ಶ್ರೀಮತಿ ವಿ ಜಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆ

ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯದಲ್ಲಿ ಶೈಕ್ಷಣಿಕ ವರ್ಷ ೨೦೨೪-೨೫ ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ ಜರುಗಿತು.

ಈ ಚುನಾವಣಾ ಪ್ರಕ್ರಿಯೆಗೆ ಮುಖ್ಯ ಅತಿಥಿಗಳಾಗಿ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಮಹಾವಿದ್ಯಾಲಯದ ಪ್ರಭಾರಿ ಪ್ರಾಚಾರ್ಯರಾದ ಡಾ. ವೀಣಾ ಹೊನಗಂಟಿಕರ್ ಅವರು ಸಸಿಗೆ ನೀರುಣಿಸುವುದರ ಮುಖಾಂತರ ಚಾಲನೆ ನೀಡಿದರು.
ವಿದ್ಯಾರ್ಥಿಗಳಲ್ಲಿ ಚುನಾವಣೆ ಹಾಗೂ ಮತದಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ಚುನಾವಣೆಯನ್ನು ಸರ್ಕಾರಿ ಸಾರ್ವತ್ರಿಕ ಚುನಾವಣಾ ಮಾದರಿಯಲ್ಲಿ “ಕಿಶೋರಿ ಮತಗಟ್ಟೆ”ಯನ್ನು ರಚಿಸಿ ಮತದಾನ ಮಾಡುವ ಪ್ರಕ್ರಿಯೆಯನ್ನು ಕೈಗೊಳ್ಳಲಾಯಿತು.

ಇದೇ ಸಂದರ್ಭದಲ್ಲಿ ಪ್ರಾಂಶುಪಾಲರಿಂದ ನೇಮಕಗೊಂಡ ಮುಖ್ಯಚುನಾವಣಾ ಅಧಿಕಾರಿಯಾದ ಡಾ. ನಯನತಾರ ಆಸ್ಪಲ್ಲಿ ಅವರು ಚುನಾವಣೆಗೆ ಸೂಚಿಸಲಾದ ನಿಯಮಗಳು ಮತ್ತು ನಿಬಂಧನೆಗಳೊಂದಿಗೆ ಚುನಾವಣೆಯ ವೇಳಾಪಟ್ಟಿ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಅವಧಿ ಕುರಿತಾಗಿ ತಿಳಿಸಿದರು.

ಮುಂದುವರೆದು ಮಾತನಾಡುತ್ತಾ ಕಾಲೇಜು ಆಡಳಿತವು ವಿದ್ಯಾರ್ಥಿನಿಯರÀ ಸಮಗ್ರ ಅಭಿವೃದ್ಧಿಗೆ ಗಮನಾರ್ಹ ಒತ್ತು ನೀಡಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ವಿದ್ಯಾರ್ಥಿನಿಯರು ತಮ್ಮ ಆಲೋಚನೆಗಳನ್ನು ವ್ಯಕ್ತಪಡಿಸಲು, ಗಮನಾರ್ಹ ಸಾಧನೆಗಳನ್ನು ಸಾಧಿಸಲು ಅವರನ್ನು ಸಶಕ್ತಗೊಳಿಸುವ ವಿವಿಧ ಚಟುವಟಿಕೆಗಳ ಮೂಲಕ ಅವರ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ನೀಡಲಾಗುವ ಅವಕಾಶಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಯು ಕೂಡಾ ಒಂದಾಗಿದೆ ಎಂದರು.

ಮೊದಲಿಗೆ ಚುನಾವಣೆಯಲ್ಲಿ ಪ್ರತಿನಿಧಿಸಲು ಬಯಸುವ ವಿದ್ಯಾರ್ಥಿನಿಯರಿಂದ ನಾಮಪತ್ರಗಳನ್ನು ಸ್ವೀಕರಿಸಲಾಯಿತು; ನಂತರ ಚುನಾವಣಾ ದಿನದಂದು ವರ್ಗ ಪ್ರತಿನಿಧಿಗಳ ಆಯ್ಕೆ ಮಾಡಲಾಯಿತು. ಆಯ್ಕೆಯಾದ ವರ್ಗಪ್ರತಿನಿಧಿಗಳು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಒಮ್ಮತದಿಂದ ಆಯ್ಕೆ ಮಾಡಿದರು.

೨೦೨೪-೨೫ ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆೆಯು ಪ್ರಾಚಾರ್ಯರಾದ ಡಾ. ಮೋಹನರಾಜ ಪತ್ತಾರ ಅವರ ಮಾರ್ಗದರ್ಶನದಲ್ಲಿ ಹಾಗೂ ಮುಖ್ಯ ಚುನಾವಣಾ ಅಧಿಕಾರಿಗಳಾದ ಡಾ. ನಯನತಾರ ಆಸ್ಪಲ್ಲಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿತು. ಇದೇ ಸಂದರ್ಭದಲ್ಲಿ ಶ್ರೀಮತಿ ಶೈಲಜಾ ನಾಕೇದಾರ ಅವರನ್ನು ವಿದ್ಯಾರ್ಥಿ ಸಂಘದ ಸಲಹೆಗಾರರಾಗಿ ಮತ್ತು ಸಿಬ್ಬಂದಿ ವರ್ಗದ ಕಾರ್ಯದರ್ಶಿಗಳಾಗಿ ಶ್ರೀಮತಿ ರಷ್ಮಿ ಸ್ವಾಮಿ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತು.

ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾಗಿ ಕುಮಾರಿ ಶ್ರದ್ಧಾ ಶಕ್ತಿ, ಪ್ರಧಾನ ಕಾರ್ಯದರ್ಶಿಗಳಾಗಿ ಕುಮಾರಿ. ಫಾಯ್ಜಾ ಖಾನಮ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಕುಮಾರಿ. ಫಾತೀಮಾ ಶನಮ್, ಕ್ರೀಡಾ ಕಾರ್ಯದರ್ಶಿಯಾಗಿ ಕುಮಾರಿ ಕರುಣಾ ಅವರು ಆಯ್ಕೆಯಾಗಿ ಉಳಿದ ವರ್ಗ ಪ್ರತಿನಿಧಿಗಳು ಸಂಘದ ಸದಸ್ಯರಾದರು.

ವಿದ್ಯಾರ್ಥಿ ಸಂಘದ ಚುನಾವಣಾ ಕಾರ್ಯದಲ್ಲಿ ಕಾಲೇಜಿನ ಎಲ್ಲಾ ಬೋಧಕ-ಬೋದಕೇತರ ಸಿಬ್ಬಂದಿಗಳು ಪಾಲ್ಗೋಂಡು ಯಶಸ್ವಿಗೊಳಿಸಿದರು ಎಂದು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪತ್ರಿಕಾ ಮಾಧ್ಯಮದ ಸಂಯೋಜಕರಾದ ಶ್ರಿ. ಐ. ಕೆ. ಪಾಟೀಲ ಪತ್ರಿಕಾ ಪ್ರಕಟಣೆಗಾಗಿ ತಿಳಿಸಿದ್ದಾರೆ.

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

11 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

12 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

12 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

12 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

13 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420