ಶಿಸ್ತು ಮತ್ತು ದಕ್ಷತೆಯಿಂದ ಉತ್ತಮ ಭವಿಷ್ಯ

ಕಲಬುರಗಿ: ಬದುಕಿನಲ್ಲಿ ಮುಂದೆ ಬರಬೇಕಾದರೆ ಒಳ್ಳೆ ಭವಿಷ್ಯ ಕಾಣಬೇಕಾಗಿದ್ದರೆ ನೀವು ನಿಷ್ಠೆ, ಪರಿಶ್ರಮ ಮತ್ತು ಸಂಕಲ್ಪ ಹೊಂದಿರಬೇಕು. ಕೇವಲ ಪದವಿಗಾಗಿ ಓದುವುದನ್ನು ಮಾಡದೆ ಓದಿನಲ್ಲಿ ವಿನೂತನ ಶೈಲಿ ಮತ್ತು ಉತ್ತಮ ಕ್ರಮಗಳನ್ನು ಅನುಸರಿಸಬೇಕೆಂದು ನಗರ ಪೋಲಿಸ್ ಆಯುಕ್ತರಾದ ಡಾ. ಶರಣಪ್ಪ ಎಸ್. ಡಿ. ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಅವರು ಇಂದು ಇಲ್ಲಿನ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿ.ಡಿ.ಎ. ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾಥಿಗಳು ಹಾಗೂ ಅವರ ಪೋಷಕರನ್ನು ಉದ್ಧೇಶಿಸಿ ಮಾತನಾಡಿದರು.

ಅವರು ತಾವು ಪಟ್ಟ ಪರಿಶ್ರಮ ಮತ್ತು ಕಾರ್ಯದಕ್ಷತೆಯನ್ನು ವಿವರಿಸಿ, ಉನ್ನತ ಸ್ಥಾನದಲ್ಲಿರುವವರ ಸಾಧನೆಯ ಬಗ್ಗೆ ತಿಳಿದುಕೊಂಡು ಅವರನ್ನು ಅನುಸರಿಸಿದರೆ ತಾವೂ ಕೂಡ ಭವಿಷ್ಯದಲ್ಲಿ ಉತ್ತಮ ಸ್ಥಾನಕ್ಕೆ ಹೋಗಬಹುದೆಂದು ಹೇಳಿದರು

