ಶಹಾಪುರ : ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದು,ಆದ್ದರಿಂದ ಪ್ರತಿಯೊಬ್ಬ ಮಹಿಳೆಯರು ತಮ್ಮ ಆರೋಗ್ಯವನ್ನು ಅಪಾಡಿಕೊಳ್ಳುವುದರ ಜೊತೆಗೆ ಜೀವನ ಕಲೆ ಅರ್ಥೈಸಿಕೊಂಡು ಬದುಕಬೇಕೆಂದು ಉಪನ್ಯಾಸಕಿ ಚೈತ್ರ ಪಾಟೀಲ್ ಹೇಳಿದರು
ತಾಲೂಕಿನ ದೋರನಹಳ್ಳಿ ಗ್ರಾಮದ ಡಿ.ಡಿ.ಯು ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ನಿತ್ಯ ಪ್ರತಿಷ್ಠಾನ ಬೆಂಗಳೂರು ಮತ್ತು ಸಾಧನಾ ಪ್ರತಿಷ್ಠಾನ ರಾಯಚೂರು ಹಾಗೂ ಕಲಾನಿಕೇತನ ಟ್ರಸ್ಟ್ ಸಗರ ಇವುಗಳ ಸಹಯೋಗದಲ್ಲಿ “ಮಹಿಳಾ ಆರೋಗ್ಯ ಮತ್ತು ಜೀವನ ಕಲೆ ಜಾಗೃತಿ ಶಿಬಿರರದಲ್ಲಿ ಭಾಗವಹಿಸಿ ಮಾತನಾಡಿದರು.ಮಹಿಳೆ ಸಮಾಜದ ಬೆನ್ನೆಲುಬು ಎಂಬುದನ್ನು ನಾವು ಯಾವತ್ತಿಗೂ ಎಂದೆಂದಿಗೂ ಮರೆಯಕೂಡದು ಎಂದು ನುಡಿದರು.
ಇನ್ನೋವ ಮುಖ್ಯ ಅತಿಥಿಗಳು ಹಾಗೂ ಉಪನ್ಯಾಸಕಿ ನಿರ್ಮಲಾ ಮಾತನಾಡಿ ಯಾರ ಮೇಲೂ ಅವಲಂಬಿತರಾಗದೆ ಮಹಿಳೆಯರು ವೃತ್ತಿಪರ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು,ಹೊಲಿಗೆ ತರಬೇತಿ, ಬಟ್ಟೆ ಕತ್ತರಿಸುವುದು,ಕಸೂತಿ ಹಾಕುವುದು,ಸೆಣಬಿನ ಚೀಲಗಳು ಮತ್ತು ಅಗರ್ ಬತ್ತಿಗಳು ತರಬೇತಿ ಪಡೆದುಕೊಂಡು ಉತ್ತಮವಾದ ಜೀವನ ನಡೆಸುವುದು ಅತ್ಯವಶ್ಯಕವಾಗಿದೆ ಎಂದು ನುಡಿದರು.
ಈ ಸಂದರ್ಭದಲ್ಲಿ,ಕಾಲೇಜಿನ ಪ್ರಾಂಶುಪಾಲರಾದ ಮಹೇಶ ಪತ್ತಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು,ಸಗರದ ಕಲಾನಿಕೇತನ ಟ್ರಸ್ಟ್ ಅಧ್ಯಕ್ಷರಾದ ಬಸವರಾಜ ಸಿನ್ನೂರ ಪ್ರಾಸ್ತಾವಿಕ ಮಾತುಗಳನ್ನಾಡಿದರು, ಸಮಾರಂಭದ ವೇದಿಕೆಯ ಮೇಲೆ, ಪ್ರೇಮಲತಾ ಪ್ರತಿಭಾ ಸೇರಿದಂತೆ ಇತರರು ಉಪಸಿತರಿದ್ದರು ಲಕ್ಷ್ಮಿ ನಿರೂಪಿಸಿ,ವಂದಿಸಿದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…