ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು; ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು ವಾಕ್ ಸ್ವಾತಂತ್ರ್ಯ ನಮಗೆ ನಮ್ಮ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯ. ಸಂವಿಧಾನದ ಮೂರು ಅಂಗಗಳಿಗೆ ಅಪಾಯ ಬಂದರೆ ಸಮಾಜಕ್ಕೆ ಅಪಾಯ ಬಂದಂತೆ. ವಾಕ್ ಸ್ವಾತಂತ್ರ್ಯ ಆಚರಿಸುವ ಪತ್ರಿಕಾ ರಂಗಕ್ಕೆ ಯಾವ ನಿಬರ್ಂಧಗಳೂ ಇರಬಾರದು ಎನ್ನುವುದನ್ನು ಪಂಡಿತ್ ನೆಹರೂ ಅವರೂ ಬಹಳ ಒತ್ತಿ ಹೇಳಿದ್ದರು ಎಂದು ವಿವರಿಸಿದರು.

ಸುಳ್ಳು ಸುದ್ದಿಗಳ ಅನಾಹುತಗಳಿಗೆ ಉದಾಹರಣೆ ನೀಡಿದ ಮುಖ್ಯಮಂತ್ರಿಗಳು, “ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿಗಳು ಆಡಿದ ಮಾತನ್ನು ನಾನು ಉದಾಹರಿಸಿದ್ದೆ. ” ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ” ಎಂದು ಹಿಂದಿನ ಮುಖ್ಯಮಂತ್ರಿ ಅವರು ಸದನದಲ್ಲೇ ಹೇಳಿದ್ದರು. ಈ ಮಾತನ್ನು ನಾನು ಉದಾಹರಿಸಿದ್ದೆ. ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ನಾನೇ ಆ ಮಾತು ಹೇಳಿದ್ದಾಗಿ ನಕಲಿ ಸುದ್ದಿ ಸೃಷ್ಟಿಸಿ, ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೆರೆಸಿ ತಪ್ಪು ಸಂದೇಶ ಹರಡಿದರು. ಇದರಿಂದ ನಷ್ಟ ಆಗಿದ್ದು ಸಮಾಜಕ್ಕೇ ಹೊರತು ನನಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ನಾವು ಕಾನೂನು ಮಾಡಿದ್ದೇವೆ. ಆದರೆ ಕೇವಲ ಕಾನೂನಿನಿಂದ ಮಾತ್ರ ಫೇಕ್ ನ್ಯೂಸ್ ತಡೆಯಲು ಸಾಧ್ಯವಿಲ್ಲ. ಇಡೀ ಸಮಾಜ ಇದರ ವಿರುದ್ಧ ಧ್ವನಿ ಎತ್ತಿದರೆ ಮಾತ್ರ ಸಾಧ್ಯ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಗ್ಯಾರಂಟಿ ಅನುμÁ್ಠನ ಸಮಿತಿಯ ಪುμÁ್ಪ ಅಮರನಾಥ್, ಶಾಸಕರಾದ ರವಿಶಂಕರ್, ತನ್ವೀರ್ ಸೇಠ್, ನ್ಯೂಸ್ ಫಸ್ಟ್ ಸಿಇಒ ರವಿಕುಮಾರ್ ಉಪಸ್ಥಿತರಿದ್ದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ದೀಪಕ್, ಕಾರ್ಯದರ್ಶಿ ರವಿ ಪಾಂಡವಪುರ ಸೇರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

emedialine

Recent Posts

ಮುನಿರತ್ನರ ಶಾಸಕ ಸ್ಥಾನ ರದ್ದಪಡಿಸಲು ಸಿಪಿಐಎಂ ಕೆ. ನೀಲಾ ಆಗ್ರಹ

ಕಲಬುರಗಿ: ಜಾತಿ ಹಾಗೂ ಮಹಿಳಾ ನಿಂದನೆ ಗಂಭೀರ ಸ್ವರೂಪದ್ದಾಗಿರುವಾಗಲೆ, ಹನಿಟ್ರ್ಯಾಪ್ ಜೀವ ವಿರೋಧಿ ಏಡ್ಸ್ ರೋಗಹರಡುವ ದುಷ್ಖೃತ್ಯದ ಆರೋಪದಲ್ಲಿ ಜೈಲು…

