ಕಲಬುರಗಿ: ಸರಕಾರಿ ನೌಕರರೆಂದು ಪರಿಗಣಿಸಿ ಸಮಾಜಿಕ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಎರಡು ದಿನಗಳ ರಾಜ್ಯ ಮಟ್ಟದ ಪ್ರಥಮ ಸಮ್ಮೇಳನಕ್ಕೆ ಶುಕ್ರವಾರ ಕಲಬುರಗಿ ನಗರದಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ಬೃಹತ್ ಬೃಹತ್ ಮೆರವಣಿಗೆ ನಡೆಸಿದರು.
ನಗರದ ಸರ್ಧಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಸಮಾರಂಭ ನಡೆಯುವ ಸ್ಥಳವಾಗಿರುವ ಸಾರ್ವಜನಿಕ ಉದ್ಯಾನವನದವರೆಗೆ ಬೃಹತ್ ಜಾಥಾ ನಡೆಸಿ, ನಂತರ ವಿರಶೈವ ಕಲ್ಯಾಣ ಮಂಟಪದ ಮುಂಭಾಗದಲ್ಲಿ ಬಹಿರಂಗ ಸಭೆಡ ನಡೆಸಿ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷರಾದ ಕೆ.ಸೋಮಶೇಖರ ಯಾದಗೀರಿ ಅವರು ಮಾತನಾಡಿದ್ದರು. ಈ ಸಂದರ್ಭದಲ್ಲಿ ಸಂಘಟನೆ ಪದಾಧಿಕಾರಿಗಳು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಎಐಯುಟಿಯುಸಿ ಕಾರ್ಮಿಕ ಸಂಘಟನೆ ಜಂಟಿಯಾಗಿ ಈ ಸಮ್ಮೇಳನ ಆಯೋಜಿಸಲಾಗಿದ್ದು, ಆಶಾ ಕಾರ್ಯಕರ್ತೆಯರ ಅನೇಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿ ಸರ್ಕಾರದ ಗಮನ ಸೆಳೆಯಲು ಈ ಸಮ್ಮೇಳನ ಆಯೋಜಿಸಲಾಗಿದೆ.