ಸರ್ವರೂ ಸಹಕಾರಿ ತತ್ವದೊಂದಿಗೆ ನಡೆಯೋಣ

ಕಲಬುರಗಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (ವ್ಯವಸಾಯ ಸೇವಾ ಸಹಕಾರ ಸಂಘಗಳು) ಡಿ.ಸಿ.ಸಿ ಬ್ಯಾಂಕ್‌ನ ತಾಯಿ ಬೇರು. ಗ್ರಾಮೀಣ ಮಟ್ಟದಲ್ಲಿ ಕೃಷಿಕರು ಸೇರಿ ಷೇರು ಹಾಕುವ ಮೂಲಕ ರಚಿತವಾಗಿರುತ್ತದೆ. ಕೃಷಿಗೆ ಬೇಕಾದ ಸಾಲ, ಸೌಲಭ್ಯಗಳನ್ನು ನೇರವಾಗಿ ರೈತರಿಗೆ ವಿತರಿಸುವ ಕೆಲಸವನ್ನು ಈ ಸಹಕಾರ ಸಂಘಗಳು ಮಾಡುತ್ತವೆ. ನಿತ್ಯದ ವ್ಯವಹಾರ ನೋಡಿಕೊಳ್ಳಲು ಪ್ರತಿ ಸಂಘಕ್ಕೂ ಒಬ್ಬ ಕಾರ್ಯದರ್ಶಿ ಇರುತ್ತಾನೆ ಎಂದು ಕಲ್ಬುರ್ಗಿ-ಯಾದಗಿರಿ ಡಿ.ಸಿ.ಸಿ ಬ್ಯಾಂಕಿನ ಉಪಾಧ್ಯಕ್ಷರಾದ ಸುರೇಶ ಸಜ್ಜನ ಹೇಳಿದರು.

ಯಾದಗಿರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಸಹಕಾರಿ ಯುನಿಯನ್ ಒಕ್ಕೂಟದ ದ್ವೀತಿಯ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಒಂದು ಜಿಲ್ಲೆಯ ಇಂತಹ ಎಲ್ಲ ಪ್ರಾಥಮಿಕ ಸಹಕಾರ ಸಂಘಗಳ ಸದಸ್ಯತ್ವದ ಒಟ್ಟು ರೂಪವೇ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌. ಅಂದರೆ, ವ್ಯಕ್ತಿಯೊಬ್ಬ ನೇರವಾಗಿ ಈ ಬ್ಯಾಂಕ್‌ನ ಸದಸ್ಯನಾಗುವಂತಿಲ್ಲ. ಪ್ರಾಥಮಿಕ ಸಂಘಗಳು,ಕೃಷಿ ಉತ್ಪಾದನೆ ಸಂಘಗಳು, ಹಾಲು ಉತ್ಪಾದನೆ ಸಂಘಗಳು ಸೇರಿದಂತೆ ಇತರೆ ಸಂಘಗಳು ಸದಸ್ಯತ್ವ ಪಡೆದಿರುತ್ತಾರೆ, ಎಂದು ಸರ್ವ ಸದಸ್ಯರಿಗೆ ವಿವರವಾಗಿ ಜಿಲ್ಲಾ ಸಹಕಾರಿ ಒಕ್ಕೂಟ ಯೂನಿಯನ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿಸಿದರು.

ಕಾರ್ಯಕ್ರಮವನ್ನು ಕಲ್ಬುರ್ಗಿ ಯಾದಗಿರಿ ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಮಲ್ಲಿಕಾರ್ಜುನರಡ್ಡಿಗೌಡ ಕೌಳೂರ ಉದ್ಘಾಟಿಸಿ ಮಾತನಾಡಿದ ಸಂದರ್ಭ ಎಲ್ಲರಿಗಾಗಿ ನಾನು; ನನಗಾಗಿ ಎಲ್ಲರೂ –ಇದು ಸಹಕಾರ ತತ್ವದ ಮುಖ್ಯ ಸಂದೇಶ. ಇಂತಹ ಶ್ರೇಷ್ಠ ತತ್ವದ ಬುನಾದಿಯ ಮೇಲೆ ಕಟ್ಟಿರುವುದು ಈ ಸಹಕಾರ ಕ್ಷೇತ್ರ.ಪರಸ್ಪರ ಸಹಕಾರ, ನಂಬಿಕೆಯ ಅಮೂಲ್ಯ ತತ್ವಗಳ ಬುನಾದಿಯ ಮೇಲೆ ಅಸ್ತಿತ್ವಕ್ಕೆ ಬಂದ ಸಹಕಾರ ಸಂಘಗಳು, ಸಹಕಾರಿ ಬ್ಯಾಂಕ್‌ಗಳು ಇಂದು ಆರ್ಥಿಕ ನಷ್ಟ ಅನುಭವಿಸಲು, ಕೆಲವೊಮ್ಮೆ ಪತನದ ಹಾದಿಯಲ್ಲಿ ಸಾಗಲು ಅವುಗಳ ಮೂಲ ರಚನೆಯ ಲೋಪವೇ ಕಾರಣ ಎನ್ನುತ್ತಾರೆ.

