ಇಂದು ಶ್ರಮಿಸಿದರೆ ಮುಂದಿನ ಸುಖ ಜೀವನಕ್ಕೆ ದಾರಿದೀಪ

ಕಲಬುರಗಿ: ಇಂದಿನ ಮಕ್ಕಳು ಬಹಳ ಕಷ್ಟಪಟ್ಟು ಇಂತಹ ಸ್ಪರ್ಧಾ ಯುಗದಲ್ಲಿ ಶ್ರಮ ಪಟ್ಟು ಓದಿದರೆ ಮುಂದಿನ ನಿಮ್ಮ ಜೀವನಕ್ಕೆ ದಾರಿದೀಪವಾಗುವುದೆಂದು ಐಎಎಸ್ ಅಧಿಕಾರಿ ಮತ್ತು ಗೃಹ ಮಂಡಳಿ ಆಯುಕ್ತರಾದ ಶ್ರೀ ಕವಿತಾ ಮನ್ನಿಕೇರಿಯವರು ಹೇಳಿದರು.

ಅವರು ಜಿಲ್ಲಾ ಗಾಣಿಗ ಸಮಾಜ ನೌಕರರ ಸಂಘ ಹಮ್ಮಿಕೊಂಡ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯ ಪ್ರತಿಭಾನ್ವಿತ ಮಕ್ಕಳಿಗೆ ಪುರಸ್ಕಾರ ನೀಡಿ ಸನ್ಮಾನಿಸಿ ಮಾತನಾಡುತ್ತಾ ಜೀವನದಲ್ಲಿ ಚಿಕ್ಕ ವಯಸ್ಸಿನಲ್ಲಿ ಕಷ್ಟ ಪಟ್ಟರೆ ಮುಂದೆ ನಾವು ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆಯನ್ನು ಪಡೆದು ಸುಖಕರವಾದ ಜೀವನವನ್ನು ನಡೆಸಬಹುದು ಇಲ್ಲದೇ ಹೋದರೆ ಜೀವನದಲ್ಲಿ ಬಹಳ ಹೇಳು ಬೀಳುಗಳನ್ನು ಕಾಣೋದಲ್ಲದೆ ಕಷ್ಟದ ಸನ್ನಿವೇಶಗಳನ್ನು ಎದುರಿಸಬೇಕಾಗುತ್ತದೆ ಏಕೆಂದರೆ ಇಂದಿನ ಸ್ಪರ್ಧಾ ಯುಗದಲ್ಲಿ ನಾವು ಎಷ್ಟೇ ಕಷ್ಟಪಟ್ಟು ಶ್ರಮಿಸಿ ಓದಿದರೂ ಅದು ಕಡಿಮೆ ಆದ್ದರಿಂದ ನಮ್ಮ ಸಮಾಜದ ಮಕ್ಕಳು ಬಹಳ ಶ್ರಮವಹಿಸಿ ಈಗ ಶ್ರಮಪಟ್ಟರೆ ಮುಂದೆ ನಿಮಗೆ ಸುಖಕರ ಜೀವನ ಸಿಗಲಿದೆ ಎಂದು ಹೇಳಿದರು.

ವೇದಿಕೆ ಮೇಲೆ ಅಸಿನ ರಾಧ ಸಮಾಜದ ಇನ್ನೊಬ್ಬ ಅತಿಥಿಗಳಾದ ಕೇಂದ್ರೀಯ ವಿಶ್ವವಿದ್ಯಾಲಯದ ಕುಲ ಸಚಿವರಾದ ರುದ್ರಗೌಡ ಬಿರಾದಾರವರು ಮಾತನಾಡುತ್ತಾ ನಮ್ಮ ಸಮಾಜ ಇನ್ನೂ ಬಹಳ ಹಿಂದುಳಿದಿದೆ ಅದಕ್ಕೆ ಮುಂದೆ ತರಲು ಶಿಕ್ಷಣ ಬಹಳ ಅಗತ್ಯವಿದೆ ಎಂದು ಒತ್ತಿ ಹೇಳಿದರು.

