ಕಲಬುರಗಿ: ರಾವೂರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ವಿವೇಕಾನಂದ ಪ್ರಾಥಮಿಕ ಮತ್ತು ಸಚ್ಚಿದಾನಂದ ಪ್ರೌಢ ಶಾಲೆಯ ಮಕ್ಕಳು ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಆಟೋಟಗಳಲ್ಲಿ ಗೆಲ್ಲುವುದರ ಮೂಲಕ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿದ್ದಾರೆ.
ಪ್ರೌಢ ವಿಭಾಗ : 100 ಮಿ ಓಟ -ಪ್ರಥಮ (ಶ್ರೀನಾಥ ), 800 ಓಟ – ಪ್ರಥಮ (ಪ್ರಶಾಂತ ), ಬಾಲಕರ 4*100ಮಿ ರಿಲೇ – ಪ್ರಥಮ, ತಿವಿಧ ಜಿಗಿತ – ಪ್ರಥಮ ( ಶ್ರೀನಾಥ ), ಉದ್ದಜಿಗಿತ – ದ್ವಿತೀಯ (ಶ್ರೀನಾಥ ), 1500ಮಿ ಓಟ – ದ್ವಿತೀಯ (ಸಾಯಬಣ್ಣ ),ಗುಂಡು ಎಸೆತ – ದ್ವಿತೀಯ ( ಐಶ್ವರ್ಯ ), ಗುಂಡು ಎಸೆತ – ದ್ವಿತೀಯ ( ಶ್ರೀನಾಥ ).
ಪ್ರಾಥಮಿಕ ವಿಭಾಗ : 4*100 ಮಿ ರಿಲೇ – ಪ್ರಥಮ, 200 ಓಟ – ಪ್ರಥಮ (ಯಶ್ ), 200ಓಟ – ಪ್ರಥಮ (ಪ್ರಕೃತಿ ).
ಮಕ್ಕಳ ಈ ಸಾಧನೆಗೆ ಸಂಸ್ಥೆ ಅಧ್ಯಕ್ಷ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಹಾಗೂ ಆಡಳಿತ ಮಂಡಳಿ ಜಿಲ್ಲಾ ಮಟ್ಟಕ್ಕೆ ಶುಭ ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಡಾ. ಗುಂಡಣ್ಣ ಬಾಳಿ, ಪ್ರಾಚಾರ್ಯರ ಕೆ. ಐ. ಬಡಿಗೇರ್, ವಿದ್ಯಾಧರ ಖಂಡಾಳ, ಗಂಗಪ್ಪ ಕಟ್ಟಿಮನಿ, ದೈಹಿಕ ಶಿಕ್ಷಕರಾದ ಭೀಮಾಶಂಕರ ಬಮ್ಮನಳ್ಳಿ, ಶಿವಕುಮಾರ ಸರಡಗಿ, ಶರಣು ಸಜ್ಜನ್, ಶ್ಯಾಮಸುಂದರ ದೊಡ್ಡಮನಿ, ರೋಹಿತ್ ರಾವೂರಕರ್, ವಿಜಯಲಕ್ಷ್ಮಿ ಬಮ್ಮನಳ್ಳಿ, ಸಿದ್ದಲಿಂಗ ಬಾಳಿ ಉಪಸ್ಥಿತರಿದ್ದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…