ಕಲಬುರಗಿ; ಡಾ. ಬಿ.ಡಿ.ಜತ್ತಿ ವಚನ ಅಧ್ಯಯನ ಮತ್ತು ಸಂಶೋಧನ ಕೇಂದ್ರ, ಕಲಬುರಗಿ ಬಸವ ಸಮಿತಿ ಈ ಸಂಸ್ಥೆಯು ಸಾಹಿತ್ಯ, ಸಂಶೋಧನೆ, ಸಮಾಜಿಕ ಸೇವೆ, ಧಾರ್ಮಿಕ ಸೇವೆ ಮಾಡುತ್ತಿರುವ ಗಣ್ಯರನ್ನು, ಸಂಸ್ಥೆಗಳನ್ನು ಗುರುತಿಸಿ ಭಾರತದ ರಾಷ್ಟ್ರಪತಿಗಳಾಗಿದ್ದ ಡಾ. ಬಿ.ಡಿ.ಜತ್ತಿ ಅವರ ಹೆಸರಿನಲ್ಲಿ ಪ್ರತಿವರ್ಷ “ಡಾ. ಬಿ.ಡಿ. ಜತ್ತಿ ಸಂಶೋಧನ ಪ್ರಶಸ್ತಿ”ಯನ್ನು ನೀಡುತ್ತ ಬರಲಾಗಿದೆ.

ಡಾ. ಬಿ.ಡಿ.ಜತ್ತಿ ಅವರ ಜನ್ಮದಿನ. ಅವರು ಬಸವ ಸಮಿತಿ ಸ್ಥಾಪನೆ ಮಾಡಿದ ನೆನಪಿಗಾಗಿ ಅವರ ಜನ್ಮದಿನವನ್ನು ‘ಬಸವ ಸಮಿತಿ ಸಂಸ್ಥಾಪಕರ ದಿನಾಚರಣೆ’ ಎಂದು ಆಚರಿಸುತ್ತ ಬರಲಾಗಿದೆ.

2018 ರಿಂದ ಶರಣ ಸಮಾಜ, ಧರ್ಮ, ಸಾಹಿತ್ಯ-ಸಂಸ್ಕøತಿ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹಿರಿಯರಿಗೆ, ಸಂಶೋಧನೆ ಗೈದ ವಿದ್ವಾಂಸರಿಗೆ, ಸಂಸ್ಥೆಗಳಿಗೆ ಡಾ. ಬಿ.ಡಿ. ಜತ್ತಿ ಅವರ ಹೆಸರಿನಲ್ಲಿ ಒಂದು ಪ್ರಶಸ್ತಿಯನ್ನು ಕೊಡಮಾಡುತ್ತ ಬರುತ್ತಿದೆ.

ಭಾಲ್ಕಿ ಹಿರೇಮಠ ಸಂಸ್ಥಾನ ಕನ್ನಡದ ಮಠ, ಇದು ಜನತೆಯ ಮಠ, ಪೂಜ್ಯ ಲಿಂ. ಚನ್ನಬಸವ ಪಟ್ಟದ್ದೇವರು ನಡೆದಾಡುವ ದೇವರೆಂದೇ ಪ್ರಸಿದ್ಧರಾದವರು. ಅಂಥವರ ಗರಡಿಯಲ್ಲಿ ಪಳಗಿದವರು ಪೂಜ್ಯ ಡಾ. ಬಸವಲಿಂಗ ಪಟ್ಟದ್ದೇವರು. ಬಸವಣ್ಣನವರ ತತ್ತ್ವ ಸಿದ್ಧಾಂತದ ಪ್ರಸಾರಕ್ಕಾಗಿ ತಮ್ಮನ್ನು ಸಮರ್ಪಿಸಿಕೊಂಡವರು. ಸಮಗ್ರ ಪರಿವರ್ತನೆ ಜೊತೆಗೆ ಸಾಹಿತ್ಯ-ಸಂಸ್ಕøತಿ ಸಂವರ್ಧನಕ್ಕಾಗಿ ದೇಶ-ವಿದೇಶಗಳಲ್ಲಿ ಚರಿಸಿ ಜಂಗಮರಾದವರು. ಶೈಕ್ಷಣಿಕ ಸುಧಾರಣೆಗಾಗಿ ಶಿಕ್ಷಣ ಸಂಸ್ಥೆ ಪ್ರಾರಂಭಿಸಿದವರು.

ಅವರ ಅನುಪಮ ಸೇವೆ ಮತ್ತು ಪೂರೈಸಿದ ಕಾರ್ಯಗಳನ್ನು ಗಮನಿಸಿ, ಜಯನಗರದ ಅನುಭವÀ ಮಂಟಪದಲ್ಲಿ ನಡೆಯುತ್ತಿರುವ ‘ಬಸವ ಸಮಿತಿ ಸಂಸ್ಥಾಪಕರ ದಿನಾಚರಣೆ’ಯಂದು, ‘ಡಾ. ಬಿ.ಡಿ.ಜತ್ತಿ ಸಂಶೋಧನ ಪ್ರಶಸ್ತಿ-2024’ ಈ ಪ್ರಶಸ್ತಿಯನ್ನು ಪರಮಪೂಜ್ಯ ಶ್ರೀ ಮ.ಘ.ಚ. ಡಾ. ಬಸವಲಿಂಗ ಪಟ್ಟದ್ದೇವರು ಅವರಿಗೆ ನೀಡಿ ಗೌರವಿಸಲಾಗುತ್ತಿದೆ.

ಈ ಕಾರ್ಯಕ್ರಮದ ವರದಿಯನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಬೇಕೆಂದು ವಿನಂತಿಸಿಕೊಳ್ಳುತ್ತೇನೆ. ಇದರೊಂದಿಗೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಲಗತ್ತಿಸಲಾಗಿದೆ.

emedialine

Recent Posts

ಅತಿವೃಷ್ಟಿ ಬೆಳೆ ಹಾನಿ ಪರಿಹಾರ ಕೊಡಿ: ಮುಖ್ಯಮಂತ್ರಿಗಳಿಗೆ ಪ್ರಾಂತ ರೈತ ಸಂಘದ ಆಗ್ರಹ

ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…

6 hours ago

ಯುವಜನ ಒಕ್ಕೂಟದಿಂದ 76 ನೇ ಕಲ್ಯಾಣ ಕರ್ನಾಟಕ ಸ್ವಾತಂತ್ರೋತ್ಸವ ಆಚರಣೆ

ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…

6 hours ago

ಸೆ.19 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…

7 hours ago

ಕೆಎಎಸ್‌ಎಸ್‌ಐಎಗೆ ನಿಜಾಮೋದ್ದಿನ್ ಚಿಸ್ತಿ ನಾಮನಿರ್ದೇಶನ

ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…

7 hours ago

ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಸಮಾಧಾನವಿದೆ, ತೃಪ್ತಿಯಿಲ್ಲ: ಬಿಆರ್ ಪಾಟೀಲ

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…

8 hours ago

ವಕ್ಫ್ ಬೋರ್ಡ್ ಆಸ್ತಿ ಒತ್ತುವರಿ ನಿಯಂತ್ರಣಕ್ಕೆ ಕಂಪೌಂಡ್ ನಿರ್ಮಾಣ; ಬಿ.ಜೆಡ್.ಜಮೀರ್ ಅಹ್ಮದ್ ಖಾನ್

ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420