇಟೆ ಉಪಸ್ಥಿತರಿರಲಿದ್ದಾರೆ.
ಈ ಸಂದರ್ಭದಲ್ಲಿ ಸಾಧಕರನ್ನು, ಪ್ರಶಸ್ತಿ ಪುರಸ್ಕøತರನ್ನು ಸನ್ಮಾನಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…