ಇನ್ನೋರ್ವ ಅತಿಥಿಗಳಾದ ಸೇಡಂನ ಆದಾಯ ತೆರಿಗೆ ಇಲಾಖೆ ಅಧಿಕಾರಿ ಸುನಿಲ್ ಬಾವಿಕಟ್ಟಿ ಮಾತನಾಡುತ್ತಾ ಮಕ್ಕಳು ಗುರಿ ಇಟ್ಟುಕೊಂಡು ಪರಿಶ್ರಮ ಪಟ್ಟರೆ ಜೀವನದಲ್ಲಿ ಅಸಾಧ್ಯವಾದುದು ಯಾವುದೂ ಇಲ್ಲ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಜಿಲ್ಲಾಧ್ಯಕ್ಷ ಸಂಗನಗೌಡ ಪೋಲಿಸ್ ಪಾಟೀಲ್ ಅವರು ಮಾತನಾಡುತ್ತಾ ನಮ್ಮ ಸಮಾಜ ಇನ್ನೂ ಬಹಳ ಹಿಂದುಳಿದಿದೆ ಅದಕ್ಕೆ ಮುಖ್ಯ ಕಾರಣ ನಮ್ಮಲ್ಲಿನ ಒಗ್ಗಟ್ಟಿನ ಕೊರತೆ ಎಂದರು.

ಆದಕಾರಣ ಸಮಾಜ ಬಾಂಧವರು ಯಾರು ಅನ್ಯತಾ ಭಾವಿಸದೆ ಸಮಾಜದಲ್ಲಿ ಬೆಳೆಯುವ ವ್ಯಕ್ತಿಯನ್ನು ನಾವೆಲ್ಲರೂ ಕೂಡಿ ಪ್ರೋತ್ಸಾಹಿಸಿದರೆ ಸಮಾಜ ಮುಂದೆ ಬರಲು ಸಾಧ್ಯ ಎಂದು ಹೇಳಿದರು.

ಉದ್ಘಾಟನೆಯನ್ನು ಆಳೂರು ಸಿದ್ದಾರೂಢ ಮಠದ ಶಂಕರಾನಂದ ಮಹಾಸ್ವಾಮಿಗಳು ನೆರವೇರಿಸಿದರು
ವೇದಿಕೆಯ ಮೇಲೆ ಸಮಾಜದ ಹಿರಿಯರಾದ ಅಪ್ಪಾರಾಯ ಗೌಡ ಮಾಲಿ ಪಾಟೀಲ್ ಅತ್ನೂರ್, ಮಲ್ಲಿನಾಥ ಗೌಡ ಪಾಟೀಲ ಯಲಗೋಡ, ದೇವೇಂದ್ರ ಎಸ್ ಬಿರಾದಾರ್ ಮತ್ತು ಗಾಣಿಗ ಸಮಾಜದ ಜಿಲ್ಲಾಧ್ಯಕ್ಷರಾದ ಶರಣು ಬಿಲ್ಲಾಡ್, ಮತ್ತು ಆಡಳಿತ ಮಂಡಳಿಯ ಸದಸ್ಯರು ಮತ್ತು ನಿರ್ದೇಶಕರು ಉಪಸ್ಥಿತರಿದ್ದರು.

emedialine

Recent Posts

ಅತಿವೃಷ್ಟಿ ಬೆಳೆ ಹಾನಿ ಪರಿಹಾರ ಕೊಡಿ: ಮುಖ್ಯಮಂತ್ರಿಗಳಿಗೆ ಪ್ರಾಂತ ರೈತ ಸಂಘದ ಆಗ್ರಹ

ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…

1 hour ago

ಯುವಜನ ಒಕ್ಕೂಟದಿಂದ 76 ನೇ ಕಲ್ಯಾಣ ಕರ್ನಾಟಕ ಸ್ವಾತಂತ್ರೋತ್ಸವ ಆಚರಣೆ

ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…

2 hours ago

ಸೆ.19 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…

2 hours ago

ಕೆಎಎಸ್‌ಎಸ್‌ಐಎಗೆ ನಿಜಾಮೋದ್ದಿನ್ ಚಿಸ್ತಿ ನಾಮನಿರ್ದೇಶನ

ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…

2 hours ago

ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಸಮಾಧಾನವಿದೆ, ತೃಪ್ತಿಯಿಲ್ಲ: ಬಿಆರ್ ಪಾಟೀಲ

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…

3 hours ago

ವಕ್ಫ್ ಬೋರ್ಡ್ ಆಸ್ತಿ ಒತ್ತುವರಿ ನಿಯಂತ್ರಣಕ್ಕೆ ಕಂಪೌಂಡ್ ನಿರ್ಮಾಣ; ಬಿ.ಜೆಡ್.ಜಮೀರ್ ಅಹ್ಮದ್ ಖಾನ್

ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420