ಕಲಬುರಗಿ: ಬಿಸಿಲುನಾಡು, ತೊಗರಿ ಕಣಜ ನಾಡಿನ ಮಾಜಿ ಮುಖ್ಯಮಂತ್ರಿಗಳಾದ ದಿ.ವಿರೇಂದ್ರ ಪಾಟೀಲ್ ಹಾಗೂ ಧರಂಸಿಂಗ್ ಅವರ ಪ್ರತಿಮೆಯನ್ನು ಕಲಬುರಗಿ ಮಹಾನಗರದ ಪ್ರಮುಖ ವೃತ್ತದಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಜೈಕನ್ನಡಿಗರ ಸೇನೆ ಅಧ್ಯಕ್ಷ ದತ್ತು ಎಚ್.ಭಾಸಗಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ಚಿಂಚೋಳಿ ವಿಧಾನ ಸಭಾ ಮತಕ್ಷೇತ್ರದಿಂದ ಶಾಸಕರಾಗಿಮತ್ತು ಲೋಕಸಭಾಸದಸ್ಯರಾಗಿಯೂಸೇವೆ ಸಲ್ಲಿಸಿಉ್ಪ್ಮ.
ಕಲ್ಯಾಣ ಕರ್ನಾಟಕ ಭಾಗದ ಪ್ರಥಮ ಮುಖ್ಯಮಂತ್ರಿಯೂ ಸೇವೆ ಸಲ್ಲಿಸಿದ್ದಾರೆ ಹಾಗೂ ಅಜಾತಶತ್ರು ಎಂದೇ ಖ್ಯಾತರಾಗಿರುವ ಮಾಜಿ ಮುಖ್ಯಮಂತ್ರಿಧರಂಸಿಂಗ್ ಅವರು 7 ಭಾರಿ ಜೇವರ್ಗಿ ವಿಧಾನಸಭಾ ಮತಕ್ಷೇತ್ರದಿಂದ ಶಾಸಕರಾಗಿ ಹಾಗೂ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕಲ್ಯಾಣ ಕರ್ನಾಟಕದ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ.
ಈ ಭಾಗದ ಪ್ರಭಾವಿ ಮತ್ತು ಆದರ್ಶ ಮಾದರಿ ನಾಯಕ ಸ್ಮರಣೆಗಾಗಿ ಪ್ರತಿಮೆಯನ್ನು ಸ್ಥಾಪಿಸಲು ಸ್ಥಳ ಹಾಗೂ ಅನುದಾನವನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ದತ್ತು ಭಾಸಗಿ ಅವರು, ತಮ್ಮ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಸೇನೆಯ ಮುಖಂಡರಾದ ಹುಸೇನ, ನವೀನಕುಮಾರ,ದುಮ್ಮನಸೂರ, ಅನೀಲ ತಳವಾರ, ಮಲ್ಲು ಆಲಗೂಡ, ಪ್ರಕಾಶ, ಗೌತಮ ಗೋರೆ, ಶಿವಪ್ರಕಾಶ ಕುಸ್ತಿ,ರೋಹ ಇದ್ದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…