ಶಹಾಪುರ; ಯಾದಗಿರಿ ಜಿಲ್ಲೆಯ ದೊಡ್ಡ ಕೆರೆಗಳಲ್ಲಿ ಒಂದಾಗಿರುವ ತಾಲೂಕಿನ ಸಗರ ಶಂಕರನಾರಾಯಣನ ಕೆರೆ ಕೃಷಿ ಚಟುವಟಿಕೆಗಳಿಗೆ ವರದಾನವಾಗಿದೆ.ಆದರೆ ವಿಪರ್ಯಾಸವೇನಂದರೆ,ಹೂಳು ತುಂಬಿರುವ ಕೆರೆಯ ನಾಲಾ ಸ್ವಚ್ಛಗೊಳಿಸದೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ.
ಕೆರೆ ನೀರು ತುಂಬಿದ ಮೇಲೆ ತೂಬಿನ ಹಾಗೂ ನಾಲಾ ಮೂಲಕ ಹರಿದು ಹಳ್ಳ ಸೇರುತ್ತದೆ,ನಾಲಾ ಸ್ವಚ್ಛಗೊಳಿಸದ ಕಾರಣದಿಂದಾಗಿ ಹೂಳು ತುಂಬಿಕೊಂಡು ಹೆಚ್ಚುವರಿ ನೀರು ನಾಲಾದ ಪಕ್ಕದಲ್ಲಿರುವ ಹೊಲಗದ್ದೆಗಳಿಗೆ ನುಗ್ಗಿ, ಹೊಲಗದ್ದೆಗಳಲ್ಲಿ ನೀರು ಪಾಚಿಗಟ್ಟಿ ದುರ್ವಾಸನೆ ಬೀರುತ್ತಿದೆ,ಜೊತೆಗೆ ಸೊಳ್ಳೆಗಳು ಉತ್ಪತ್ತಿಯಾಗಿ, ರೋಗ ರುಜಿನಗಳು ಹರಡುವ ಭೀತಿಯಲ್ಲಿ ಗ್ರಾಮದ ಸಾರ್ವಜನಿಕರಿಗೆ ತುಂಬಾ ಆತಂಕ ಮನೆ ಮಾಡಿದೆ,
ಕೆರೆಯ ನಾಲಾ ಸ್ವಚ್ಛಗೊಳಿಸಬೇಕೆಂದು ಸಾಕಷ್ಟು ಬಾರಿ ಯಾದಗಿರಿಯ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆಯ ಗಮನಕ್ಕೆ ತಂದರು ಪ್ರಯೋಜನೆಯಾಗಿಲ್ಲ, ಕಳೆದ ಆರು ತಿಂಗಳ ಹಿಂದೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಬಂದು ಸರ್ವೇ ಮಾಡಿದರು ಇನ್ನುವರೆಗೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ,ಕೆರೆಯ ನಾಲಾ ಸ್ವಚ್ಛ ಗೊಳಿಸಬೇಕು ಇಲ್ಲದಿದ್ದರೆ ಸಣ್ಣ ನೀರಾವರಿ ಇಲಾಖೆಗೆ ಬೀಗ ಜಡೆದು ಪ್ರತಿಭಟನೆ ಮಾಡಲಾಗುತ್ತದೆ ಎಂದು ಗ್ರಾಮದ ನೊಂದ ರೈತರು ಆಗ್ರಹಿಸಿದ್ದಾರೆ.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…