ಸಹಕಾರಿ ಧುರೀಣರು. ಯಾವುದೇ ಒಂದು ಸಹಕಾರ ಸಂಸ್ಥೆ ಅಸ್ತಿತ್ವಕ್ಕೆ ಬರಲು ಮೊದಲು ಸಹಕಾರ ಮನೋಭಾವದ ಸಮಾನ ಮನಸ್ಕರು ಒಂದೆಡೆ ಸೇರಿ ಸಹಕಾರ ಸಂಘಗಳು ಬೆಳವಣಿಗೆ ಮಾಡೋಣಾ ಎಂದು ಸಲಹೆ ನೀಡಿದರು,ಜಿಲ್ಲಾ ಸಹಕಾರಿ ಯುನಿಯನ್ ಒಕ್ಕೂಟದ ಅಧ್ಯಕ್ಷ ವಿಶ್ವನಾಥರಡ್ಡಿ ದರ್ಶನಾಪೂರ ಸಹಕಾರ ಪಿತಾಮಹರಾದ ಸಿದ್ದನಗೌಡ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವದರ ಮುಖಾಂತರ ಮಾತನಾಡಿದರು.

ಯಾದಗಿರಿ ಜಿಲ್ಲಾ ಯುನಿಯನ್ ಒಕ್ಕೂಟವು ದ್ವೀತಿಯ ವರ್ಷದ ಎರಡು ವರ್ಷಗಳ ಕಾಲ ಅನೇಕ ವಿವಿಧ ಸಹಕಾರ ಸಂಘದ ಬ್ಯಾಂಕಿಗೆ ತರಬೇತಿ ನೀಡುವುದು ನಮ್ಮ ಒಕ್ಕೂಟದ ಉದ್ದೇಶವಾಗಿರುತ್ತದೆ ಎಂದರು ಇದೆ ಸಂದರ್ಭದಲ್ಲಿ ನಮ್ಮ ಒಕ್ಕೂಟವು ಮುಂದಿನ ದಿನಗಳಲ್ಲಿ ಒಕ್ಕೂಟದ ತರಬೇತಿ ಕೇಂದ್ರ ಕಛೇರಿಯನು ಅತಿ ಶೀಘ್ರದಲ್ಲಿ ಪ್ರಾರಂಭ ಮಾಡಲಾಗುತ್ತದೆ ಈಗಾಗಲೇ ಸ್ಥಳ ಕೂಡ ಅವಕಾಶ ದೂರೆಕಿದ್ದು ಸಹಕಾರಿ ಮಹಾಮಂಡಳ ಸಭೆಯಲ್ಲಿ ತೀರ್ಮಾನಿಸಿ ಒಪ್ಪಿಗೆ ತೆಗೆದುಕೊಂಡು ಕ್ರಮವಹಿಸಲಾಗುವದು ಎಂದು ಸರ್ವ ಸದಸ್ಯರಿಗೆ ತಿಳಿಸಿದರು.

ಒಕ್ಕೂಟದ ವತಿಯಿಂದ ಜಿಲ್ಲೆಯ ಹಿರಿಯ ಸಹಕಾರಿಗಳಿಗೆ ಹಾಗೂ ಸಹಕಾರಿ ಹಿರಿಯ ಧುರೀಣರಿಗೆ ಗೌರವಿಸಲಾಯಿತು.

ಪ್ರಮುಖರಾದ ಮಲ್ಲಿಕಾರ್ಜುನರಡ್ಡಿಗೌಡ ಕೌಳೂರ, ಎಂ.ನಾರಾಯಣ ಶಹಪುರ್,ಭಿಮರೆಡ್ಡಿ ಬೈರಡ್ಡಿ ಗೋಗಿ,ರಾಮನಗೌಡ ಸುಬೇದಾರ, ಅಕ್ಕಮಾಹಾದೇವಿ ಆಲಗೂರ, ಕವಿತಾ ರೇವಡಿ ಹುಣಸಗಿ, ಇವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಯುನಿಯನ್ ಒಕ್ಕೂಟದ ನಿರ್ದೇಶಕರಾದ ಸಿದ್ರಾಮರಡ್ಡಿ ಕೌಳೂರ,ಬಾಪುಗೌಡ ಹುಣಸಗಿ, ರಾಜಾಮುಖಂದ ನಾಯಕ, ಕೆಂಚಪ್ಪ ನಗನೂರ, ನಾಜಿಮ್ ಅಹಮ್ಮದ್, ಅಂಬ್ರಣ್ಣಗೌಡ ಗಡ್ಡೆಸೂಗರು, ವೈಜನಾಥ ಪಾಟೀಲ್ ತುಮಕೂರು ಪ್ರಕಾಶ ಅಂಗಡಿ ಕನ್ನೆಳ್ಳಿ,ಸಹಕಾರ ಸಂಘಗಳು ಸಹಾಯಕ ನಿಬಂಧಕರಾದ ಸಿಮಾ ಪಾರೂಖಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಸುಜಾತ ಹಿರೇಮಠ, ಮಲ್ಲಯ್ಯ ಸ್ವಾಮಿ ಹಾಗೂ ಅನೇಕ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳು ಅನೇಕ ಸರ್ವ ಸದಸ್ಯರು ಭಾಗವಹಿಸಿದ್ದರು.

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

4 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

5 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

5 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

5 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

6 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420