ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ ನಮೋಶಿಯವರ ಹಾಗೂ ಉಪಾಧ್ಯಕ್ಷರಾದ ರಾಜಾ ಭೀ ಭೀಮಳ್ಳಿಯವರ ಹಾಗೂ ಆಡಳಿತ ಮಂಡಳಿಯವರ ಸಲಹೆಯ ಮೇರೆಗೆ ಆಸ್ಪತ್ರೆಯ ಚಿಕ್ಕ ಮಕ್ಕಳ ವಿಭಾಗದಿಂದ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಿಗೆ ಎರಡು ದಿನಗಳ ಕಾಲ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಮಕ್ಕಳಿಗೆ ಆಸ್ಪತ್ರೆಯ ವತಿಯಿಂದ ಉಚಿತ ಔಷಧಿಯನ್ನು ಒದಗಿಸಲಾಯಿತು.ಸುಮಾರು 215 ಕ್ಕಿಂತಲೂ ಹೆಚ್ಚು ಮಕ್ಕಳು ಈ ಶಿಬಿರದ ಲಾಭ ಪಡೆದುಕೊಂಡರು ನವಜ್ಯೋತಿ ಶಾಲೆಯ ಮಕ್ಕಳಲ್ಲದೆ ಬೇರೆ ಬೇರೆ ಶಾಲೆಯ ಸುಮಾರು 70 ಮಕ್ಕಳು ಈ ಶಿಬಿರದ ಲಾಭ ಪಡೆದುಕೊಂಡರು.
ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ ರೂಪಾ ಮಂಗಶೆಟ್ಟಿ ಅವರ ನೇತೃತ್ವದಲ್ಲಿ ಮಕ್ಕಳ ತಜ್ಞರಾದ ಡಾ ಬಸವರಾಜ ಎಂ ಪಾಟೀಲ್,ಡಾ ಶರಣಕುಮಾರ ಕೆ, ಡಾ ಕಿರಣ್ ಹೊಸಗೌಡ, ಡಾ ಶಿವಕುಮಾರ್ ಸಂಗೋಳಗಿ, ಡಾ ಅಪೂರ್ವ ಎ ಬಿ, ಡಾ ಮೀನಾಕ್ಷಿ ವಡ್ಡಣಕೇರಿ,ಡಾ ರುದ್ರಾಕ್ಷಿ ಅವರು ಮಕ್ಕಳಿಗೆ ಉಚಿತ ತಪಾಸಣೆಯೊಂದಿಗೆ ಸೂಕ್ತ ಸಲಹೆ ಚಿಕಿತ್ಸೆ ನೀಡಿದರು.
ಈ ಶಿಬಿರದಲ್ಲಿ ಬಸವೇಶ್ವರ ಆಸ್ಪತ್ರೆಯ ಸಂಯೋಜನಾಧಿಕಾರಿ ಹಾಗೂ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಡಾ ಕಿರಣ್ ದೇಶಮುಖ್, ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ ಶರಣಗೌಡ ಪಾಟೀಲ್, ಉಪ ಡೀನ್ ಡಾ ವಿ ಎಸ್ ಕಪ್ಪಿಕೇರಿ, ಬಸವೇಶ್ವರ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ ಶರಣಬಸಪ್ಪ ಎಂ ಆವಂತಿ ಶಿಬಿರದ ಸಂಯೋಜಕಿ ಪ್ರೀಯ ದರ್ಶನಿ ಟೆಂಗಳಿಉಪಸ್ಥಿತರಿದ್ದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…