ಶಾಸಕ ಮುನಿರತ್ನಗೆ ಗಡಿಪಾರು ಮಾಡಿ ಮುಖ್ಯಮಂತ್ರಿಗಳಿಗೆ ಮನವಿ

0
12

ಕಲಬುರಗಿ: ದಲಿತ ವಿರೋಧಿ ಮುನಿರತ್ನ ವಿರುದ್ಧ ಮೊಕದ್ದಮೆ ದಾಖಲಿಸಿ ಕರ್ನಾಟಕ ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಜಿಲ್ಲಾ ಸಮಿತಿ (ನಾಗವಾರ ಬಣ) ಕಾರ್ಯಕರ್ತರು ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಸಾಮಾಜಿಕ ಜಾಲತಾಣದ ವೈರಲ್ ಆಗಿರುವ ಮುದ್ರಿಕೆಯಲ್ಲಿ ಜಾತಿಯೊಂದರ ಹೆಸರನ್ನು ಉಲ್ಲೇಖಿಸಿ ದಲಿತ ಸಮುದಾಯವೊಂದನ್ನು ಕೆಟ ಪದಗಳಿಂದ ನಿಂದಿಸಿರುವ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ವಿರುದ್ದ ಒಂದು ವಾರದಲ್ಲಿ ಜಾತಿ ನಿಂದನೆ ಮೊಕದ್ದಮೆ ದಾಖಲಿಸಿ ಕರ್ನಾಟಕ ರಾಜ್ಯದಿಂದ ಗಡಿಪಾರು ಮಾಡಬೇಕು ಮನವಿ ಮೂಲಕ ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು. ವಿಷಯನ್ನು ಜಾರಿಗೊಳಿಸಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕೆ.ಆರ್.ಡಿ.ಎಸ್.ಎಸ್ ನಾಗವಾರ ಬಣದ ಜಿಲ್ಲಾ ಸಂಚಾಲಕ ಬಸವರಾಜ ಟಿ. ಬಾಡಿಹಾಳ, ಸಂಘಟನಾ ಸಂಚಾಲಕ ಆನಂದ ಹತ್ತರಗಿ, ಚಿದಾನಂದ ನಡಗೇರಿ, ಶಿವಯ್ಯ ಸಿ. ಗುತ್ತೇದಾರ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here