ಶಹಾಬಾದ: ನಗರಸಭೆಯ ಚುಕ್ಕಾಣಿ ಕಾಂಗ್ರೆಸ್ ಪಾಲು- ವಿಜಯೋತ್ಸವ

ಶಹಾಬಾದ: ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್‍ನ ಚಂಪಾಬಾಯಿ ರಾಜು ಮೇಸ್ತ್ರಿ ಆಯ್ಕೆಯಾದರೇ, ಉಪಾಧ್ಯಕ್ಷೆಯಾಗಿ ಫಾತಿಮಾ ಬಾಕರ್ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನಗರಸಭೆಯ ಮುಂಭಾಗದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಗುಲಾಲ ಎರಚಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಖಾಡಾ ಅಧ್ಯಕ್ಷ ಡಾ.ರಶೀದ್ ಮರ್ಚಂಟ್, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕಾಂಗ್ರೆಸ್‍ನ ಚಂಪಾಬಾಯಿ ರಾಜು ಮೇಸ್ತ್ರಿ ಗೆಲುವು ಸಾಧಿಸಿದರೇ, ಉಪಾಧ್ಯಕ್ಷೆಯಾಗಿ ಫಾತಿಮಾ ಬಾಕರ್ ಅವಿರೋಧ ಆಯ್ಕೆಯಾಗುವ ಮೂಲಕ ನಗರಸಭೆಯ ಗದ್ದುಗೆ ಕಾಂಗ್ರೆಸ್ ಪಾಲಾಗಿದೆ.ನಗರದ ಅಭಿವೃದ್ಧಿ ದೃಷ್ಠಿಯಿಂದ ಉತ್ತಮ ಕೆಲಸಗಳು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ನಿರ್ವಹಿಸಿಕೊಂಡು ಹೋಗಬೇಕು.ಆ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು.

ಕಾಂಗ್ರೆಸ್ ಮುಖಂಡ ಶಿವಾನಂದ ಪಾಟೀಲ ಮರತೂರ ಮಾತನಾಡಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕಾಂಗ್ರೆಸ್‍ನ ಚಂಪಾಬಾಯಿ ರಾಜು ಮೇಸ್ತ್ರಿ ಉಪಾಧ್ಯಕ್ಷೆಯಾಗಿ ಫಾತಿಮಾ ಬಾಕರ್ ಆಯ್ಕೆಯಾಗಿದಕ್ಕೆ ಶುಭಾಶಯಗಳನ್ನು ಕೋರಿದರು.ಅಲ್ಲದೇ ನಗರಸಭೆಯ ಆಡಳಿತದ ಚುಕ್ಕಾಣಿಯನ್ನು ಸರಿಯಾಗಿ ನಡೆಸಿ.ಮೂಲಭೂತ ಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಬೇಕು.ಬಂದ ಅನುದಾನವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡುವ ಮೂಲಕ ಮಾದರಿ ನಗರವನ್ನಾಗಿ ಮಾಡುವ ಸಂಕಲ್ಪ ತೊಡಬೇಕು.ಅದಕ್ಕೆ ಎಲ್ಲರ ಸಹಕಾರದಲ್ಲಿ ಅಭಿವೃದ್ಧಿ ಕಾರ್ಯಗಳು ಮುನ್ನಡೆಸಿಕೊಂಡು ಹೋಗಬೇಕೆಂದು ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ರೇವುನಾಯಕ ಬೆಳಮಗಿ, ಕೂಡಾ ಅಧ್ಯಕ್ಷ ಮಜ್ಜರ್ ಅಲಂ ಖಾನ್, ವಿಜಯಕುಮಾರ ಮುಟ್ಟತ್ತಿ, ಮೃತ್ಯುಂಜಯ್ ಹಿರೇಮಠ,ಶರಣಗೌಡ ಪಾಟೀಲ ಗೋಳಾ(ಕೆ),ಸುರೇಶ ನಾಯಕ, ಮಾಣಿಕ್‍ಗೌಡ, ಲಕ್ಷ್ಮಿಬಾಯಿ ಕುಸಾಳೆ,ಸಾಬೇರಾಬೇಗಂ, ಕಿರಣ ಚವ್ಹಾಣ,ನಾಗಣ್ಣ ರಾಂಪೂರೆ,ನಾಗರಾಜ ಸಿಂಘೆ, ಫಜಲ್ ಪಟೇಲ್,ಸೂರ್ಯಕಾಂತ ಕೋಬಾಳ, ಡಾ.ಅಹ್ಮದ್ ಪಟೇಲ್,ತಿಪ್ಪಣ್ಣ ನಾಟೇಕಾರ, ರಾಜೇಶ ಯನಗುಂಟಿಕರ್,ಮಹ್ಮದ್ ಬಾಕರ್, ರಾಜ ಮಹ್ಮದ್ ರಾಜಾ,ಹಾಷಮ್ ಖಾನ, ರಮೇಶ ಪವಾರ,ನಾಗೇಂದ್ರ ನಾಟೇಕಾರ,ಶಂಕರ ಕುಸಾಳೆ,ಮಹ್ಮದ್ ಅಜರ್ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

4 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

5 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

5 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

5 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

6 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420