ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಸಮಾಧಾನವಿದೆ, ತೃಪ್ತಿಯಿಲ್ಲ: ಬಿಆರ್ ಪಾಟೀಲ

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹಾಗೂ ಶಾಸಕ ಬಿ.ಆರ್.ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಪತ್ರಿಕಾಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತರಾತುರಿಯಲ್ಲಿ ಸಂಪುಟ ಸಭೆ ನಡೆದಿದ್ದರಿಂದ ಈ ಭಾಗದ ಅಭಿವೃದ್ಧಿಗೆ ಮೂಲದಲ್ಲಿ ಬೇಕಾದ ಕೊಡುಗೆಗಳನ್ನು ಕೊಡಲಾಗಿಲ್ಲ ಎಂದು ಹೇಳಿದರು.

ನೇಮಕಾತಿ ಬಗ್ಗೆ ಸ್ಪಷ್ಟತೆಯಿಲ್ಲ: ಈ ಭಾಗ ಅಭಿವೃದ್ಧಿ ಹೊಂದಬೇಕಾದರೆ ಮುಖ್ಯವಾಗಿ ಶೈಕ್ಷಣಿಕವಾಗಿ ಮುಂದುವರಿಯಬೇಕು. ಅದಕ್ಕಾಗಿ ಶಿಕ್ಷಕರ ನೇಮಕಾತಿ ನಡೆಯಬೇಕಾಗಿದೆ. ಈ ಕುರಿತು ಸಂಪುಟದಲ್ಲಿ ನಿರ್ಣಯ ಯಾವುದೇ ಸ್ಪಷ್ಟತೆ ನೀಡುತ್ತಿಲ್ಲ. ಗುಲ್ಬರ್ಗ ವಿಶ್ವ ವಿದ್ಯಾಲಯದಲ್ಲಿ ಶೇ.80 ಉಪನ್ಯಾಸಕಾರ ಹುದ್ದೆ ಖಾಲಿ ಇವೆ. ಇಲ್ಲಿ ವಿದ್ಯಾರ್ಥಿಗಳು ಕಲಿಯುವುದು ಯಾವಾಗ ಎಂದು ಸ್ಪಚ್ಟಪಡಿಸಿದ ಅವರು, ಸುಮಾರು 28,000 ಭರ್ತಿಯ ನಿರ್ಣಯ ಮುಂದಿನ ಸಂಪುಟ ಸಭೆಯಲ್ಲಿ ಕೈಗೊಳ್ಳಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಸ ಹೈ ಸ್ಕೂಲ್ ಮತ್ತು ಕಾಲೇಜುಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕಾಗಿತ್ತು ಎಂದು ಹೇಳಿದರು.

ಜನಪ್ರತಿನಿಧಿಗಳ ಜತೆ ಚರ್ಚೆ ನಡೆಸಲಿ: ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಈ ಭಾಗದ ಜನಪ್ರತಿನಿಧಿಗಳಿಗೆ ಅರಿವಿದೆ. ಅಧಿಕಾರಿಗಳಿಗೆ ಕೇವಲ ಕಾನೂನು ಮಾತ್ರ ತಿಳಿದಿದೆ. ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ಮಾತ್ರ ಸಮಸ್ಯೆ ನೀಗಿಸುತ್ತಾರೆ ಎಂದು ಪರೋಕ್ಷವಾಗಿ ಜನಪ್ರತಿನಿಧಿಗಳಿಂದ ಯಾವುದೇ ಸಲಹೆ ಸ್ವೀಕಾರ ಮಾಡಿಲ್ಲ ಎಂದು ಹೇಳಿದಂತಿತ್ತು.

