ನಿಮ್ಮ ಕನಸಿಗೆ ರೆಕ್ಕೆ ಕಟ್ಟಲು ನಿಮ್ಮೂರಿಗೂ ಬರ್ತಿದೆ ಸರಿಗಮಪ ಆಡಿಷನ್, ತನ್ನ ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಸಾಕಷ್ಟು ಯುವ ಪ್ರತಿಭೆಗಳನ್ನ ಕರುನಾಡಿಗೆ ಪರಿಚಯಿಸಿರುವ ಕನ್ನಡದ ನಂ 1ವಾಹಿನಿ ಜೀ಼ ಕನ್ನಡ , ಈಗ ಮತ್ತೊಮ್ಮೆ ಸರಿಗಮಪ ರಿಯಾಲಿಟಿ ಶೋ ಮೂಲಕ
ಕರುನಾಡಿನ ಹಾಡುಗರನ್ನ ಹುಡುಕುವ ಕೆಲಸ ಶುರುಮಾಡಿದೆ. ಜೀ಼ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋಗಳಾದ ಡ್ರಾಮಾ ಜೂನಿಯರ್ಸ್, ಕಾಮಿಡಿ ಕಿಲಾಡಿಗಳು,ಡಿಕೆಡಿ ಮತ್ತು ಮಹಾನಟಿ ಮೂಲಕ ಈಗಾಗಲೆ ಸಾಕಷ್ಟು ನಟ-ನಟಿಯರು ,ಗಾಯಕ ಗಾಯಕಿಯರು ಹಾಗು ಕೊರಿಯೋಗ್ರಾಫರ್ ಗಳನ್ನ ಕರುನಾಡಿಗೆ ಕೊಟ್ಟಿರುವ ಜೀ಼ ಕನ್ನಡ ವಾಹಿನಿ ಇದೀಗ ಸರಿಗಮಪ ಶೋ ಮೂಲಕ ನಿಮ್ಮೂರಿನಲ್ಲಿರುವ ಗಾಯಕ- ಗಾಯಕಿಯಾಗುವ ಕನಸು ಹೊತ್ತಿರುವ,ಪ್ರತಿಭೆಗಳಿಗೆ ವೇದಿಕೆಯಾಗಲು ಬಂದಿದೆ.
ಕಳೆದ ಬಾರಿ ವಿದೇಶಿ ಕನ್ನಡಿಗ ಪ್ರತಿಭೆಗಳೊಂದಿಗೆ ಕನ್ನಡದ ಕಂಪನ್ನ ಜಗತ್ತಿಗೆ ಬಿತ್ತರಿಸಿ ಸರಿಗಮಪ ಈ ಬಾರಿ 6 ರಿಂದ 60 ವಯಸ್ಸಿನ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು ಸಜ್ಜಾಗಿದೆ. ಈ ಮೂಲಕ ಕನ್ನಡದ ಸಂಗೀತ ಮತ್ತು ಚಿತ್ರರಂಗಕ್ಕೆ ಭರವಸೆಯ ಗಾಯಕ-ಗಾಯಕಿಯರನ್ನ ನೀಡುವ ಕೆಲಸವನ್ನ ಈ ರಿಯಾಲಿಟಿ ಶೋ ಮಾಡಲಿದೆ.ಸರಿಗಮಪ ಶೋ ಮೂಲಕ ಹಲವಾರು ಪ್ರತಿಭೆಗಳು ಹೊರಹೊಮ್ಮಿ ಇಂದು ಸಂಗೀತ ಲೋಕದ ಸಾಧಕರ ಸಾಲಿಗೆ ಸೇರಿದ್ದಾರೆ, ನಿಮ್ಮ ಕನಸನ್ನ ನನಸು ಮಾಡುವ ನಿಟ್ಟಿನಲ್ಲಿ ನಿಮ್ಮೂರಿಗೆ ಬಂದು, ನಿಮ್ಮ ಪ್ರತಿಭಯೆನ್ನ ಗುರುತಿಸಿ ನಿಮ್ಮನ್ನ ಈ ವೇದಿಕೆ ಕರೆತರುವ ಕೆಲಸವನ್ನ ಈ ಮೂಲಕ ಮಾಡಲಿದೆ.
ಸರಿಗಮಪ ಶೋಗಾಗಿ ಕರ್ನಾಟಕದ ಆಯ್ದ ಜಿಲ್ಲೆಗಳಲ್ಲಿ ಆಡಿಷನ್ ಪ್ರಕ್ರಿಯೆ ನಡೆಸಲ್ಲಿದ್ದು ,ಇದರ ಆರಂಭಿಕ ಹಂತವೆಂಬಂತೆ 21-09-2024 ಶನಿವಾರದಂದು ಬೆಳಗ್ಗೆ 9 ಗಂಟೆಗೆ ಗೌರ್ಮೆಂಟ್ ಪಾಲಿಟೆಕ್ನಿಕ್ ಕಾಲೇಜು, ಐ ವಾನ್ ಶಾಹಿ ರಸ್ತೆ.ಸ್ಟೇಷನ್ ಬಜಾರ್,ಕಲಬುರಗಿ.ಇಲ್ಲಿ ಆಡಿಷನ್ಸ್ ನಡೆಯಲ್ಲಿದ್ದು.
ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಚಿಸುವವರು 2 ಪಾಸ್ಪೋರ್ಟ್ ಸೈಜ್ ಪೋಟೋ ಜೊತೆ ಅಡ್ರಸ್ ಪ್ರೂಫ್ ಜೆರಾಕ್ಸ್ ತೆಗೆದುಕೊಂಡು ಬಂದು ಭಾಗವಹಿಸಬಹುದಾಗಿದೆ. ಜೀ಼ ಕನ್ನಡ ನಡೆಸುವ ಈ ಆಡಿಷನ್ ಪ್ರಕ್ರಿಯೆಯಲ್ಲಿ ಯಾವುದೇ ಹಣವನ್ನ ಪಡೆಯಲಾಗುವುದಿಲ್ಲವೆಂದು ವಾಹಿನಿ ತಿಳಿಸಿದೆ.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…