ಗೌರವ ಅತಿಥಿಗಳಾದ ಆಗಮಿಸಿದ ಪೂಣೆ ಮೂಲದ ಕೈಗಾರಿಕೋದ್ಯಮಿ ಹಾಗೂ ಕಾಲೇಜಿನ ಹಳೆಯ ವಿದ್ಯಾರ್ಥಿಯಾದ ಗುರುನಾಥ ಕುಲಕರ್ಣಿ ಅವರು ಮಾತನಾಡುತ್ತ ಪಿ.ಡಿ.ಎ. ಕಾಲೇಜು ಇಲ್ಲಿಯವರೆಗೆ ಉತ್ತಮ ಇಂಜಿನಿಯರುಗಳನ್ನು ತಯ್ಯಾರಿಸಿ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಅವರು ಮಿಂಚುವಂತೆ ಮಾಡಿದೆ. ಇಂತಹ ಕಾಲೇಜು ಈ ಭಾಗದಲ್ಲಿರುವುದ ನಮ್ಮ ಸುದೈವ. ಕಲ್ಯಾಣ ಕರ್ನಾಟಕ ಭಾಗದ ಸಾಕಷ್ಟು ಯುವಜನ ಇಂದು ಉತ್ತಮ ಭವಿಷ್ಯವನ್ನು ಪಡೆದಿದ್ದಾರೆ. ನಿಮ್ಮ ಶೈಕ್ಷಣಿಕ ಪಠ್ಯಕ್ರಮದ ಜೊತೆ ಪ್ರಸ್ತುತ ತಂತ್ರಜ್ಞಾನ ಮತ್ತು ವಿವಿಧ ರಾಷ್ಟ್ರಗಳ ಭಾಷೆಗಳನ್ನು ಕೂಡ ಕರಗತ ಮಾಡಿಕೊಳ್ಳುವುದು ಅವಶ್ಯಕವಾಗಿದೆ ಎಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆವಹಿಸಿದ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅದ್ಯಕ್ಷ ಮತ್ತು ವಿಧಾನ ಪರಿಷತ ಸದಸ್ಯರಾದ ಶಶೀಲ ಜಿ. ನಮೋಶಿಯವರು ಮಾತನಾಡುತ್ತ ವಿದ್ಯಾರ್ಥಿಗಳ ಉತ್ತಮ ವ್ಯಾಸಂಗ, ಹಾಗೂ ಉತ್ತಮ ಭವಿಷ್ಯವನ್ನು ಗುರಿಯಾಗಿಟ್ಟುಕೊಂಡು ನಾವು ಪಿ.ಡಿ.ಎ ಕಾಲೇಜಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿಕೊಂಡಿದ್ದು ಅದಕ್ಕಾಗಿ ಬೇಕಾಗುವಂತಹ ಆಧುನಿಕ ಪಿಠೋಪಕರಣ ಮತ್ತು ಯಂತ್ರೋಪಕರಣಗಳ ವ್ಯವಸ್ಥಕೂಡ ಮಾಡಿಕೊಡಲಾಗಿದೆ. ಶೈಕ್ಷಣಿಕ ಮಟ್ಟ ಸುಧಾರಿಸಲು ಹಾಗೂ ಪ್ರಸ್ತುತ ತಂತ್ರಜ್ಞಾನವನ್ನು ರೂಢಿಸಿಕೊಳ್ಳಲು ಸೆಂಟರ್ ಆಫ್ ಎಕ್ಸಲೆನ್ಸ ಮುಖಾಂತರ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಲಾಗುವುದು ಮತ್ತು ಅವರಿಗೆ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಸಮಾರಂಭದಲ್ಲಿ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಬಿ. ಭೀಮಳ್ಳಿ, ಆಡಳಿತ ಮಂಡಳಿ ಸದಸ್ಯರಾದ ಅರುಣಕುಮಾರ ಎಮ್. ಪಾಟೀಲ, ಡಾ. ಶರಣಬಸಪ್ಪಾ ಹರವಾಳ, ಡಾ. ಅನೀಲಕುಮಾರ ಪಟ್ಟಣ, ಡಾ. ಮಹಾದೇವಪ್ಪ ರಾಂಪೂರೆ, ಸಾಯಿನಾಥ ಪಾಟೀಲ, ಡಾ. ಕಿರಣ ದೇಶಮುಖ, ನಾಗಣ್ಣ ಘಂಟಿ, ನಿಶಾಂತ ಎಲಿ, ಡಾ. ಶಿವಾನಂದ ಮೇಳಕುಂದಿ ಅವರು ಉಪಸ್ಥಿತರಿದ್ದರು.

ಪಿ.ಡಿ.ಎ. ಕಾಲೇಜಿನ ಪ್ರಾಚಾರ್ಯರಾದ ಡಾ. ಎಸ್. ಆರ್. ಪಾಟೀಲ ಪ್ರಾಸ್ತವಿಕ ಭಾಷಣ ಮಾಡಿ ಎಲ್ಲರಿಗೂ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಅವರು ಕಾಲೇಜಿನ ಸಂಪೂರ್ಣ ಮಾಹಿತಿಯನ್ನು ಕೂಡ ಒದಗಿಸಿದರು. ಸಮಾಂರಂಭದ ಸಂಚಾಲಕರಾದ ಪ್ರೊ. ಜಯಪ್ರಕಾಶ ಕ್ಷಿರಸಾಗರ ಕಾರ್ಯಕ್ರಮದ ಉದ್ಧೇಶವನ್ನು ವಿವರಿಸಿದರು. ಪ್ರಥಮ ವರ್ಷದ ಸಂಯೋಜಕರಾದ ಡಾ. ಅಮರೇಶ್ವರಿ ಪಾಟೀಲ ವಂದಿಸಿದರು. ಕಾರ್ಯಕ್ರಮವನ್ನು ಡಾ. ಸುಜಾತಾ ಪಾಟೀಲ ನಿರೂಪಿಸಿದರು.

ಸಮಾರಂಭದಲ್ಲಿ ಮಹಾವಿದ್ಯಾಲಯದ ಡಾ. ಎಸ್. ಆರ. ಹೊಟ್ಟಿ, ಉಪ-ಪ್ರಾಚಾರ್ಯ(ಶೈಕ್ಷಣಿಕ) ಮತ್ತು ಡಾ. ಭಾರತಿ ಹರಸೂರ ಉಪ-ಪ್ರಾಚಾರ್ಯ(ಆಡಳಿತ), ವಿಭಾಗಗಳ ಮುಖ್ಯಸ್ಥರು, ಪರೀಕ್ಷಾ ನಿಯಂತ್ರಣಾಧಿಕಾರಿಗಳು, ಡೀನ್‍ರು, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂಧಿಗಳು ಉಪಸ್ಥಿತರಿದ್ದರು.

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

5 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

5 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

5 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

5 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

6 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420