1 hour ago

ಗುರುಗಳಾದವರು ಸಮಾಜಕ್ಕೆ ಭಾರವಾಗದೆ ಬೆಳಕಾಗಬೇಕು: ನಿಡುಮಾಮಿಡಿ ಶ್ರೀ

ಕಲಬುರಗಿ: ಬಸವಾದಿ ಶರಣರ ಪರಂಪರೆ, ಬಸವತತ್ವ ಪರಿಪಾಲನೆಯಲ್ಲಿ ಸುಲಫಲ ಮಠದ ಕೊಡುಗೆ ಅನನ್ಯವಾಗಿದೆ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ…

1 hour ago

ಕನ್ನಡ ಜನಾಂದೋಲನದ ಭಾಷೆಯಾಗಿ ಬೆಳೆಯಬೇಕು: ಡಾ. ಪುರುಷೋತ್ತಮ ಬಿಳಿಮಲೆ

ಕಲಬುರಗಿ: ಸಾಮರಸ್ಯವೆಂದರೆ ಕೇವಲ ಹಿಂದು ಮುಸ್ಲಿಂ ಅಷ್ಟೇ ಅಲ್ಲ. ಅಲ್ಲಿ ಕೆಳ,‌ಮಧ್ಯಮ, ಮೇಲ್ವರ್ಗ ಇರುವಂತೆ ವಿವಿಧ ಸಂಸ್ಕೃತಿಗಳು ಕೂಡ ಅಡಕವಾಗಿರುತ್ತವೆ.…

2 hours ago

ಮಹಿಳೆಯರಿಗೆ ಆರೋಗ್ಯವೆ ಭಾಗ್ಯ : ಡಾ. ಸುರೇಶ ಜಂಗೆ

ಕಲಬುರಗಿ: ಮಹಿಳೆಯರ ಆರೋಗ್ಯವು ಅನೇಕ ವಿಶಿಷ್ಟ ರೀತಿಯಲ್ಲಿ ಪುರುಷರ ಆರೋಗ್ಯಕ್ಕಿಂತ ಭಿನ್ನವಾಗಿದೆ. ಹೀಗಾಗಿ ಎಲ್ಲಾ ಮಹಿಳೆಯರಿಗೆ ಆರೋಗ್ಯವೆ ಭಾಗ್ಯ ಎಂದು…

2 hours ago

`ಕಾವ್ಯ ಸಂಸ್ಕøತಿ ಯಾನ’ ಅಧ್ಯಕ್ಷರಾಗಿ ಕವಿ ಅಂಬಲಗೆ ಆಯ್ಕೆ

ಕಲಬುರಗಿ: ಕಲಬುರಗಿಯಲ್ಲಿ ನಡೆಯಲಿರುವ `ಕಾವ್ಯ ಸಂಸ್ಕೃತಿ ಯಾನ'ದ  ಸರ್ವಾಧ್ಯಕ್ಷರಾಗಿ ಹಿರಿಯ ಕವಿ ಡಾ.ಕಾಶೀನಾಥ ಅಂಬಲಗಿ ಅವರು ಆಯ್ಕೆಯಾಗಿದ್ದಾರೆ ಎಂದು ಆಯೋಜಕರಾದ…

5 hours ago

ದೇಶವನ್ನು ಮುಂಚೂಣಿಯಲ್ಲಿ ತರಲು ಪ್ರತಿಯೊಬ್ಬ ನಾಗರಿಕರ ಸಹಕಾರ ಅತ್ಯಗತ್ಯ: ರಾಜ್ಯಪಾಲರು

ಮುಂಬೈ; ನಮ್ಮ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ವೇಗದಲ್ಲಿ ಸಾಗುತ್ತಿದೆ, ಮುಂಬರುವ ವರ್ಷಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420