ಕಲಬುರಗಿ: ಹಿಂದಿ ಹಿಂದೂಸ್ತಾನದ ಭಾಷೆ. ಹಿಂದಿ ಭಾರತದ ಎಲ್ಲ ರಾಜ್ಯದ ಜನರನ್ನು ಜೋಡಿಸುತ್ತದೆ ಅಲ್ಲದೇ ಇಲ್ಲಿನ ಬಹುತೇಕ ಜನರು ಹಿಂದಿ ಅರಿತವರಾಗಿದ್ದಾರೆ ಎಂದು ಮೌಲನ ಅಜಾದ ವಿವಿಯ ಪ್ರೊ ರಿಷಬದೇವ್ ಶರ್ಮಾ ಹೇಳಿದರು.
ಅವರು ಮಂಗಳವಾರ ಖಾಜಾ ಬಂದಾನವಾಜ ವಿಶ್ವ ವಿದ್ಯಾಲಯದ ಹಿಂದಿ ವಿಭಾಗದಿಂದ ಆಯೋಜಿಸಲ್ಪಟ್ಟ ಹಿಂದಿ ದಿವಸ ಪಕವಾಡಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಪ್ರತಿ ವರ್ಷ ಸೆಪ್ಟೆಂಬರ್ 14 ರಂದು ಹಿಂದಿ ದಿವಸವನ್ನಾಗಿ ಆಚರಿಸಲಾಗುತ್ತದೆ. ಇದು ಹಿಂದಿಯನ್ನು ಭಾರತದ ಅಧಿಕೃತ ಭಾಷೆಯಾಗಿ ಅಳವಡಿಸಿಕೊಂಡಿರುವ ದಿನ. ಹಿಂದಿ ನಮ್ಮ ದೇಶದ ವಿವಿಧ ಪ್ರದೇಶಗಳ ಜನರನ್ನು ಒಂದುಗೂಡಿಸುತ್ತದೆ.ಇದು ನಮ್ಮ ಸಂಸ್ಕೃತಿ, ಇತಿಹಾಸ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ.
ಹಿಂದಿ ಪ್ರಪಂಚದಲ್ಲಿ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಒಂದಾಗಿದೆ.ಹಿಂದಿ ಮಾತನಾಡಲು ಮತ್ತು ಕಲಿಯಲು ನಾವು ಹೆಮ್ಮೆ ಪಡಬೇಕು.ಹಿಂದಿ ಕೇವಲ ಭಾಷೆಯಲ್ಲ, ರಾಷ್ಟ್ರೀಯ ಏಕತೆಯ ಸಂಕೇತ. ಅನೇಕ ಶ್ರೇಷ್ಠ ಕವಿಗಳು ಮತ್ತು ಬರಹಗಾರರು ಹಿಂದಿ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ.
ನಮ್ಮ ರಾಷ್ಟ್ರ ಭಾಷೆಯನ್ನು ಗೌರವಿಸಿ ಉಳಿಸೋಣ.
ಈ ಹಿಂದಿ ದಿವಸ್ನಲ್ಲಿ, ನಮ್ಮ ದೈನಂದಿನ ಜೀವನದಲ್ಲಿ ಹಿಂದಿಯನ್ನು ಪ್ರಚಾರ ಮಾಡುವ ಭರವಸೆ ನೀಡೋಣ ಎಂದು ಹೇಳಿದರು.
ಕಾರ್ಯಕ್ರಮದ ವಿಶೇಷ ಅತಿಥಿ ಕೆಬಿಎನ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ ಅಲಿ ರಜಾ ಮೂಸ್ವಿ ಕಾರ್ಯಕ್ರಮದ ಆಯೋಜಕರನ್ನು ಶ್ಲಾಘಸಿದರು. ಇಂತಹ ಒಳ್ಳೆಯ ಕಾರ್ಯಕ್ರಮ ಆಯೋಜಿಸಿದಕ್ಕೆ ಹಿಂದಿ ವಿಭಾಗವನ್ನು ಅಭಿನಂದಿಸಿದರು. ಕೆಬಿನ ವಿವಿ ಬಹು ಶಿಸ್ತೀಯ ವಿವಿಯಾಗಿದ್ದು ಎಲ್ಲ ನಿಕಾಯಗಳು ಕಲಿತು ಮುಂಬರುವ ದಿನಗಳಲ್ಲಿ ಇನ್ನೂ ಅನೇಕ ಫಲಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.
ಡೀನ ಪ್ರೊ ನಿಶಾತ ಆರೀಫ್ ಹುಸ್ಸೇನಿ, ತಮ್ಮ ಅಧ್ಯಕ್ಷೀಯ ಸುಮಾರೋಪದಲ್ಲಿ ಮಾನವ ಮನಸ್ಸು ಮತ್ತು ಭಾಷೆಗಳ ನಡುವನ ತಾಳುಕಿನ ಬಗ್ಗೆ ಅಧ್ಯಯನ ನಡೆಯಬೇಕು ಎಂಬುದನ್ನು ಹೇಳಿದರು.
ಈ ಕಾರ್ಯಕ್ರಮದಲ್ಲಿ ಹಿಂದಿ ದಿವಸದ ಅಂಗವಾಗಿ ಏರ್ಪಡಿಸಲಾದ ಎಲ್ಲ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ನೀಡಲಾಯಿತು. ಉಪನ್ಯಾಸಕರಿಗೂ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ಅವರಿಗೂ ಕೂಡ ಪ್ರಮಾಣ ಪತ್ರ ಮತ್ತು ಬಹುಮಾನಗಳನ್ನು ನೀಡಲಾಯಿತು. ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು.
ವಿದ್ಯಾರ್ಥಿನಿ ಸುಮಯ್ಯ ಪ್ರಾರ್ಥಿಸಿದರು. ಉರ್ದು ವಿಭಾಗದ ನಶ್ರೀನ ನಾಥ ವ್ಯಕ್ತ ಪಡಿಸಿದರು. ಡಾ ಮಿಲನ ಸ್ವಾಗತಿಸಿ ಪರಿಚಯಿಸಿದರು.ಡಾ ಆಫ಼ಷನ ದೇಶಮುಖ ವರದಿ ಪ್ರಸ್ತುತ ಪಡಿಸಿದರು. ಶಿಫಾ ಸಾಹೇರ್ ಮತ್ತು ಸುಬಿಯಾ ನಿರೂಪಿಸುದರೆ ಸಫಾ ಮರ್ಯಮ ವಂದಿಸಿದರು.
ಕಲಾ, ಭಾಷಾ, ಮಾನವೀಕತೆ, ಸಮಾಜ ವಿಜ್ಞಾನ, ವಿಜ್ಞಾನ, ಶಿಕ್ಷಣ, ಕಾನೂನು, ನಿಕಾಯದ ಎಲ್ಲ ವಿದ್ಯಾರ್ಥಿಗಳು ಮತ್ತು ಸಹಾಯಕ ಪ್ರಾಧ್ಯಪಕರು ಹಾಜರಿದ್ದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…