ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಸಂಜೆ ತಮ್ಮ ಹುಟ್ಟು ಹಬ್ಬವನ್ನು ಕಲಬುರಗಿ ನಗರದ ಆಳಂದ ನಾಕಾ ರಸ್ತೆಯಲ್ಲಿರುವ ರಾಜ್ಯ ಮಹಿಳಾ ನಿಲಯದ ನಿವಾಸಿಗಳು, ಬಾಲಕಿಯರ ಬಾಲ ಮಂದಿರ ಹಾಗೂ ಬುದ್ಧಿಮಾಂದ್ಯ ಬಾಲಕಿಯರ ಬಾಲ ಮಂದಿರದ ಮಕ್ಕಳೊಂದಿಗೆ ಆಚರಿಸಿಕೊಂಡರು.
ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಅದನ್ನು ಎಲ್ಲಾ ಮಕ್ಕಳಿಗೆ ವಿತರಿಸಿದರು. ತಮ್ಮ ಹುಟ್ಟು ಹಬ್ಬ ಆಚರಿಸಿಕೊಳ್ಳುವುದಕ್ಕೆ ಜಿಲ್ಲೆಯ ದಂಡಾಧಿಕಾರಿಗಳೆ ತಮ್ಮ ನಿಲಯಕ್ಕೆ ಬಂದಿರುವುದನ್ನು ಕಂಡ ಮಕ್ಕಳು ಮತ್ತು ನಿವಾಸಿಯಲ್ಲಿ ಎಲ್ಲಿಲ್ಲದ ಸಂಭ್ರಮ ಮನೆ ಮಾಡಿತ್ತು. ಮಕ್ಕಳು ಹೆಜ್ಜೆ ಹಾಕಿ ಸಂಭ್ರಮಪಟ್ಟಿದಲ್ಲದೆ ಡಿ.ಸಿ. ಜೊತೆ ಗ್ರೂಪ್ ಫೋಟೊ ತೆಗೆಸಿಕೊಂಡರು.
ಇದೇ ಸಂದರ್ಭದಲ್ಲಿ ನಿಲಯದ ನಿವಾಸಿಯೊಬ್ಬರು ತಾವು ಬಿಡಿಸಿದ ಕೃಷ್ಣನ ಚಿತ್ರವನ್ನು ಜಿಲ್ಲಾಧಿಕಾರಿಗಳಿಗೆ ಹುಟ್ಟು ಹಬ್ಬದ ಉಡುಗೊರೆಯಾಗಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಥೋಡ್, ಮಹಿಳಾ ಅಭಿವೃದ್ಧಿ ಅಧಿಕಾರಿ ಶರಣಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ್, ಬುದ್ಧಿಮಾಂದ್ಯ ಬಾಲಕಿಯರ ಬಾಲ ಮಂದಿರ ಶಾಲೆಯ ಅಧೀಕ್ಷಕಿ ಜ್ಯೋತಿ ಬೊಮ್ಮನಗಿ, ಬಾಲಕಿಯರ ಬಾಲ ಮಂದಿರದ ಅಧೀಕ್ಷಕಿ ಶಾಂತಾಬಾಯಿ, ರಾಜ್ಯ ಮಹಿಳಾ ನಿಲಯದ ಅಧೀಕ್ಷಕಿ ಅನುರಾಧ ಪಾಟೀಲ ಸೇರಿದಂತೆ ಇತರೆ ಸಿಬ್ಬಂದಿಗಳು ಇದ್ದರು.
ಬಸವಕಲ್ಯಾಣ: ವಿಕಲಚೇತನರು ತಮ್ಮ ಅಂಗವಿಕಲತೆ ಬಗ್ಗೆ ಅಗೌರವ ತಾಳಲಾರದೇ,ಅನುಕಂಪ ತೋರಿಸದೇ ಸ್ವ ಪ್ರತಿಭೆ ಹೊಂದಿದ ಅವರಿಗೆ ಮೂಲಭೂತ ಸೌಲಭ್ಯ ಗಳನ್ನು…
ಕಲಬುರಗಿ: ಸ್ಥಾಪಿತ ಸಿದ್ಧಾಂತ ಹೊಡೆದು ಹಾಕಿ ಅವೈದಿಕ ವಚನ ಸಾಹಿತ್ಯವನ್ನು ಜನಮಾನಸಕ್ಕೆ ಮುಟ್ಟಿಸಿದ ಡಾ.ಎಂ.ಎಂ.ಕಲಬುರ್ಗಿ ಯವರು ಸತ್ಯದ ಸಂಶೋಧಕರಾಗಿದ್ದರು ಎಂದು…
ಕಲಬುರಗಿ; ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಹಣಿಗೆ ಆಧಾರ್ ಜೋಡಣೆ ಮತ್ತು ಸರ್ಕಾರಿ ಜಮೀನುಗಳ ಸಂರಕ್ಷಣೆಯ ಲ್ಯಾಂಡ್ ಬೀಟ್ ಅಪ್ಲಿಕೇಶನ್ ನಲ್ಲಿ…
ಸುರಪುರ: ಹಿಂದಿನ ಕಾಲದಲ್ಲಿ ಅನೇಕ ಜನ ರಾಜರು ಸ್ವತಃ ತಾವೇ ಪಾರಂಪರಿಕ ವೈದ್ಯರಾಗಿದ್ದು ಬೇಟೆಗೆ ಹೋದ ಸಂದರ್ಭದಲ್ಲಿ ತಾವೇ ಮದ್ದು…
ಸುರಪುರ: ಸಾರ್ವಜನಿಕರು ತಮ್ಮ ಕೆಸಲ ಕಾರ್ಯಗಳಿಗಾಗಿ ಕಚೇರಿಗೆ ಬಂದಾಗ ವಿಳಂಬ ಮಾಡದೆ ನ್ಯಾಯಯುತವಾದ ಅರ್ಜಿಗಳ ಕೆಲಸ ಮಾಡಿಕೊಡುವಂತೆ ಕರ್ನಾಟಕ ಲೋಕಾಯುಕ್ತ…
ರಾಯಚೂರು; ವಿಶ್ವವಿದ್ಯಾಲಯದ ಆಡಳಿತ ವಿಭಾಗದ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ ಡಾ.ಶಂಕರ ವ್ಹಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಹಾಪರ…