ಪ್ರಜಾಪ್ರಭುತ್ವ ದಿನಾಚರಣೆ- ಮಾನವ ಸರಪಳಿ ಯಶಸ್ವಿ

ಶಹಾಬಾದ: ನಗರದಿಂದ ಹಾದು ಹೋಗುವ ಎನ್‍ಹೆಚ್-150 ಹೆದ್ದಾರಿಗೆ ಹೊಂದಿಕೊಂಡಿರುವ ಮರತೂರದಿಂದ ಶಂಕರವಾಡಿ-ಮಾಲಗತ್ತಿ ಗ್ರಾಮದವರೆಗೆ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ರವಿವಾರ ಅಚ್ಚುಕಟ್ಟಾಗಿ ಮತ್ತು ಅರ್ಥಪೂರ್ಣವಾಗಿ ಮಾನವ ಸರಪಳಿ ರಚಿಸುವುದರ ಮೂಲಕ ತಾಲೂಕಾಡಳಿತ, ನಗರಸಭೆ ಹಾಗೂ ತಾಪಂ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಕಾರ್ಯಕ್ರಮ ಯಶಸ್ವಿಯಾಯಿತು.

ಬೆಳಿಗ್ಗೆ 8 ಗಂಟೆಗೆ ಶಾಲಾ ಮಕ್ಕಳು ಮತ್ತು ಶಿಕ್ಷಕರು ನಿಗದಿತ ಸ್ಥಳಕ್ಕೆ ಬಂದು ಸರದಿಯಲ್ಲಿ ನಿಂತರು. 9.30 ಗಂಟೆಗೆ ರಸ್ತೆಯುದ್ದಕ್ಕೂ ಶಾಲಾ ಮಕ್ಕಳು, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಕೂಲಿ ಕಾರ್ಮಿಕರು, ಸಾರ್ವಜನಿಕರು, ಅಧಿಕಾರಿ-ನೌಕರರು, ಚುನಾಯಿತ ಜನಪ್ರತಿನಿಧಿಗಳು ಪರಸ್ಪರ ಕೈ ಹಿಡಿದು ಮಾನವ ಸರಪಳಿ ರಚಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮಹತ್ವ ವಿಶ್ವಕ್ಕೆ ಸಾರಿದರು.

ಭಾರತದ ಶ್ರೇಷ್ಠ ಸಂವಿಧಾನದ ಮೂಲ ಆಶಯ ವಿಶ್ವಕ್ಕೆ ಪರಿಚಯಿಸುವ ಪ್ರಯತ್ನ ಮತ್ತು ಸಂವಿಧಾನ ಪೀಠಿಕೆ ವಾಚನ ಮಾಡುವ ಮೂಲಕ ಗಮನ ಸೆಳೆಯಲಾಯಿತು.ಪ್ರತಿ ಕಿಮೀ.ಗೆ ಒಬ್ಬರು ನೋಡಲ್ ಅಧಿಕಾರಿ ನೇಮಿಸಲಾಗಿತ್ತು.

ಸರಪಳಿ ಹಾದು ಹೋಗುವ ವಾಹನ ದಟ್ಟಣೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆ ಕಡೆ ಗಮನವಹಿಸಿ ವಾಹನ ಸವಾರರಿಗೆ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆ ನೋಡಿಕೊಂಡರು. ತಾಲೂಕಿನ ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಯಾವುದೇ ಲೋಪವಾಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಂಡರು. ಶಾಲಾ ಮಕ್ಕಳಿಗೆ ನೀರು ಮತ್ತು ಬಿಸ್ಕೀಟ್ ಹಂಚಲಾಯಿತು. ಆದರೆ ಎರಡು ಗಂಟೆಗಳವರೆಗೆ ಮಾನವ ಸರಪಳಿಯಲ್ಲಿ ನಿಂತ ಬಹುತೇಖ ಶಾಲಾ-ಮಕ್ಕಳಿಗೆ, ಉಪನ್ಯಾಸಕರಿಗೆ, ಶಿಕ್ಷಕರಿಗೆ ನೀರಿನ ಸರಿಯಾದ ವ್ಯವಸ್ಥೆ ಮಾಡದಿರುವುದೊಂದೆ ಅಸಮಾಧಾನಕ್ಕೆ ಕಾರಣವಾಯಿತು.

ತಹಸೀಲ್ದಾರ ಜಗದೀಶ ಚೌರ್, ಪೌರಾಯುಕ್ತ ಡಾ. ಕೆ.ಗುರಲಿಂಗಪ್ಪ, ಗ್ರೇಡ್-2 ತಹಸೀಲ್ದಾರ ಗುರುರಾಜ ಸಂಗಾವಿ, ತಾಪಂ ಇಓ ಮಲ್ಲಿನಾಥ ರಾವೂರ, ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪ ಹಳ್ಳಿ, ಖಾಡಾ ಅಧ್ಯಕ್ಷ ಡಾ.ರಶೀದ್ ಮರ್ಚಂಟ್, ವಿಜಯಕುಮಾರ ಮಟ್ಟತ್ತಿ, ಮೃತ್ಯುಂಜಯ್ ಹಿರೇಮಠ, ಪೀರಪಾಶಾ, ಕಿರಣಕುಮಾರ ಚವ್ಹಾಣ,ಪೂಜಪ್ಪ ಮೇತ್ರೆ, ಮಲ್ಲಣ್ಣ ಮರತೂರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

emedialine

Recent Posts

ಅತಿವೃಷ್ಟಿ ಬೆಳೆ ಹಾನಿ ಪರಿಹಾರ ಕೊಡಿ: ಮುಖ್ಯಮಂತ್ರಿಗಳಿಗೆ ಪ್ರಾಂತ ರೈತ ಸಂಘದ ಆಗ್ರಹ

ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…

11 hours ago

ಯುವಜನ ಒಕ್ಕೂಟದಿಂದ 76 ನೇ ಕಲ್ಯಾಣ ಕರ್ನಾಟಕ ಸ್ವಾತಂತ್ರೋತ್ಸವ ಆಚರಣೆ

ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…

11 hours ago

ಸೆ.19 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…

12 hours ago

ಕೆಎಎಸ್‌ಎಸ್‌ಐಎಗೆ ನಿಜಾಮೋದ್ದಿನ್ ಚಿಸ್ತಿ ನಾಮನಿರ್ದೇಶನ

ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…

12 hours ago

ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಸಮಾಧಾನವಿದೆ, ತೃಪ್ತಿಯಿಲ್ಲ: ಬಿಆರ್ ಪಾಟೀಲ

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…

13 hours ago

ವಕ್ಫ್ ಬೋರ್ಡ್ ಆಸ್ತಿ ಒತ್ತುವರಿ ನಿಯಂತ್ರಣಕ್ಕೆ ಕಂಪೌಂಡ್ ನಿರ್ಮಾಣ; ಬಿ.ಜೆಡ್.ಜಮೀರ್ ಅಹ್ಮದ್ ಖಾನ್

ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420