ಬೆಳಂ‌ ಬೆಳಗ್ಗೆ ಕಲಬುರಗಿಯಲ್ಲಿ ಗುಂಡಿನ‌ ಸದ್ದು

0
93

ಕಲಬುರಗಿ: ಆಳಂದ ತಾಲ್ಲೂಕಿನ ಮಾಜಿ ಗ್ರಾಪಂ ಸದಸ್ಯನ ಕೊಲೆ ಪ್ರಕರಣಕ್ಕೆ ಸಂಭವಿಸಿದ ಆರೋಪಿಯನ್ನು ಬಂಧಿಸಲು ತೆರಳುದ ಸಂಧರ್ಭದಲ್ಲಿ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿರುವ ವೇಳೆ ಆತ್ಮರಕ್ಷಣೆಗಾಗಿ ಪಿಎಸ್ಐ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಆಳಂದ ತಾಲೂಕಿನ ಮಾಡಿಯಾಳ ಗ್ರಾಮದ ಬಳಿ ನಡೆದಿದೆ.

ಆರೋಪಿ‌ ಲಕ್ಷ್ಮಣ ಪೂಜಾರಿ ಹಿತ್ತಲಸೀರೂರು (45) ಬಂಧಿತ ಆರೋಪಿ. ಪಿಎಸ್ಐ ಇಂದುಮತಿ ಅವರ ಮೇಲೆ ಧಾಳಿ ನಡೆಸಲು ಯತ್ನಿಸಿದ ವೇಳೆ ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿ ನಂತರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Contact Your\'s Advertisement; 9902492681

ಇತ್ತೀಚೆಗೆ ಆಳಂದ ತಾಲ್ಲೂಕಿನ ಮಾಜಿ ಗ್ರಾ.ಪಂ ಸದಸ್ಯ ವಿಶ್ವನಾಥ್ ಜಮಾದರ ಮೇಲೆ ಗುಂಡು‌ಹಾರಿಸಿ ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಲಕ್ಷ್ಮಣ ಪೂಜಾರಿ ಹಿತ್ತಲಸೀರೂ ಕೊಲೆ ಮಾಡಿ ತಲೆ ಮರಿಸಿಕೊಂಡಿರುವ ಬಗ್ಗೆ ಶುಕ್ರವಾರ ಪೊಲೀಸರಿಗೆ ಖಚಿತ ಮಾಹಿತಿ ಸಿಕ್ಕಿತು.

ಶನಿವಾರ ಬೆಳಿಗ್ಗೆ ಆರೋಪಿ ಬಂಧನಕ್ಕೆ ಪೊಲೀಸರು ಮುಂದಾಗಿರುವ ವೇಳೆ ಪೊಲೀಸರಿಂದ ಪೈರಿಂಗ್ ನಡೆದಿದೆ. ಆರೋಪಿ ಲಕ್ಷ್ಮಣ ಪೂಜಾರಿ ವಿರುದ್ಧ 11 ಕೇಸ್​ಗಳಿವೆ ಎಂದು ತಿಳಿದುಬಂದಿದೆ. ಫೈರಿಂಗ್ ಒಳಗಾದ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here