ಆಳಂದ: ಗುಂಡಿಕ್ಕಿ ಮಾಜಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ

0
113

ಅಳಂದ: ಮಾಜಿ ಗ್ರಾಮ ಪಂಚಾಯತಿ ಸದಸ್ಯ ಓರ್ವನನ್ನು ಗುಂಡಿಕ್ಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಖಾನಾಪುರ ಜಿಟ್ಗಾ ರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಇಲ್ಲಿನ ಪಡಸಾವಳಿ ಗ್ರಾಮದ ಗ್ರಾಮ್ ಪಂಚಾಯತಿಯ ಮಾಜಿ ಸದಸ್ಯ ವಿಶ್ವನಾಥ್ ಕಲ್ಯಾಣಿ ಜಮಾದಾರ್ (50) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಊರಿನಿಂದ ಬೈಕ್ ಮೇಲೆ ಆಳಂದಗೆ ಹೊಗುತ್ತಿದ್ದ ವೇಳೆ ಬೈಕ್ ಮೇಲೆ ಬಂದ ಇಬ್ಬರು ದುಷ್ಕರ್ಮಿಗಳು ವಿಶ್ವನಾಥ್ ಮೇಲೆ ಮೂರು ಬಾರಿ ಗುಂಡು ಹೊಡೆದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Contact Your\'s Advertisement; 9902492681

ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಮತ್ತು ಡಿವೈಎಸ್ಪಿ ಪಿಎಸ್ಐ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಅಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here