ಸರಕಾರಿ ನೌಕರರ ಬಡ್ತಿ ಅನ್ಯಾಯದ ವಿರುದ್ಧ ಮೇಲ್ಮನವಿ ಸಲ್ಲಿಕೆ ಮಾಡಲು 371(ಜೆ)ಗಾಗಿ ಪ್ರತ್ಯೇಕ ಕೆಎಟಿ ಕಲಬುರಗಿಯಲ್ಲಿ ಪ್ರಾರಂಭ ಮಾಡುವಂತೆ ಮನವಿ ಮಾಡಲಾಗಿತ್ತು. ಆದರೆ ಅದರ ಬಗ್ಗೆಯೂ ಚರ್ಚೆ ನಡೆಸಿಲ್ಲ.

ಮೂಲದಲ್ಲಿ ಕಲ್ಯಾಣದಲ್ಲಿ ಇರುವ ಸಮಸ್ಯೆಗಳ ಪರಿಹಾರಕ್ಕೆ ಚರ್ಚೆ ನಡೆದಿಲ್ಲ ಎಂದು ಹೇಳಿದರು.

emedialine

Recent Posts

ಸರ್ವರೂ ಸಹಕಾರಿ ತತ್ವದೊಂದಿಗೆ ನಡೆಯೋಣ

ಕಲಬುರಗಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (ವ್ಯವಸಾಯ ಸೇವಾ ಸಹಕಾರ ಸಂಘಗಳು) ಡಿ.ಸಿ.ಸಿ ಬ್ಯಾಂಕ್‌ನ ತಾಯಿ ಬೇರು. ಗ್ರಾಮೀಣ…

16 mins ago

ಸಚಿವರಿಂದ ಮನ್ನೂರ ಆಸ್ಪತ್ರೆಯ ದ ವೆಲ್ ನೇಸ್ ರೆವೂಲೇಷನ ಮ್ಯಾಗಝೀನ್ ಲೋಕಾರ್ಪಣೆ

ಕಲಬುರಗಿ: ನಗರದ ಪ್ರತಿಷ್ಠಿತ ಮನ್ನೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ವತಿಯಿಂದ ಕಲ್ಯಾಣ ಕರ್ನಾಟಕದ ಭಾಗದ ಜನರಿಗೆ ಆರೋಗ್ಯ, ಕ್ಷೇಮ, ಯೋಗ, ಸದೃಢತೆಯ…

23 mins ago

ಡಾ. ಎಂ.ಎಂ. ಕಲಬುರ್ಗಿ ಸಂಸ್ಮರಣೆ ನಾಳೆ

ಕಲಬುರಗಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಡಾ. ಎಂ.ಎಂ. ಕಲಬುರಗಿ ವಿಚಾರ ವೇದಿಕೆಯ ಸಹಯೋಗದಲ್ಲಿ ನಗರದ ಕನ್ನಡ ಭವನದಲ್ಲಿ…

28 mins ago

ಕಲಬುರಗಿ: ಅಂಗವಿಕಲ ಕಲ್ಯಾಣ ಅಧಿಕಾರಿಗೆ ಸನ್ಮಾನ

ಕಲಬುರಗಿ: ಅಂಗವಿಕಲ ಕಲ್ಯಾಣ ಇಲಾಖೆಯಿಂದ ಅಂಗವಿಕಲರು ಮತ್ತು ವಿಶೇಷ ಚೇತನರಿಗೆ ಸರಕಾರದದ ಸೌಲಭ್ಯಗಳು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಜಿಲ್ಲಾ…

2 hours ago

ಮಕ್ಕಳಿಗೆ ಉಚಿತ ಆರೋಗ್ಯ ಚಿಕಿತ್ಸಾ ಶಿಬಿರ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ…

2 hours ago

ಶಹಾಪುರ: ಮಹಿಳೆ ಸಮಾಜದ ಬೆನ್ನೆಲುಬು

ಶಹಾಪುರ : ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದು,ಆದ್ದರಿಂದ ಪ್ರತಿಯೊಬ್ಬ ಮಹಿಳೆಯರು ತಮ್ಮ ಆರೋಗ್ಯವನ್ನು ಅಪಾಡಿಕೊಳ್ಳುವುದರ ಜೊತೆಗೆ ಜೀವನ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420